ಮುಸ್ಲಿಮರಿಗೆ ಶಿಕ್ಷಿಸುವ ಹಕ್ಕಿದೆ: ಮಲೇಷ್ಯಾ ಮಾಜಿ ಪ್ರಧಾನಿ ವಿವಾದ
ಕ್ವಾಲಾಲಂಪುರ, ಅಕ್ಟೋಬರ್ 31: 'ಮುಸ್ಲಿಮರಿಗೆ ಫ್ರಾನ್ಸ್ಅನ್ನು ಶಿಕ್ಷಿಸುವ ಹಕ್ಕು ಇದೆ' ಎನ್ನುವ ಮೂಲಕ ಫ್ರಾನ್ಸ್ನಲ್ಲಿ ನಡೆದ ಉಗ್ರರ ಕೃತ್ಯವನ್ನು ಸಮರ್ಥಿಸಿಕೊಂಡಿದ್ದ ಮಲೇಷ್ಯಾದ ಮಾಜಿ ಪ್ರಧಾನಿ ಮಹತಿರ್ ಮೊಹಮ್ಮದ್ ಅವರ ಟ್ವೀಟ್ಗಳನ್ನು ಟ್ವಿಟ್ಟರ್ ಅಳಿಸಿ ಹಾಕಿದೆ.
ಫ್ರಾನ್ಸ್ನ ಚರ್ಚ್ನಲ್ಲಿ ನಡೆದ ಉಗ್ರರ ದಾಳಿಯನ್ನು ಸಮರ್ಥಿಸಿಕೊಳ್ಳುವಂತೆ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದ 95 ವರ್ಷದ ಮಹತಿರ್, 'ಕೋಪಗೊಳ್ಳಲು ಮತ್ತು ಈ ಹಿಂದೆ ನಡೆದಿದ್ದ ಹತ್ಯಾಕಾಂಡಕ್ಕಾಗಿ ಲಕ್ಷಾಂತರ ಫ್ರೆಂಚ್ ಜನರನ್ನು ಕೊಲ್ಲಲು ಮುಸ್ಲಿಮರಿಗೆ ಹಕ್ಕು ಇದೆ' ಎಂದು ಹೇಳಿದ್ದರು.
ಟ್ಯುನೀಷಿಯಾದ ನಿರಾಶ್ರಿತನೊಬ್ಬ ಫ್ರಾನ್ಸ್ನ ನೈಸ್ನಲ್ಲಿರುವ ಚರ್ಚ್ ಒಂದರಲ್ಲಿ ಚಾಕು ಬೀಸಿ ಮೂವರ ಹತ್ಯೆ ಮಾಡಿದ ಘಟನೆ ಬಳಿಕ ಅವರು ಈ ಹೇಳಿಕೆ ನೀಡಿದ್ದರು. ಮಹತಿರ್ ಅವರ ಹೇಳಿಕೆಯನ್ನು ಒಳಗೊಂಡ ಟ್ವೀಟ್ ಒಂದನ್ನು ಟ್ವಿಟ್ಟರ್ ಹಿಂಸಾಚಾರವನ್ನು ವೈಭವೀಕರಿಸಿದ್ದಕ್ಕಾಗಿ ಅಳಿಸಿ ಹಾಕಿದೆ. ಮಹತಿರ್ ಅವರನ್ನು ಟ್ವಿಟ್ಟರ್ನಿಂದಲೇ ನಿಷೇಧಿಸುವಂತೆ ಫ್ರಾನ್ಸ್ ಡಿಜಿಟಲ್ ಸಚಿವರು ಒತ್ತಾಯಿಸಿದ್ದಾರೆ.

'ನಾನು ನನ್ನ ಬ್ಲಾಗ್ನಲ್ಲಿ ಬರೆದ ಅಂಶಗಳನ್ನು ಬೇರೆ ರೀತಿ ತಪ್ಪಾಗಿ ಅರ್ಥೈಸುವ ಪ್ರಯತ್ನಗಳು ನಡೆಯುತ್ತಿರುವುದು ಬೇಸರ ತಂದಿದೆ' ಎಂದು ಮಹತಿರ್ ಪ್ರತಿಕ್ರಿಯಿಸಿದ್ದಾರೆ. 13 ಸರಣಿ ಟ್ವೀಟ್ಗಳನ್ನು ಮಾಡಿದ್ದ ಅವರು, 'ಮುಸ್ಲಿಮರು ಕಣ್ಣಿಗೆ ಕಣ್ಣು ಎಂಬ ಕಾನೂನನ್ನು ಅನುಸರಿಸಿಲ್ಲ, ಮುಸ್ಲಿಮರು ಹಾಗೆ ಮಾಡುವುದೂ ಇಲ್ಲ. ಫ್ರಾನ್ಸ್ ಕೂಡ ಮಾಡಬಾರದು' ಎಂದು ಅವರು ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications