Earthquake: ಮ್ಯಾನ್ಮರ್ನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ: ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ
ಮ್ಯಾನ್ಮರ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದ ಭೀತಿ ಜನರಿಂದ ಮಾಸುವ ಮುನ್ನವೇ ಮತ್ತೊಮ್ಮೆ ಭೂಮಿ ಅಲುಗಾಡಿ. ಶುಕ್ರವಾರ 7.7 ತೀವ್ರತೆಯಲ್ಲಿ ಮ್ಯಾನ್ಮರ್ನಲ್ಲಿ ಭೂಕಂಪನ ಸಂಭವಿಸಿದ್ದು ಇಂದು (ಮಾರ್ಚ್ 30) ಮತ್ತೆ ಭೂಕಂಪವಾಗಿದೆ.
ಶುಕ್ರವಾರ ಎರಡು ಬಾರಿ ಅಲುಗಾಡಿದ ಭೂಮಿ ಇಂದು ಮತ್ತೆ ನಡುಗಿದೆ. ಮ್ಯಾನ್ಮಾರ್ನ ಎರಡನೇ ಅತಿದೊಡ್ಡ ಮಂಡಲೆ (Mandalay in Myanmar) ನಗರದ ಬಳಿ 5.1 ತೀವ್ರತೆಯ ಭೂಕಂಪ ಇಂದು ಸಂಭವಿಸಿದೆ. ಶುಕ್ರವಾರದ ವಿನಾಶಕಾರಿ ಭೂಕಂಪದ ನಂತರ ಸಂಭವಿಸಿದ ಭೂಕಂಪಗಳ ಸರಣಿಯಲ್ಲಿ ಮ್ಯಾನ್ಮರ್ ನಲುಗಿ ಹೋಗಿದೆ.

ಮ್ಯಾನ್ಮರ್ನಲ್ಲಿ ಶುಕ್ರವಾರ ಸಂಭವಿಸಿದ 7.7 ತೀವ್ರತೆಯ ಭೂಕಂಪದಿಂದಾಗಿ ಹಲವಾರು ಕಟ್ಟಡಗಳು ನೆಲಕ್ಕುರುಳಿವೆ. ಇಲ್ಲಿಯವರೆಗೆ 1,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 3,400 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಹೀಗಿರುವಾಗ ಇಂದು ಮತ್ತೆ ಮ್ಯಾನ್ಮರ್ನಲ್ಲಿ ಭೂಕಂಪನವಾಗಿದ್ದು ಜನ ಪ್ರಾಣವನ್ನೇ ಅಂಗೈಯಲ್ಲಿ ಹಿಡಿದುಕೊಮಡು ಕುಳಿತುಕೊಳ್ಳುವಂತಾಗಿದೆ.
ಮಾ. 28ರಂದು ಮ್ಯಾನ್ಮರ್ನಲ್ಲಿ ಭಯಾನಕ ಭೂಕಂಪದ
ಶುಕ್ರವಾರದಂದು (ಮಾ. 28) ಮ್ಯಾನ್ಮಾರ್ ನಲ್ಲಿ ಸಂಭವಿಸಿರುವ ಪ್ರಬಲ ಭೂಕಂಪಕ್ಕೆ ಸ್ಥಳೀಯ ಜನ ದಿಗ್ಬ್ರಾಂತರಾಗಿದ್ದಾರೆ. ರಾಜಧಾನಿ ಬ್ಯಾಂಕಾಕ್ ಸೇರಿದಂತೆ ಹಲವಾರು ನಗರಗಳಲ್ಲಿ ಭೂಕಂಪವಾಗಿದ್ದು ಬಹುಮಹಡಿ ಕಟ್ಟಡಗಳು ನೆಲಕ್ಕಚ್ಚಿವೆ. ಅನೇಕ ಕಟ್ಟಡಗಳು ಧರೆಗುರುಳಿವೆ. ಅನೇಕ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲಕ್ಕಿಂತ ಹೆಚ್ಚಾಗಿ ನೂರಾರು ಜನರು ಗಾಯಗೊಂಡಿದ್ದು ನೂರಾರು ಜನ ಕಾಣೆಯಾಗಿದ್ದಾರೆ.
ಈಗಾಗಲೇ ಹಲವು ರಕ್ಷಣಾ ತಂಡಗಳು ಗಾಯಗೊಂಡವರು ಹಾಗೂ ಕಾಣೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆಸಿವೆ. ಇದಕ್ಕೆ ಭಾರತ ಕೂಡ ಸಹಾಯಹಸ್ತ ಚಾಚಿದೆ. ಮ್ಯಾನ್ಮಾರ್ ಜನರ ರಕ್ಷಣೆಗಾಗಿ ವಿಶೇಷ ವಿಮಾನದೊಂದಿಗೆ ಭಾರತೀಯ ರಕ್ಷಣಾ ತಂಡ ಮ್ಯಾನ್ಮರ್ಗೆ ತೆರಳಿದೆ.
ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ನಲ್ಲಿ ಶುಕ್ರವಾರ ಮಧ್ಯಾಹ್ನ ಹೊತ್ತಿಗೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿವೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ದೃಶ್ಯಗಳು ಭಯಾನಕವಾಗಿವೆ.
ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಸುಮಾರು 1600ಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೇಶದ ದೊಡ್ಡ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಇದು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರದಲ್ಲಿದ್ದು, ಪ್ರಕೃತಿ ವಿಕೋಪದಿಂದ ಭಾರೀ ವಿನಾಶ ಕಂಡಿದೆ. ಮಂಡಲೇ ಪ್ರದೇಶದವೊಂದರಲ್ಲಿಯೇ ಭೂಕಂಪಕ್ಕೆ 694 ಮಂದಿ ಮೃತಪಟ್ಟಿದ್ದು, 1,670 ಜನರು ಗಾಯಗೊಂಡಿದ್ದಾರೆ ಎಂದು ಜುಂಟಾ ಮಾಹಿತಿ ತಂಡ ಹೇಳಿಕೆಯಲ್ಲಿ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications