ಮೋದಿ ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿರುವುದು ಯಾಕೆ?
ವಿದೇಶಗಳೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳುವುದರಲ್ಲಿ ನರೇಂದ್ರ ಮೋದಿ ಸರ್ಕಾರ ಮೊದಲಿನಿಂದಲೂ ನಿರಂತರ ಯತ್ನ ಮಾಡಿಕೊಂಡೆ ಬಂದಿದೆ.
ಸೌದಿ ಅರೇಬಿಯಾದ ಆರನೇ ದೊರೆ ಅಬ್ದುಲ್ ಬಿನ್ ಅಜಿಜ್ ಸಾವನ್ನಪ್ಪಿದಾಗ ಭಾರತದ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ರಿಯಾದ್ ಗೆ ಭೇಟಿ ನೀಡಿದ್ದರು. ಅಲ್ಲದೆ ಭಾರತ ಸರ್ಕಾರ ಶೋಕಾಚರಣೆಯ ಬಗ್ಗೆಯೂ ಹೇಳಿತ್ತು. [ಅಳಲು ತೋಡಿಕೊಂಡ ಕನ್ನಡಿಗನಿಗೆ ಸೌದಿಯಲ್ಲಿ ಜೈಲುವಾಸ]
ಇದೀಗ ನರೇಂದ್ರ ಮೋದಿ ಏಪ್ರಿಲ್ 2 ಮತ್ತು 3ರಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡುತ್ತಿದ್ದಾರೆ. ಎರಡು ದೇಶಗಳ ಅರ್ಥ ವ್ಯವಸ್ಥೆ ಮತ್ತು ಭದ್ರತಾ ದೃಷ್ಟಿಯಿಂದ ಈ ಭೇಟಿ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಮೋದಿ ಯಾವ ಕಾರಣಗಳನ್ನು ಇಟ್ಟುಕೊಂಡು ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಅವುಗಳೆಲ್ಲದರ ಮೇಲೆ ಒಂದು ನೋಟ ಇಲ್ಲಿದೆ. [ಸೌದಿಗೆ ಆಧುನಿಕ ಟಚ್ ನೀಡಿದ್ದ ದೊರೆ ಅಬ್ದುಲ್ಲಾ ಇನ್ನಿಲ್ಲ]

ಭಯೋತ್ಪಾದನೆ ನಿಗ್ರಹ
ಸೌದಿ ಅರೇಬಿಯಾ ಸಹ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಲೇ ಇದೆ. ಸೌದಿ ಅರೆಬಿಯಾ ಮತ್ತು ಯುಎಸ್ ಜಂಟಿಯಾಗಿ ಕೆಲ ಕಾರ್ಯಾಚರಣೆಯನ್ನು ಕೈಗೊಂಡಿದ್ದನ್ನು ನೋಡಿದ್ದೇವೆ, ಲಶ್ಕರ್-ಇ-ತೊಯ್ಬಾ ಮತ್ತು ತಾಲಿಬಾನ್ ನ ಅಲ್-ಖೈದಾ ಸಂಘಟನೆಗಳೊಂದಿಗೆ ಭಾರತೀಯರ ಸಂಪರ್ಕ ಈ ಬಗ್ಗೆ ಹುಟ್ಟಿಕೊಂಡ ಅನುಮಾನಗಳನ್ನು ಸಹ ಬಗೆಹರಿಸಕೊಳ್ಳಬೇಕಾಗಿದೆ.

ಮುಂಬೈ ದಾಳಿ
26/11 ರ ಮುಂಬೈ ದಾಳಿಗೆ ಸಂಬಂಧಿಸಿದ ಕೆಲ ವಿಚಾರಗಳನ್ನು ಸಹ ಮೋದಿ ಬಗೆಹರಿಸಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉಗ್ರರು ಆಶ್ರಯ ಪಡೆದುಕೊಳ್ಳುತ್ತಿರುವ ಬಗೆಗಿನ ಕೆಲ ಅನುಮಾನಗಳನ್ನು ಬಗೆಹರಿಸಿಕೊಳ್ಳುವ ನಿರೀಕ್ಷೆ ಇದೆ.

ಐಎಸ್ಐಎಸ್ ಆತಂಕ
ಇವುಗಳ ಜತೆಗೆ ಐಎಸ್ಐಎಸ್ ಸಂಘಟನೆಯ ಬೆಳವಣಿಗೆ. ಅದರಿಂದ ಎದುರಾಗುತ್ತಿರುವ ಆತಂಕ ಮತ್ತು ಪರಿಹಾರ ಕ್ರಮಗಳ ಬಗೆಗಿನ ಮಾತುಕತೆಯೂ ನಡೆಯಲಿದೆ.

ಉಗ್ರ ನಿಗ್ರಹ
ಸೌದಿ ಅರೇಬಿಯಾ, ಭಾರತ ಸೇರಿದಂತೆ ವಿವಿಧ ದೇಶಗಳ ಭದ್ರತೆಗೆ ಮತ್ತು ಆತಂಕಕ್ಕೆ ಕಾರಣವಾಗಿರುವ ಐಎಸ್ಐಎಸ್ ಸಂಘಟನೆಯ ಉಗ್ರ ಕಾರ್ಯಾಚರಣೆ ತಡೆ ಬಗ್ಗೆಯೂ ಮಾತುಕತೆ ನಡೆಯಲಿದೆ.

ಆರ್ಥಿಕ ಒಪ್ಪಂದಗಳು
ಸೌದಿ ಅರೇಬಿಯಾದ ದೊರೆ ಕಿಂಗ್ ಸಲ್ಮಾನ್ ಅವರೊಂದಿಗೆ ನರೇಂದ್ರ ಮೋದಿ ಬಂಡವಾಳ ಹೂಡಿಕೆ ಬಗ್ಗೆಯೂ ಮಾತನಾಡಲಿದ್ದಾರೆ.

ತೈಲ ಆಮದು
ಭಾರತ ಶೇ. 20 ಕ್ಕೂ ಅಧಿಕ ತೈಲವನ್ನು ಸೌದಿ ಅರೇಬಿಯಾದ ಬಳಿಯೇ ಖರೀದಿ ಮಾಡುತ್ತಿದೆ. ಭಾರತದೊಂದಿಗೆ ವ್ಯಾಪಾರ ವಾಣಿಜ್ಯ ಸಂಬಂಧ ಇಟ್ಟುಕೊಂಡ ನಾಲ್ಕು ಪ್ರಮುಖ ರಾಷ್ಟ್ರಗಳಲ್ಲಿ ಸೌದಿ ಅರೇಬಿಯಾವೂ ಒಂದು.

ಗಲ್ಫ್ ಎಕಾನಮಿ
ಗಲ್ಫ್ ಎಕಾನಮಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳ ನಡುವಿನ ಪರಿಹಾರೋಪಾಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ.

ಭಾರತೀಯರ ಭದ್ರತೆ
ಭಾರತದ ಸುಮಾರು 8 ಮಿಲಿಯನ್ ಗೂ ಅಧಿಕ ಜನರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತೀಯ ,ಮೂಲದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications