ನಾನು ಕೆಳಗಿಳಿಯಬೇಕೇ ಎಂಬ ಮಸ್ಕ್ ಪ್ರಶ್ನೆಗೆ ಉತ್ತರಿಸಿದ ಟ್ವೀಟಿಗರು: ಸಮೀಕ್ಷೆಯ ಫಲಿತಾಂಶ ಇಲ್ಲಿದೆ
ವಾಷಿಂಗ್ಟನ್, ಡಿಸೆಂಬರ್ 19: ಉದ್ಯಮಿ ಎಲಾನ್ ಮಸ್ಕ್ ಅವರು ಟ್ವಿಟರ್ ಅನ್ನು ಖರೀಧಿಸಿದ ನಂತರ ಹಲವಾರು ವಿವಾದಗಳಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ತ್ವರಿತ ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಅವರು ಮಾಡಿದ ಯತ್ನಗಳು ಹೆಚ್ಚುಕಮ್ಮಿ ಸೋತಿವೆ.
ಜಾಹೀರಾತುದಾರರು ಜಾಹೀರಾತುಗಳನ್ನು ನೀಡುತ್ತಿಲ್ಲ ಎನ್ನುವುದು ಮಸ್ಕ್ ಚಿಂತೆಗೆ ಕಾರಣವಾಗಿದೆ. ಸಾವಿರಾರು ನೌಕರರನ್ನು ಮಸ್ಕ್ ತೆಗೆದುಹಾಕಿದ್ದಾರೆ. ಟ್ವಿಟರ್ ಕಂಪನಿಯು ನಷ್ಟ ಅನುಭವಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ಭಾರತವೂ ಸೇರಿದಂತೆ ಹಲವಾರು ದೇಶಗಳ ನೌಕರರು ಟ್ವಿಟರ್ನಿಂದ ಹೊರಬಂದಿದ್ದಾರೆ. ಮಸ್ಕ್ ಅವರ ತೀರ್ಮಾನಗಳಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಹಲವು ಗಣ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳಿಂದ ಬೇಸೊತ್ತಿರುವ ಎಲಾನ್ ಮಸ್ಕ್ ಅವರು ಟ್ವಿಟರ್ನಲ್ಲಿ ಸಮೀಕ್ಷೆಯೊಂದನ್ನು ಆರಂಭಿಸಿದ್ದರು.

'ನಾನು ಟ್ವಿಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ?' ಎಂದು ಪ್ರಶ್ನೆಯೊಂದನ್ನು ಕೇಳಿದ್ದರು. ಸಮೀಕ್ಷೆಯ ಫಲಿತಾಂಶದ ಪ್ರಕಾರ ನಡೆದುಕೊಳ್ಳುವುದಾಗಿಯೂ ಅವರು ಹೇಳಿದ್ದರು.
ಈಗ ಸಮೀಕ್ಷೆ ಫಲಿತಾಂಶ ಹೊರಬಂದಿದೆ. ಮಸ್ಕ್ ಅವರ ಸಮೀಕ್ಷೆಯಲ್ಲಿ ಒಟ್ಟು 17 ಮಿಲಿಯನ್ ಮತಗಳು ಚಲಾವಣೆಯಾಗಿವೆ. ಈ ಪೈಕಿ ಶೇ.57.5ರಷ್ಟು ಮತಗಳು 'ಹೌದು' ಎಂಬುದಕ್ಕೆ ಬಿದ್ದಿವೆ. ಶೇ.42.5ರಷ್ಟು ಮತಗಳು ಅವರ ರಾಜೀನಾಮೆಗೆ ವಿರುದ್ಧವಾಗಿವೆ. ಸಮೀಕ್ಷೆಗೆ ಬದ್ಧನಾಗಿದ್ದೇನೆ ಎಂಬ ಹೇಳಿಕೆ ನೀಡಿರುವ ಮಸ್ಕ್ ಅವರ ಮುಂದಿನ ನಿರ್ಧಾರಗಳೇನು ಎಂಬುದರ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ.
ಕಳೆದ ವಾರ ಮಸ್ಕ್ ಅವರು ಜಗತ್ತಿನ ಹೆಸರಾಂತ ಪತ್ರಕರ್ತರ ಖಾತೆಗಳನ್ನು ಅಮಾನತು ಮಾಡಿದ್ದರು. ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಲಾನ್ ಮಸ್ಕ್ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧವಾಗಿ ಇದ್ದಾರೆ ಎಂದು ಟೀಕಿಸಲಾಗಿತ್ತು. ವಿಶ್ವಸಂಸ್ಥೆಯೂ ಸಹ ಈ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು.
ಇದೇ ವೇಳೆ, ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ಗಳನ್ನು ಪ್ರಮೋಟ್ ಮಾಡುವ ಲಿಂಕ್ಗಳನ್ನು ಟ್ವಿಟರ್ನಲ್ಲಿ ನಿಷೇಧಲಾಗಿದೆ ಎಂಬ ಹೊಸ ನೀತಿಯನ್ನು ಮಸ್ಕ್ ಜಾರಿಗೆ ತಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications