Sunita Williams: ಸುನಿತಾ ವಿಲಿಯಮ್ಸ್ ನಾಳೆಯೇ ಭೂಮಿಗೆ, ನಾಸಾ ಅಧಿಕೃತ ಘೋಷಣೆ!
ಭಾರತ ಮೂಲದ ಬಾಹ್ಯಾಕಾಶ ವಿಜ್ಞಾನಿ ಭೂಮಿಗೆ ಬರಲು ಪರದಾಡುತ್ತಿದ್ದರೆ, ಇತ್ತ ಭೂಮಿ ಮೇಲೆ ಇರುವ ವಿಜ್ಞಾನಿಗಳು ಚಿಂತೆ ಮಾಡುವಂತೆ ಆಗಿತ್ತು. ಕೆಲವೇ ಕೆಲವು ದಿನಗಳ ಕೆಲಸ ಅಂತಾ ಬಾಹ್ಯಾಕಾಶಕ್ಕೆ ಹಾರಿದ್ದ ಸುನಿತಾ ವಿಲಿಯಮ್ಸ್ ಬರೋಬ್ಬರಿ ಮುಕ್ಕಾಲು ವರ್ಷಗಳ ಕಾಲ ಅಂದ್ರೆ, 9 ತಿಂಗಳು ಆಕಾಶದಲ್ಲಿ ಸಿಲುಕಿ ಒದ್ದಾಡಿಬಿಟ್ಟರು. ಹೀಗಿದ್ದಾಗ ಸುರಕ್ಷಿತವಾಗಿ ಸುನಿತಾ ವಿಲಿಯಮ್ಸ್ ಅವರನ್ನು ಭೂಮಿಗೆ ಕರೆತರಲು ಇದೀಗ ನಾಸಾ ಸಂಸ್ಥೆ ಮುಂದಾಗಿದೆ.
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಜ್ಞಾನಿಗಳು ಅಧ್ಯಯನ ನಡೆಸುತ್ತಾರೆ. ಆ ಮೂಲಕ ಮನುಷ್ಯರ ಭವಿಷ್ಯಕ್ಕಾಗಿ ಪ್ರತಿದಿನವೂ ಹೊಸ ಹೊಸ ಅಧ್ಯಯನ ನಡೆಯುತ್ತಲೇ ಇರುತ್ತವೆ. ಹೀಗಿದ್ದಾಗ ಭೂಮಿ ಮೇಲಿಂದ ಆಗಾಗ ಬಾಹ್ಯಾಕಾಶ ವಿಜ್ಞಾನಿಗಳನ್ನು ಆಕಾಶಕ್ಕೆ ಕಳುಹಿಸುತ್ತದೆ ನಾಸಾ ಸಂಸ್ಥೆ. ಅದೇ ರೀತಿ ಭಾರತ ಮೂಲದ ಸುನಿತಾ ವಿಲಿಯಮ್ಸ್ ಅವರನ್ನ ಕೂಡ ನಾಸಾ ಸಂಸ್ಥೆ ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ಅಂತಿಮವಾಗಿ ಸುನಿತಾ ವಿಲಿಯಮ್ಸ್ರ ಸುರಕ್ಷತೆ ದೃಷ್ಟಿಯಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಬಿಟ್ಟು ಬರಲಾಗಿತ್ತು.

ನಾಳೆಯೇ ಸುನಿತಾ ವಿಲಿಯಮ್ಸ್ ಭೂಮಿಗೆ!
ಭಾರತ ಮೂಲದ ನಂಟು ಹೊಂದಿರುವ ಸುನಿತಾ ವಿಲಿಯಮ್ಸ್ ಅವರು ತಮ್ಮ ಬಾಹ್ಯಾಕಾಶ ಪ್ರವಾಸದಿಂದಲೇ ಖ್ಯಾತಿ ಪಡೆದಿದ್ದರು. ಹಲವು ಬಾರಿ ಬಾಹ್ಯಾಕಾಶಕ್ಕೆ ಹೋಗಿ ಬಂದಿದ್ದಾರೆ. ಇದೀಗ 9 ತಿಂಗಳ ನಂತರ ಮರಳಿ ಭೂಮಿಗೆ ವಾಪಸ್ ಬರುತ್ತಿದ್ದಾರೆ ಸುನಿತಾ ವಿಲಿಯಮ್ಸ್. ಮಾರ್ಚ್ 18ರ ಮಂಗಳವಾರ ಅಮೆರಿಕದ ಸ್ಥಳೀಯ ಕಾಲಮಾನ ಸಂಜೆ 5.57ಕ್ಕೆ ಇವರಿಬ್ಬರೂ ಭೂಮಿಗೆ ಬರಲಿದ್ದಾರೆ ಎಂದು ನಾಸಾ ತಿಳಿಸಿದೆ.
ಬಾಹ್ಯಾಕಾಶದಲ್ಲಿ 9 ತಿಂಗಳಿಂದ ನರಳಾಟ
ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ 2024ರ ಜೂನ್ 5 ರಂದು ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಗಗನಕ್ಕೆ ಹಾರಿದ್ದರು. ಕೇವಲ 8 ದಿನಗಳ ಕಾಲ ಅಲ್ಲಿ ಉಳಿದು, ಕಾರ್ಯಾಚರಣೆ ನಡೆಸಲು ಪ್ಲಾನ್ ಮಾಡಲಾಗಿತ್ತು. ಆದರೆ ದಿಢಿರ್ ಅಂತಾ ತಾಂತ್ರಿಕ ಸಮಸ್ಯೆ ಎದುರಾಗಿ ಗಗನಯಾತ್ರಿಗಳನ್ನ ಬಾಹ್ಯಾಕಾಶದಲ್ಲಿಯೇ ಬಿಟ್ಟು ಸ್ಟಾರ್ಲೈನರ್ ಭೂಮಿಗೆ ಮರಳಿ ಬಂದಿತ್ತು. ಹೀಗಾಗಿ ಕಳೆದ 9 ತಿಂಗಳಿಂದ ಅಲ್ಲಿಯೇ ಸಿಲುಕಿ ಒದ್ದಾಡಿದ್ದರು ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಅವರು.
ನಾಳೆಯೇ ಭೂಮಿಗೆ ಬರಲಿದ್ದಾರೆ!
'ನಾಸಾ' ಸೇರಿ ಜಗತ್ತಿನ ದೊಡ್ಡ ದೊಡ್ಡ ಬಾಹ್ಯಾಕಾಶ ಸಂಸ್ಥೆಗಳ ವಿಜ್ಞಾನಿಗಳು ಸಮಸ್ಯೆ ಸರಿ ಮಾಡಲು ಪ್ರಯತ್ನಿಸಿದ್ದರು. ಇದು ವರ್ಕೌಟ್ ಆಗದೇ ಕೊನೆಗೆ 'ಸ್ಪೇಸ್ ಎಕ್ಸ್' ನೌಕೆ ಆಕಾಶಕ್ಕೆ ಹಾರಿತ್ತು. ಸ್ಪೇಸ್ ಎಕ್ಸ್ ಬಾಹ್ಯಾಕಾಶ ಸಂಸ್ಥೆ ಡ್ಯ್ರಾಗನ್ ನೌಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಯಶಸ್ವಿಯಾಗಿ ತಲುಪಿ, ಹಲವು ತಿಂಗಳಿಂದಲೂ ಕಾರ್ಯಾಚರಣೆಯನ್ನ ನಡೆಸಿದೆ. ಇದರ ಫಲವಾಗಿ ಮಾರ್ಚ್ 18 ರಂದು ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ ಭೂಮಿಗೆ ಬಂದು ಇಳಿಯಲಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications