ದಾಳಿ ಭೀತಿ: ಶ್ರೀಲಂಕಾದಲ್ಲಿ ಮುಸ್ಲಿಂ ನಿರಾಶ್ರಿತರಿಂದ ರಕ್ಷಣೆಗೆ ಮೊರೆ
ಕೊಲಂಬೋ, ಏಪ್ರಿಲ್ 25: ಈಸ್ಟರ್ ಹಬ್ಬದಂದು ನಡೆದ ಭೀಕರ ಭಯೋತ್ಪಾದನಾ ದಾಳಿಗಳ ಬಳಿಕ ಬೆದರಿಕೆ ಎದುರಿಸುತ್ತಿರುವ ನೂರಾರು ಮುಸ್ಲಿಂ ನಿರಾಶ್ರಿತರು ಅಲ್ಲಿನ ಮಸೀದಿಗಳು ಮತ್ತು ಪೊಲೀಸ್ ಠಾಣೆಗಳನ್ನು ಆಶ್ರಯಕ್ಕಾಗಿ ಆಶ್ರಯಿಸಿದ್ದಾರೆ.
ಸರಣಿ ಬಾಂಬ್ ಸ್ಫೋಟದ ಹೇಯ ಕೃತ್ಯವನ್ನು ಶ್ರೀಲಂಕಾದಲ್ಲಿನ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಮುಖಂಡರು ಖಂಡಿಸಿದ್ದಾರೆ. ಆದರೆ, ಈ ಸಮುದಾಯದ ಜನರು ತಮ್ಮ ಮೇಲೆ ಹಲ್ಲೆ ನಡೆಯಬಹುದಾದ ಆತಂಕಕ್ಕೆ ಸಿಲುಕಿದ್ದಾರೆ.
ನೆಗಾಂಬೋದಲ್ಲಿ ನೆಲೆಸಿರುವ ಅಹ್ಮದಿ ಮುಸ್ಲಿಮರು ಹಿಂದೊಮ್ಮೆ ನಿರಾಶ್ರಿತರಾಗಿ ಶ್ರೀಲಂಕಾಕ್ಕೆ ವಲಸೆ ಬಂದಿದ್ದವರು. ಈಗ ಭಯೋತ್ಪಾದನಾ ದಾಳಿಗಳು ಸಂಭವಿಸಿದ ನಂತರ ಸಮುದಾಯದ ವಿರುದ್ಧ ಆಕ್ರೋಶಗೊಂಡಿರುವ ಅಲ್ಲಿನ ಜಮೀನ್ದಾರರು ತಮ್ಮ ನೆಲೆಗಳಲ್ಲಿರುವ ಮುಸ್ಲಿಮರನ್ನು ತೆರವುಗೊಳಿಸಿದ್ದಾರೆ.

'ಇಂದು ಈ ನಿರಾಶ್ರಿತರು ಶ್ರೀಲಂಕಾದಲ್ಲಿ ಮತ್ತೆ ನಿರಾಶ್ರಿತರಾಗಿದ್ದಾರೆ. ಎರಡನೆಯ ಬಾರಿಗೆ ಅವರು ನೆಲೆ ಕಳೆದುಕೊಂಡಿದ್ದಾರೆ' ಎಂದು ಶ್ರೀಲಂಕಾದ ಮಾನವಹಕ್ಕುಗಳ ಸಂಘಟನೆಯ ಹೋರಾಟಗಾರ ರೂಕಿ ಫರ್ನಾಂಡೊ ಹೇಳಿದ್ದಾರೆ.
ಈ ನಿರಾಶ್ರಿತರು ಪಾಕಿಸ್ತಾನ, ಅಫ್ಘಾನಿಸ್ತಾನ, ಯೆಮನ್ ಮತ್ತು ಇರಾನ್ನಿಂದ ಬಂದವರಾಗಿದ್ದಾರೆ. ಈ ದೇಶಗಳಲ್ಲಿ ಅಹ್ಮದಿಗಳನ್ನು ಅಲ್ಲಿನ ಇಸ್ಲಾಮಿಕ್ ಸಂಘಟನೆಗಳು ಮುಸ್ಲಿಮರು ಎಂದು ಪರಿಗಣಿಸಿಲ್ಲ. ಅಲ್ಲಿ ನಿರಂತರವಾಗಿ ದಾಳಿಗೆ ತುತ್ತಾಗುತ್ತಿದ್ದ ಅವರು ಜೀವ ಉಳಿಸಿಕೊಳ್ಳಲು ಶ್ರೀಲಂಕಾ ಸೇರಿದಂತೆ ವಿವಿಧ ದೇಶಗಳಿಗೆ ವಲಸೆ ಹೋಗಿದ್ದರು.
ಈಗಾಗಲೇ ಕೆಲವಡೆ ಅಪರಿಚಿತ ವ್ಯಕ್ತಿಗಳು ಅವರ ಮನೆಗಳನ್ನು ಪುಡಿ ಮಾಡಿ ಥಳಿಸಿದ ಘಟನೆಗಳು ವರದಿಯಾಗಿವೆ. ಸುಮಾರು 700 ಮಂದಿ ನಿರಾಶ್ರಿತರು ನೆಗೊಂಬೋದ ಮಸೀದಿಯಲ್ಲಿ ಆಶ್ರಯ ಪಡೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications