ಪಾಕಿಸ್ತಾನ್ ಉಗ್ರರಿಗೆ ಇವನೇ ಅನ್ನ-ನೀರು ಕೊಡುವುದು
ದೆಹಲಿ, ಡಿಸೆಂಬರ್.11: ಬೆಂಕಿಯ ಜ್ವಾಲೆ ತನ್ನ ಸುತ್ತಲಿನ ಪ್ರದೇಶವನ್ನು ಸುಡುವ ಮೊದಲು ತಾನಿರುವ ಜಾಗವನ್ನು ಸುಡುತ್ತದೆ ಎಂಬ ಮಾತಿಗೆ ಪಾಕಿಸ್ತಾನ್ ಉತ್ತಮ ಉದಾಹರಣೆ. ವಿಶ್ವದಲ್ಲಿ ಭಯೋತ್ಪಾದನೆಗೆ ಅನ್ನ-ನೀರು ನೀಡಿ ಪೋಷಿಸುತ್ತಿದೆ. ಇಂಥದೊಂದು ಗಂಭೀರ ಆರೋಪ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಕೆಟ್ಟ ಮೇಲೆ ಬುದ್ಧಿ ಬಂದಂತೆ ಕಾಣುತ್ತಿದೆ.
2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯ್ಯದ್ ನನ್ನು ಸಾಚಾ ಎನ್ನುತ್ತಿದ್ದ ಪಾಕಿಸ್ತಾನ್ ಪ್ರಪಂಚದ ಎದುರು ತಲೆ ತಗ್ಗಿಸಿ ನಿಲ್ಲುವಂತೆ ಆಗಿದೆ. ಅಂಥದೊಂದು ಮಹತ್ವದ ಆದೇಶವನ್ನು ಪಾಕಿಸ್ತಾನ ಲಾಹೋರ್ ನ ಭಯೋತ್ಪಾದನಾ ನಿಗ್ರಹ ಕೋರ್ಟ್ ಆದೇಶ ಹೊರಡಿಸಿದೆ.
ಭಾರತದಲ್ಲಿ ರಕ್ತಪಾತ ನಡೆಸಿದ ಜಮಾತ್-ಉದ್-ದವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯದ್ ಪಾಕಿಸ್ತಾನದಲ್ಲಿ ಉಗ್ರ ಸಂಘಟನೆಗಳನ್ನು ಸಾಕಿ ಸಲಹುತ್ತಿದ್ದಾನೆ ಎಂದು ಲಾಹೋರ್ ಕೋರ್ಟ್ ಹೇಳಿದೆ. ಐದು ನಕಲಿ ಕಂಪನಿಗಳ ಹೆಸರಿನಲ್ಲಿ ಉಗ್ರ ಸಂಘಟನೆಗಳಿಗೆ ಹಫೀಜ್ ಸಯ್ಯದ್ ಆರ್ಥಿಕ ನೆರವು ನೀಡುತ್ತಿದ್ದು, ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ.

ಜೆಯುಡಿ ಮುಖ್ಯಸ್ಥನ ವಿರುದ್ಧ ದೋಷಾರೋಪ
ಪಾಕಿಸ್ತಾನದ ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದ ಆರೋಪಗಳ ಪಟ್ಟಿಯಲ್ಲಿ ಸಯ್ಯದ್ ಹಫೀಜ್ ಹೆಸರನ್ನು ಸೇರ್ಪಡೆಗೊಳಿಸಲಾಗಿದೆ. ನಕಲಿ ಸಂಘ-ಸಂಸ್ಥೆಗಳ ಮೂಲಕ ಉಗ್ರರಿಗೆ ಹಾಗೂ ಉಗ್ರ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದ್ದ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಆರೋಪಿಸಲಾಗಿದೆ.

ಮುಂಬೈ ದಾಳಿಕೋರನ ಮೇಲೆ 23 ಪ್ರಕರಣ
ಸಯ್ಯದ್ ಹಫೀಜ್ ವಿರುದ್ಧ ಪಾಕಿಸ್ತಾನ್ ಪೊಲೀಸರೇ 23 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಭಯೋತ್ಪಾದನಾ ನಿಗ್ರಹ ಇಲಾಖೆಯ ಪಂಜಾಬ್ ವಿಭಾಗದ ಪೊಲೀಸರು ಕಳೆದ ಜುಲೈ.17ರಂದು ಉಗ್ರ ಸಂಘಟನೆಗಳಿಗೆ ಹಣ ಸಂದಾಯ ಮಾಡಿರುವ ಆರೋಪದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ.

ಟ್ರಸ್ಟ್ ಗಳ ಹೆಸರಿನಲ್ಲಿ ಉಗ್ರರಿಗಾಗಿ ಹಣ ಸಂಗ್ರಹ
ಲಾಹೋರ್, ಗುಜ್ರನ್ ವಾಲಾ, ಮಲ್ತಾನ್ ಪ್ರದೇಶದಲ್ಲಿ ಟ್ರಸ್ಟ್ ಹಾಗೂ ಎನ್ ಪಿಓ (NPO) ಕಂಪನಿಗಳ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ಹೀಗೆ ಸಂಗ್ರಹಿಸಿದ ಹಣವನ್ನೆಲ್ಲ ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಈ ರೀತಿಯ ನಕಲಿ ಸಂಸ್ಥೆಗಳೇ ಸಯ್ಯದ್ ಹಫೀಜ್ ನ ಬಂಡವಾಳವಾಗಿತ್ತು ಎಂದು ಶಂಕಿಸಲಾಗಿದೆ.

ನಕಲಿ ಕಂಪನಿಗಳ ಹೆಸರಿನಲ್ಲಿ ಉಗ್ರರಿಗೆ ನೆರವು
ಅಲ್-ಅನಾಫ್ ಟ್ರಸ್ಟ್, ದ್ವಾತುಲ್ ಇರ್ಷಾದ್ ಟ್ರಸ್ಟ್, ಮೌಜ್ ಬಿನ್ ಜಬಲ್ ಟ್ರಸ್ಟ್ ಹೆಸರಿನಲ್ಲಿ ಮೊದಲು ಹಣ ಸಂಗ್ರಹಿಸಲಾಗುತ್ತಿತ್ತು. ನಂತರ ಅದೇ ಹಣವನ್ನು ಉಗ್ರ ಸಂಘಟನೆ ಹಾಗೂ ಉಗ್ರ ಚಟುವಟಿಕೆಗಳಿಗೆ ನೀಡಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಲಷ್ಕರ್-ಇ-ತೊಯ್ಬಾ ಹಾಗೂ ಜಮಾತ್ ಉದ್ ದವಾ ಅಂಗಸಂಸ್ಥೆ ಆಗಿರುವ ಫಲಾಹಿ-ಇ-ಇನ್ಸಾನಿಯತ್ ಫೌಂಡೇಶನ್ ನ ಆರ್ಥಿಕ ಮೂಲ ಹಾಗೂ ಖರ್ಚು-ವೆಚ್ಚದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications