ಅಮೆರಿಕಾ: ರಿಪಬ್ಲಿಕನ್ ಪಕ್ಷದ ಸಂಸತ್ ಸದಸ್ಯನನ್ನು ಗುಂಡಿಕ್ಕಿ ಹತ್ಯೆ
ಅಲೆಕ್ಸಾಂಡ್ರಿಯಾದಲ್ಲಿ ಅಭ್ಯಾಸ ನಿರತ ಬೇಸ್ ಬಾಲ್ ತಂಡದ ಮೇಲೆ ಗುಂಡಿನ ದಾಳಿ. ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ. ಘಟನೆಯಲ್ಲಿ ಐವರು ಬೇಸ್ ಬಾಲ್ ಆಟಗಾರರು ಗಾಯಗೊಂಡಿರುವ ಶಂಕೆ.
ವಾಷಿಂಗ್ಟನ್, ಜೂನ್ 13: ಅಮೆರಿಕದ ವರ್ಜೀನಿಯಾದ ಅಲೆಕ್ಸಾಂಡ್ರಿಯಾ ಪಟ್ಟಣದಲ್ಲಿ ಅಭ್ಯಾಸ ನಿರತ ಬೇಸ್ ಬಾಲ್ ತಂಡವೊಂದರ ಆಟಗಾರರ ಮೇಲೆ ನಡೆದ ಹಠಾತ್ ಗುಂಡಿನ ದಾಳಿಯಲ್ಲಿ ಲೂಸಿಯಾನದಿಂದ ರಿಪಬ್ಲಿಕನ್ ಪಕ್ಷದಿಂದ ಅಮೆರಿಕದ ಸಂಸತ್ತಿಗೆ ಆಯ್ಕೆಯಾಗಿದ್ದ ಸ್ಟೀವ್ ಸ್ಕಾಲಿಸ್ ಸಾವನ್ನಪ್ಪಿದ್ದಾರೆ.
ಗುಂಡಿನ ದಾಳಿಯಲ್ಲಿ ಸ್ಕಾಲಿನ್ ಸಾವನ್ನಪ್ಪಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ದಾಳಿಕೋರನನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಲೂಸಿಯಾನದಿಂದ ರಿಪಬ್ಲಿಕನ್ ಪಕ್ಷದಿಂದ ಅಮೆರಿಕದ ಸಂಸತ್ತಿಗೆ ಆಯ್ಕೆಯಾಗಿರುವ ಸ್ಟೀವ್ ಸ್ಕಾಲಿಸ್ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆಯೆಂದು ಆತ ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 5 ಆಟಗಾರರು ಗಾಯಗೊಂಡಿರಬಹುದೆಂದು ಶಂಕಿಸಲಾಗಿದೆ.
ಇ. ಮೊರ್ನೆ ಸ್ಟ್ರೀಟ್ ನಲ್ಲಿರುವ ಮೈದಾನದಲ್ಲಿ ಆಟಗಾರರು ಆಡುತ್ತಿದ್ದ ವೇಳೆ ಎಲ್ಲಿಂದಲೋ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬ ತಾನು ತಂದಿದ್ದ ರೈಫಲ್ ನಿಂದ ಗುಂಡಿನ ದಾಳಿ ನಡೆಸಿದ್ದಾನೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಗುಂಡಿನ ಸದ್ದು ಕೇಳಿ ಮೈದಾನದ ಹತ್ತಿರದಲ್ಲೇ ಇದ್ದ ಮೂವರು ಪೊಲೀಸ್ ಅಧಿಕಾರಿಗಳು ಮೈದಾನದ ಕಡೆಗೆ ಆಗಮಿಸಿದ್ದಾರೆ. ಆದರೆ, ಅವರು ಕಾರ್ಯಾಚರಣೆಗೆ ತೊಡಗುವ ಮೊದಲೇ ಬಂದೂಕುಧಾರಿ ಅವರ ಮೇಲೂ ಗುಂಡಿನ ದಾಳಿ ನಡೆಸಿದ. ಆದರೆ, ಪೊಲೀಸರು ಇದರಿಂದ ತಪ್ಪಿಸಿಕೊಂಡರು. ನಂತರದ ಕಾರ್ಯಾಚರಣೆಯಲ್ಲಿ ದಾಳಿಕೋರನನ್ನು ಬಂಧಿಸಿದರು.
ಟ್ರಂಪ್ ಖೇದ: ಘಟನೆಯ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಘಟನೆಯಿಂದ ತೀವ್ರ ಆಘಾತವಾಗಿದ್ದು, ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲಾಗುತ್ತಿದೆ ಎಂದು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications