ಮ್ಯಾನ್ಮಾರ್ ಮಿಲಿಟರಿ ವಿಮಾನ ಅಪಘಾತ, 12 ಮಂದಿ ಸಾವು
ಮ್ಯಾನ್ಮಾರ್ ದೇಶದ ಎರಡನೇ ಅತಿದೊಡ್ದ ನಗರ ಮಂಡಲಾಯ್ ಪ್ರದೇಶದಲ್ಲಿ ಗುರುವಾರದಂದು ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ವಿಮಾನದಲ್ಲಿದ್ದ ಪ್ರಯಾಣಿಸುತ್ತಿದ್ದ 12 ಮಂದಿ ಮೃತಪಟ್ಟಿರುವ ಬಗ್ಗೆ ವರದಿ ಬಂದಿದೆ.
ಮಿಲಿಟರಿ ವಿಮಾನದಲ್ಲಿ ಮಿಲಿಟರಿ ಸಿಬ್ಬಂದಿ ಹಾಗೂ ಕೆಲ ಬೌದ್ಧ ಸನ್ಯಾಸಿಗಳಿದ್ದರು ಎಂದು ತಿಳಿದು ಬಂದಿದೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಪತನಗೊಂಡಿದೆ. ಇಲ್ಲಿಗೆ ಸಮೀಪದ ಬೌದ್ಧವಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೌದ್ಧ ಸನ್ಯಾಸಿಗಳು ವಿಮಾನದಲ್ಲಿ ತೆರಳುತ್ತಿದ್ದರು.
ಸದ್ಯಕ್ಕೆ ಲಭ್ಯವಾದ ಮಾಹಿತಿ:
ಮಂಡಲಾಯ್ ಪ್ರದೇಶದ ಬೆಟ್ಟ ಗುಡ್ಡ ತಪ್ಪಲಿನ ಪಟ್ಟಣ ಪಿಯಿನ್ ಊ ಎಲ್ ವಿನ್ (Pyin Oo Lwin)ನ ಉಕ್ಕಿನ ಘಟಕದಿಂದ 300 ಮೀಟರ್ ದೂರದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ. ಪ್ರಾಥಮಿಕ ವರದಿ ಪ್ರಕಾರ, 6 ಮಂದಿ ವಿಮಾನದ ಸಿಬ್ಬಂದಿ ಹಾಗೂ 8 ಮಂದಿ ಪ್ರಯಾಣಿಕರು ವಿಮಾನದಲ್ಲಿದ್ದರು.

ಈ ಪೈಕಿ 12 ಮಂದಿ ಮೃತಪಟ್ಟಿದ್ದಾರೆ. ಓರ್ವ ಪೈಲಟ್ ಹಾಗೂ ಒಬ್ಬ ಪ್ರಯಾಣಿಕರು ಬದುಕುಳಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮ್ಯಾನ್ಮಾರ್ ದೇಶದಲ್ಲಿದ್ದ ಪ್ರಜಾಪ್ರಭುತ್ವ ಸರ್ಕಾರ ಪತನಗೊಂಡು ಮಿಲಿಟರಿ ಆಡಳಿತ ಆರಂಭವಾದ ನಂತರ ವಿಮಾನಯಾನ ಸುರಕ್ಷತೆ ಬಗ್ಗೆ ಗಮನಹರಿಸಿಲ್ಲ, ಫೆಬ್ರವರಿ 1ರಿಂದ ಮಿಲಿಟರಿ ದುರಾಡಳಿತಕ್ಕೆ ಬೇಸತ್ತು ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸಿದ್ದಾರೆ. ಅನೇಕರನ್ನು ಮಿಲಿಟರಿ ಆಡಳಿತ ಕೊಂದು ಹಾಕಿದೆ. ಬಂಧಿತ ನಾಯಕಿ ಆಂಗ್ ಸ್ಯಾನ್ ಸೂ ಕಿ ಅವರನ್ನು ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ. ಆದರೆ, ವಿಚಾರಣೆ ಎದುರಿಸಿದ ಸೂಕಿ ಅವರ ಮೇಲೆ ಚುನಾವಣೆ ಅಕ್ರಮ, ಭ್ರಷ್ಟಾಚಾರ ಆರೋಪ ಹೊರೆಸಲಾಗಿದೆ. (Reuters, AFP)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications