ಅಮೆರಿಕಾದಲ್ಲಿ ವಿದ್ಯಾರ್ಥಿನಿ ಹಿಜಬ್ ಕಿತ್ತು ಬಿಸಾಡಿದ ಸಹಪಾಠಿ
ಬುರ್ಖಾ ಧರಿಸಿ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯ ಬುರ್ಖಾವನ್ನು ಸಹಪಾಠಿಯೊಬ್ಬ ಕಳಚಿ, ಕೂದಲು ಹಿಡಿದು ಎಳೆದಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಶಿಕಾಗೋ, ನವೆಂಬರ್, 16: ಮುಸಲ್ಮಾನ ಸಮುದಾಯದ ವಿದ್ಯಾರ್ಥಿನಿಯೊಬ್ಬಳ ತಲೆವಸ್ತ್ರವನ್ನು(ಹಿಜಬ್) ಸಹಪಾಠಿಯೇ ಕಿತ್ತುಬಿಸಾಡಿದ ಘಟನೆ ಅಮೆರಿಕದ ಮಿನ್ನೆಸೋಟಾದಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿನಿಯ ಕೂದಲನ್ನೂ ಸಹ ಹಿಡಿದು ಎಳೆಯಲಾಗಿದೆ ಎಂದು ಹೇಳಲಾಗಿದೆ.
ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ನಿಯೋಜಿತ ಅಧ್ಯಕ್ಷರಾದ ನಂತರ ಬುರ್ಖಾ ಧರಿಸಿದ ಮಹಿಳೆಯರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. [ಸಿದ್ದರಾಮಯ್ಯ ಬುರ್ಖಾ ನಿಷೇಧ ಮಾಡಲಿ : ಬಿಜೆಪಿ ಸವಾಲು]
ಮಿನ್ನೆಸೋಟಾದ ಕೂನ್ ರ್ಯಾಪಿಡ್ಸ್ ಪ್ರದೇಶದಲ್ಲಿರುವ ನಾರ್ತೆಡಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆ ಖಂಡಿಸಿ ಅಮೆರಿಕನ್ ಇಸ್ಲಾಮಿಕ್ ರಿಲೇಶನ್ಸ್ ಸಂಘಟನೆ ತನಿಖೆ ನಡೆಸುವಂತೆ ಆಗ್ರಹಿಸಿದೆ.

ಈ ಕುರಿತು ಕ್ರಮ ಕೈಗೊಳ್ಳುವಂತೆ ಅನೊಕ-ಹೆನ್ನಿಪಿನ್ ಸ್ಕೂಲ್ ಡಿಸ್ಟಿಕ್ ಗೆ ಮಂಗಳವಾರ ಸಂಘಟನೆ ಮನವಿ ಮಾಡಿದೆ. ಈ ಘಟನೆಯು ಶುಕ್ರವಾರ ನಡೆದಿದೆ.
ಸಹಪಾಠಿಯೊಬ್ಬ ವಿದ್ಯಾರ್ಥಿನಿಯ ಹಿಂದೆಯೇ ಬಂದು ಹಿಜಬ್ ಅನ್ನು ಕಿತ್ತು ಹಾಕಿದ್ದಾನೆ ಮತ್ತು ಇತರೆ ವಿದ್ಯಾರ್ಥಿಗಳ ಎದುರಿಗೆ ಅವಳ ಕೂದಲನ್ನು ಹಿಡಿದು ಎಳೆದಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಸಂಘಟನೆಗೆ ವಿಷಯ ತಿಳಿಸಿದ್ದರು ಎನ್ನಲಾಗಿದೆ.
ಆದರೆ ಅನೊಕಾ- ಹೆನ್ನಿಪಿನ್ ಸ್ಕೂಲ್ ಡಿಸ್ಟಿಕ್ ಇದುವರೆಗೂ ಪ್ರಕರಣ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಸಂಘಟನೆ ಆರೋಪಿಸಿದೆ.
ಕೂಡಲೇ ಈ ಕುರಿತು ಕಠಿಣ ಕ್ರಮಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಬೇಕು ಎಂದು ಅಮೆರಿಕನ್ ಇಸ್ಲಾಮಿಕ್ ರಿಲೇಶನ್ಸ್ ಸಂಘಟನೆ ಕಾರ್ಯನಿರ್ವಾಹಕ ನಿರ್ದೇಶಕ ಹುಸೇನ್ ಹೇಳಿದ್ದಾರೆ.
ಅಮೆರಿಕ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗುತ್ತಿದ್ದಂತೆಯೇ ಹಲವು ಸಂಘಟನೆಗಳು ಟ್ರಂಪ್ ಗೆಲುವು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿದ್ದವು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications