ಬ್ರಿಟನ್ ಪ್ರಧಾನಿಯ ಉನ್ನತ ತಂಡಕ್ಕೆ ನಾರಾಯಣ್ ಮೂರ್ತಿ ಅಳಿಯ
ಲಂಡನ್, ಜನವರಿ 10: ಬ್ರಿಟನ್ ಪ್ರಧಾನಿ ಥೆರೆಸಾ ಮೇ ಅವರ ಉನ್ನತ ತಂಡಕ್ಕೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಅಳಿಯ ರಿಷಿ ಸುನಾಕ್ ಸೇರ್ಪಡೆಯಾಗಿದ್ದಾರೆ.
ಸೋಮವಾರ ಥೆರೆಸಾ ಮೇ ಸಚಿವರು ಮತ್ತು ಕಾರ್ಯದರ್ಶಿಗಳ ತಂಡವನ್ನು ಪರಿಷ್ಕರಣೆ ಮಾಡಿದ್ದು, ತಂಡಕ್ಕೆ ಹೊಸದಾಗಿ ರಿಷಿ ಸುನಾಕ್ ಸೇರ್ಪಡೆಯಾಗಿದ್ದಾರೆ. 36 ವರ್ಷದ ಸುನಾಕ್ ರನ್ನು
ವಸತಿ, ಸಮುದಾಯಗಳು ಮತ್ತು ಸ್ಥಳೀಯ ಸರ್ಕಾರ ಇಲಾಖೆಯ ಅಂಡರ್ ಸೆಕ್ರೆಟರಿ (ಕಾರ್ಯದರ್ಶಿ)ಯಾಗಿ ಆಯ್ಕೆ ಮಾಡಲಾಗಿದೆ.
ತಮ್ಮ ಹೊಸ ತಂಡಕ್ಕೆ ಥೆರೆಸಾ ಮೇ ಹಲವು ಸ ಣ್ಣಪುಟ್ಟ ಸಮುದಾಯಗಳ ಜನರನ್ನು ಸೇರಿಸಿಕೊಂಡಿದ್ದಾರೆ. ತಮ್ಮ ಸಂಪುಟ ನಿಜವಾದ ದೇಶವನ್ನು ಪ್ರತಿನಿಧಿಸಬೇಕು ಎಂಬ ಕಲ್ಪನೆಯಲ್ಲಿ ಅವರು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ.

ರಿಷಿ ಸುನಾಕ್ 2015ರ ಚುನಾವಣೆಯಲ್ಲಿ ಉತ್ತರ ಯಾರ್ಕ್ ಶೈರ್ ನ ರಿಚ್ಮಂಡ್ ನಿಂದ ಗೆದ್ದು ಬ್ರಿಟನ್ ಪಾರ್ಲಿಮೆಂಟ್ ಪ್ರವೇಶಿಸಿದ್ದರು.
ಆಕ್ಸ್ ಫರ್ಡ್ ವಿವಿಯಿಂದ ಪದವಿ ಪಡೆದಿರುವ ರಿಷಿ ಸುನಾಕ್ ಲಂಡನ್ ಮೂಲದ ಜಾಗತಿಕ ಹೂಡಿಕೆ ಸಂಸ್ಥೆಯೊಂದಕ್ಕೆ ಸಹ ಸಂಸ್ಥಾಪಕರಾಗಿದ್ದಾರೆ. 1 ಬಿಲಿಯನ್ ಪೌಂಡ್ ಮೌಲ್ಯದ ಇವರ ಸಂಸ್ಥೆ ಬ್ರಿಟನ್ನಿನ ಹಲವು ಸಣ್ಣ ಉದ್ಯಮ ಸಂಸ್ಥೆಗಳಲ್ಲಿ ಹಣ ಹೂಡಿದೆ. 2014ರಲ್ಲಿ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ.
Rishi Sunak MP becomes Parliamentary Under Secretary of State at Ministry of Housing, Communities and Local Government @mhclg #Reshuffle pic.twitter.com/C46oGC7O3z
— UK Prime Minister (@Number10gov) January 9, 2018
ನಾರಾಯಣ್ ಮೂರ್ತಿ ಪುತ್ರಿ ಅಕ್ಷತಾ ಮೂರ್ತಿಯವರನ್ನು ಇವರು ಮದುವೆಯಾಗಿದ್ದಾರೆ. ಅಕ್ಷತಾ ಮತ್ತು ಸುನಾಕ್ ಸ್ಟಾನ್ ಫರ್ಡ್ ಬುಸಿನೆಸ್ ಸ್ಕೂಲ್ ನಲ್ಲಿ ಸಹಪಾಠಿಗಳಾಗಿದ್ದರು. ಈ ದಂಪತಿಗೆ ಕೃಷ್ಣ ಮತ್ತು ಅನೋಷ್ಕ ಎಂಬ ಇಬ್ಬರು ಮಕ್ಕಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications