ಮ್ಯಾನ್ಮಾರ್ ಮಿಲಿಟರಿ ವಿಮಾನ ಅಪಘಾತ, 12 ಮಂದಿ ಸಾವು
ಮ್ಯಾನ್ಮಾರ್ ದೇಶದ ಎರಡನೇ ಅತಿದೊಡ್ದ ನಗರ ಮಂಡಲಾಯ್ ಪ್ರದೇಶದಲ್ಲಿ ಗುರುವಾರದಂದು ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ವಿಮಾನದಲ್ಲಿದ್ದ ಪ್ರಯಾಣಿಸುತ್ತಿದ್ದ 12 ಮಂದಿ ಮೃತಪಟ್ಟಿರುವ ಬಗ್ಗೆ ವರದಿ ಬಂದಿದೆ.
ಮಿಲಿಟರಿ ವಿಮಾನದಲ್ಲಿ ಮಿಲಿಟರಿ ಸಿಬ್ಬಂದಿ ಹಾಗೂ ಕೆಲ ಬೌದ್ಧ ಸನ್ಯಾಸಿಗಳಿದ್ದರು ಎಂದು ತಿಳಿದು ಬಂದಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಪತನಗೊಂಡಿದೆ. ಇಲ್ಲಿಗೆ ಸಮೀಪದ ಬೌದ್ಧವಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೌದ್ಧ ಸನ್ಯಾಸಿಗಳು ವಿಮಾನದಲ್ಲಿ ತೆರಳುತ್ತಿದ್ದರು.
ಸದ್ಯಕ್ಕೆ ಲಭ್ಯವಾದ ಮಾಹಿತಿ:
ಮಂಡಲಾಯ್ ಪ್ರದೇಶದ ಬೆಟ್ಟ ಗುಡ್ಡ ತಪ್ಪಲಿನ ಪಟ್ಟಣ ಪಿಯಿನ್ ಊ ಎಲ್ ವಿನ್ (Pyin Oo Lwin)ನ ಉಕ್ಕಿನ ಘಟಕದಿಂದ 300 ಮೀಟರ್ ದೂರದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ. ಪ್ರಾಥಮಿಕ ವರದಿ ಪ್ರಕಾರ, 6 ಮಂದಿ ವಿಮಾನದ ಸಿಬ್ಬಂದಿ ಹಾಗೂ 8 ಮಂದಿ ಪ್ರಯಾಣಿಕರು ವಿಮಾನದಲ್ಲಿದ್ದರು.

ಈ ಪೈಕಿ 12 ಮಂದಿ ಮೃತಪಟ್ಟಿದ್ದಾರೆ. ಓರ್ವ ಪೈಲಟ್ ಹಾಗೂ ಒಬ್ಬ ಪ್ರಯಾಣಿಕರು ಬದುಕುಳಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮ್ಯಾನ್ಮಾರ್ ದೇಶದಲ್ಲಿದ್ದ ಪ್ರಜಾಪ್ರಭುತ್ವ ಸರ್ಕಾರ ಪತನಗೊಂಡು ಮಿಲಿಟರಿ ಆಡಳಿತ ಆರಂಭವಾದ ನಂತರ ವಿಮಾನಯಾನ ಸುರಕ್ಷತೆ ಬಗ್ಗೆ ಗಮನಹರಿಸಿಲ್ಲ, ಫೆಬ್ರವರಿ 1ರಿಂದ ಮಿಲಿಟರಿ ದುರಾಡಳಿತಕ್ಕೆ ಬೇಸತ್ತು ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದಾರೆ. ಅನೇಕರನ್ನು ಮಿಲಿಟರಿ ಆಡಳಿತ ಕೊಂದು ಹಾಕಿದೆ. ಬಂಧಿತ ನಾಯಕಿ ಆಂಗ್ ಸ್ಯಾನ್ ಸೂ ಕಿ ಅವರನ್ನು ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ. ಆದರೆ, ವಿಚಾರಣೆ ಎದುರಿಸಿದ ಸೂಕಿ ಅವರ ಮೇಲೆ ಚುನಾವಣೆ ಅಕ್ರಮ, ಭ್ರಷ್ಟಾಚಾರ ಆರೋಪ ಹೊರೆಸಲಾಗಿದೆ. (Reuters, AFP)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications