Oz (Live) : ಬ್ರಿಸ್ಬೇನ್ನಲ್ಲಿ ಇಂಡಿಯನ್ ಫುಡ್ಕೋರ್ಟ್
ಬ್ರಿಸ್ಬೇನ್, ನ. 15 : ಭಯೋತ್ಪಾದನೆಯನ್ನು ಹತ್ತಿಕ್ಕಲು ವಿಶ್ವದ ದೇಶಗಳ ಜಂಟಿ ತಂತ್ರಗಾರಿಕೆ ಅಗತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಬ್ರಿಸ್ಬೇನ್ನಲ್ಲಿ ಜಿ-20 ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಅವರು, ವಿಶ್ವ ಮಟ್ಟದಲ್ಲಿ ಬೆಳೆದಿರುವ ಭಯೋತ್ಪಾದನೆ ಹತ್ತಿಕ್ಕಬೇಕಾದರೆ, ಎಲ್ಲಾ ದೇಶಗಳು ಸಹಕಾರ ಮುಖ್ಯ ಎಂದು ಹೇಳಿದ್ದಾರೆ.
ಭಯೋತ್ಪಾದನೆ ಇಡೀ ವಿಶ್ವದ ನೆಮ್ಮದಿಯ ಜೊತೆಗೆ ಆರ್ಥಿಕ ವ್ಯವಸ್ಥೆಯನ್ನೂ ಹಾಳುಮಾಡಿದೆ. ಆದ್ದರಿಂದ ವಿಶ್ವದ ಎಲ್ಲಾ ದೇಶಗಳು ಒಂದಾದರೆ ಭಯೋತ್ಪಾದನೆಯನ್ನು ತೊಲಗಿಸಬಹುದು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ದೇಶಗಳ ನಡುವಿನ ಸಹಕಾರ ಸಂಬಂಧ ಸುಧಾರಣೆ ಮುಖ್ಯವಾಗಿದೆ. ಆದರೆ, ಈ ಸುಧಾರಣೆ ಜನತೆಯಿಂದಲೇ ಆಗಬೇಕಿದೆ ಎಂದು ಹೇಳಿದ ಮೋದಿ, ತಂತ್ರಜ್ಞಾನ ಮತ್ತು ಆಡಳಿತ ಕಾರ್ಯವಿಧಾನ ಸುಧಾರಣೆಯಾಗಬೇಕಿದೆ ಎಂದರು. [ಮೋದಿ ಭಾಷಣದ ಪೂರ್ಣಭಾಗ ಇಲ್ಲಿದೆ]
ಇಂಡಿಯನ್ ಫುಡ್ ಕೋರ್ಟ್ : ನರೇಂದ್ರ ಮೋದಿ ಬ್ರಿಸ್ಬೇನ್ನಲ್ಲಿನ ಜಿ-20 ಶೃಂಗ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಮೋದಿಯ ಚಿತ್ರವುಳ್ಳ ಇಂಡಿಯನ್ ಫುಡ್ಕೋರ್ಟ್ ಶೃಂಗ ಸಭೆ ನಡೆಯುವಲ್ಲಿ ಎಲ್ಲರ ಗಮನಸೆಳೆಯುತ್ತಿದೆ.
Australia : 'Namo's Indian Food Court' in Brisbane pic.twitter.com/FivzFNTxSg
— ANI (@ANI_news) November 15, 2014 ಹಿಂದಿನ ಸುದ್ದಿ : ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬ್ರಿಸ್ಬೇನ್ನಲ್ಲಿದ್ದು, ಇಂದಿನಿಂದ ಆರಂಭವಾದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕಪ್ಪು ಹಣ ನಿಗ್ರಹ ವಿಷಯವನ್ನು ಮೋದಿ ಶೃಂಗಸಭೆಯಲ್ಲಿ ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಭಾರತೀಯ ಕಾಲಮಾನ ಬೆಳಗ್ಗೆ 10.50ರ ಸುಮಾರಿಗೆ ನರೇಂದ್ರ ಮೋದಿ ಅವರು ಶೃಂಗಸಭೆಗೆ ಆಗಮಿಸಿದ್ದಾರೆ. ಎರಡು ದಿನಗಳ 9ನೇ ಶೃಂಗಸಭೆಯಲ್ಲಿ ತೆರಿಗೆ ವಂಚನೆ, ಕಪ್ಪು ಹಣ ವಾಪಸ್ ತರುವ ವಿಷಯಗಳ ಬಗ್ಗೆ ಜಾಗತಿಕ ಸಹಕಾರಕ್ಕಾಗಿ ಮೋದಿ ಒತ್ತಾಯಿಸುವ ಸಾಧ್ಯತೆ ಇದೆ.

ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಚೀನಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ರಷ್ಯಾ, ಟರ್ಕಿ, ದಕ್ಷಿಣ ಆಫ್ರಿಕಾ, ಅಮೆರಿಕ, ಐರೋಪ್ಯ ಒಕ್ಕೂಟ ಸೇರಿದಂತೆ 20 ದೇಶಗಳ ಜಿ20 ಶೃಂಗಸಭೆ ನ.15 ಮತ್ತು 16ರಂದು ನಡೆಯಲಿದೆ. ಜನರ ಜೀವನ ಮಟ್ಟ ಸುಧಾರಣೆ, ಮೂಲ ಸೌಕರ್ಯ ಮತ್ತು ಆರ್ಥಿಕ ಬೆಳವಣಿಗೆ ವೃದ್ಧಿಸುವ ಉದ್ಯೋಗ ಸೃಷ್ಟಿ ಬಗ್ಗೆ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ.
Prime Minister of Australia Tony Abbott welcomes PM Narendra Modi to G20 Summit in Brisbane pic.twitter.com/d8vf2UYKIZ
— ANI (@ANI_news) November 15, 2014 -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications