ಡೊನಾಲ್ಡ್ ಟ್ರಂಪ್ ಜೊತೆ ಮುಕೇಶ್ ಅಂಬಾನಿ, ನೀತಾ ಅಂಬಾನಿ ದಂಪತಿ; ಫೋಟೋ ಭಾರೀ ವೈರಲ್
Donald Trump: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಇಂದು (ಜನವರಿ 20) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಅದ್ಧೂರಿ ಸಮಾರಂಭದಲ್ಲಿ ಹಲವು ರಾಷ್ಟ್ರಗಳ ಗಣ್ಯರು ಭಾಗಿ ಆಗಲಿದ್ದಾರೆ. ಭಾರತದಿಂದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ & ನೀತಾ ಅಂಬಾನಿ ದಂಪತಿ ಅವರು ಪಾಲ್ಗೊಳಲಿದ್ದಾರೆ. ಈಗಾಗಲೇ ನಿನ್ನೆ ಈ ದಂಪತಿ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಗಮನ ಸೆಳೆದಿದ್ದಾರೆ. ಈ ಪೋಟೋಗಳು ಇದೀಗ ಭಾರೀ ವೈರಲ್ ಆಗುತ್ತಿವೆ.
ಇಂದು (ಜನವರಿ 20) ಅಮೆರಿಖಾದ ಕಾಲಮಾನದ ಪ್ರಕಾರಣ ಮಧ್ಯಾಹ್ನ 12 ಗಂಟೆಗೆ ಟ್ರಂಪ್ ಅವರು ಅಮೆರಿಕಾ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮ ಯುಎಸ್ನ ಪಶ್ಚಿಮ ಮುಂಭಾಗದಲ್ಲಿ ನಡೆಯಲಿದೆ. ವಾಷಿಂಗ್ಟನ್ ಡಿಸಿಯಲ್ಲಿ ಅದ್ಧೂರಿ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇಂದು ನಡೆಯಲಿರುಬವ ಟ್ರಂಪ್ ಪ್ರಮಾಣ ವಚನ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳಲು ಭಾರತದ ಖ್ಯಾತ ಉದ್ಯಮಿಯಾದ ಮುಕೇಶ್ ಮತ್ತು ನೀತಾ ಅಂಬಾನಿ ದಂಪತಿಗೆ ವಿಶೇಷ ಆಹ್ವಾನ ನೀಡಲಾಗಿತ್ತು. ಅದರಂತೆಯೇ ಅವರು ಈಗಾಗಲೇ ಟ್ರಂಪ್ ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕಾ ಅಧ್ಯಕ್ಷರಾಗಿ ಟ್ರಂಪ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಂಬಾನಿ ದಂಪತಿ ಜನವರಿ 19ರಂದೇ ವಾಷಿಂಗ್ಟನ್ ಡಿಸಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಟ್ರಂಪ್ ಔತಣಕೂಟದ ಸಮಯದಲ್ಲಿ ಎಸ್ಟೇಟ್ ಉದ್ಯಮಿ ಕಲ್ಪೇಶ್ ಮೆಹ್ತಾ ದಂಪತಿಗಳೊಂದಿಗೆ ಅಂಬಾನಿ ದಂಪತಿ ಕಾಣಿಸಿಕೊಂಡಿರುವ ಫೋಟೋಗಳು ಇದೀಗ ಸಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ. ಈ ಫೋಟೋದಲ್ಲಿ ಮುಕೇಶ್ ಅಂಬಾನಿ ಕಪ್ಪು ಸೂಟ್ ಧರಿಸಿದ್ದರೆ, ನೀತಾ ಅಂಬಾನಿ ಓವರ್ ಕೋಟ್ ಮತ್ತು ಪಚ್ಚೆಯೊಂದಿಗೆ ಕಪ್ಪು ಸೀರೆಯನ್ನು ಧರಿಸಿರುವುದು ಕಂಡುಬಂದಿದೆ.
#WATCH | US: At the Private Reception in Washington, Reliance Industries Chairman Mukesh Ambani & Founder & Chairperson of Reliance Foundation, Nita Ambani congratulated President-elect Donald Trump ahead of his swearing-in ceremony
— ANI (@ANI) January 19, 2025
The swearing-in ceremony of President-elect… pic.twitter.com/rWIpw19ou4
ಇನ್ನು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಅಂಬಾನಿ ದಂಪತಿ ಸೇರಿದಂತೆ ಪ್ರಮುಖ ಉದ್ಯಮಿಗಳು, ಎಲೋನ್ ಮಸ್ಕ್, ಜೆಫ್ ಬೆಜೋಸ್, ಮಾರ್ಕ್ ಜುಕರ್ಬರ್ಗ್ ಮತ್ತು ಫ್ರೆಂಚ್ ಬಿಲಿಯನೇರ್ ಕ್ಸೇವಿಯರ್ ನೀಲ್, ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್, ಮಾಜಿ ಅಧ್ಯಕ್ಷರಾದ ಜಾರ್ಜ್ ಡಬ್ಲ್ಯೂ ಬುಶ್, ಬರಾಕ್ ಒಬಾಮಾ, ಬಿಲ್ ಕ್ಲಿಂಟನ್ ಅವರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications