ಸ್ವಾಮಿ ವಿವೇಕಾನಂದ ವ್ಯಕ್ತಿಯಲ್ಲ, ಭಾರತದ ಆತ್ಮ:ಮೋದಿ
ಕೌಲಾಲಂಪುರ, ನ.22: ಮಲೇಷಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಪೆಟಲಿಂಗ್ ಜಯಾದಲ್ಲಿರುವ ರಾಮಕೃಷ್ಣ ಆಶ್ರಮದಲ್ಲಿ ಭಾನುವಾರ ವಿವೇಕಾನಂದರ ಪ್ರತಿಮೆ ಉದ್ಘಾಟಿಸಿದರು. ಮೋದಿ ಅವರು ತಮ್ಮ ಭಾಷಣದಲ್ಲಿ ವಿವೇಕವಾಣಿಯನ್ನು ಜಗತ್ತಿಗೆ ಸಾರಿದರು. ಸ್ವಾಮಿ ವಿವೇಕಾನಂದ ಅವರು ಕೇವಲ ಒಬ್ಬ ವ್ಯಕ್ತಿಯಲ್ಲ, ಭಾರತದ ಆತ್ಮ, ನಮ್ಮ ಸಂಸ್ಕೃತಿಯ ಪ್ರತೀಕ ಎಂದರು.
ಆಸಿಯಾನ್ ಸಭೆಯಲ್ಲಿ ಪಾಲ್ಗೊಳ್ಳಲು ಮಲೇಷಿಯಾದಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ ಅವರು ವಿವೇಕಾನಂದ ಪ್ರತಿಮೆಗೆ ಭಕ್ತಪೂರ್ವಕ ನಮನ ಸಲ್ಲಿಸಿದರು. ಭಾರತದ ಹಿರಿಮೆ ಗರಿಮೆಯನ್ನು ಜಗತ್ತಿಗೆ ಸಾರಿದ ವಿವೇಕಾನಂದರ ಮಾರ್ಗದಲ್ಲಿ ನಾವು ಸಾಗಬೇಕಿದೆ. ಜನ ಸೇವೆಯೇ ಜನಾರ್ಧನನ ಸೇವೆ ವಿವೇಕಾನಂದರು ಹೇಳಿಕೊಟ್ಟ ಪಾಠ ಎಂದರು.[ಆಸಿಯನ್ ಶೃಂಗಸಭೆಯಲ್ಲಿ ಮೋದಿ: ಮಲೇಷ್ಯಾ ಪ್ರವೇಶಿಸಿದ 10 ಉಗ್ರರು]
ಭಾರತೀಯ ಸಂಸ್ಕೃತಿ, ನಾಗರೀಕತೆ ಸಾವಿರಾರು ವರ್ಷಗಳಿಂದ ಉಳಿದು ಬೆಳೆದು ಬಂದಿರುವುದೇ ಇಂಥ ಮಹಾನ್ ಶಕ್ತಿಗಳಿಂದ ಎಂಬುದನ್ನು ಮರೆಯುವಂತಿಲ್ಲ, ಇಲ್ಲಿನ ಭಾರತೀಯ ಸಮುದಾಯಕ್ಕೆ ವಿವೇಕಾನಂದರ ಪ್ರತಿಮೆ ಸ್ಪೂರ್ತಿದಾಯಕವಾಗಲಿದೆ ಎಂದರು.
ಇದರ ಜೊತೆಗೆ ಮಲೇಷಿಯಾದಲ್ಲಿರುವ ಭಾರತೀಯ ಸಮುದಾಯ ಹಾಗೂ ಮಲೇಷಿಯಾ ಸರ್ಕಾರದಲ್ಲಿರುವ ಭಾರತೀಯ ಮೂಲದ ಜನಪ್ರತಿನಿಧಿಗಳ ಜೊತೆ ಮೋದಿ ಅವರು ಮಾತುಕತೆ ನಡೆಸಿದರು.

ಸ್ವಾಮಿ ವಿವೇಕಾನಂದರನ್ನು ನಮ್ಮ ದೇಶದ ಹೃದಯ
ಸ್ವಾಮಿ ವಿವೇಕಾನಂದರನ್ನು ನಮ್ಮ ದೇಶದ ಹೃದಯ ಮತ್ತು ಆತ್ಮದ ಪ್ರತೀಕ ಅವರ ನುಡಿಗಳನ್ನು ನಮ್ಮಲ್ಲಿ ಅನುಸ್ಥಾಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
|
ದೇವರು ಎಲ್ಲಿ ಎಂದು ಕೇಳಿದಾಗ
ದೇವರು ಎಲ್ಲಿ ಎಂದು ಕೇಳಿದಾಗ ಸ್ವಾಮಿ ವಿವೇಕಾನಂದರು ಹೇಳಿದ್ದೇನು?
|
ಭಾರತೀಯ ಮೂಲದ ಜನಪ್ರತಿನಿಧಿಗಳು
ಮಲೇಷಿಯಾ ಸರ್ಕಾರದಲ್ಲಿರುವ ಭಾರತೀಯ ಮೂಲದ ಜನಪ್ರತಿನಿಧಿಗಳ ಜೊತೆ ಮೋದಿ ಮಾತುಕತೆ.
|
ಸಾಂಸ್ಕೃತಿಕ ಕೇಂದ್ರಕ್ಕೆ ಸುಭಾಶ್ ಚಂದ್ರ ಬೋಸ್ ಹೆಸರು
ಇಲ್ಲಿರುವ ಸಾಂಸ್ಕೃತಿಕ ಕೇಂದ್ರಕ್ಕೆ ಸುಭಾಶ್ ಚಂದ್ರ ಬೋಸ್ ಹೆಸರು ಇಡುವುದಾಗಿ ಮೋದಿ ಘೋಷಿಸಿದರು.
|
ರಾಮಕೃಷ್ಣ ಪರಮಹಂಸ ಹಾಗೂ ವಿವೇಕರ ಸಂಬಂಧ
ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದರ ನಡುವಿನ ಗುರು ಶಿಷ್ಯ ಸಂಬಂಧವನ್ನು ಸ್ಮರಿಸಿದ ಮೋದಿ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications