ಮಂಗಳನ ಅಂಗಳದಲ್ಲಿ ಭಾರತ-ಅಮೆರಿಕ ಜುಗಲ್ ಬಂದಿ
ವಾಷಿಂಗ್ ಟನ್, ಫೆಬ್ರವರಿ, 29: ಭಾರತದ ಸಂಶೋಧನಾ ಸಾಧನೆಗೆ ಮತ್ತೊಂದು ಗರಿ ಸಿಕ್ಕಿದೆ. ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಭಾರತದ ಮಂಗಳಯಾನದ ಯಶಸ್ಸನ್ನು ಕೊಂಡಾಡಿದ್ದು ಜಂಟಿಯಾಗಿ ಸಂಶೋಧನೆ ನಡೆಸಲು ಆಹ್ವಾನ ನೀಡಿದೆ.
ಭಾರತ ಮತ್ತು ಅಮೆರಿಕ ಜಂಟಿಯಾಗಿ ಮಂಗಳ ಗ್ರಹ ಶೋಧ ನಡೆಸಬಹುದು. ಭಾರತೀಯ ಗಗನ ಯಾತ್ರಿಯೊಬ್ಬರು ಜಂಟಿ ಯೋಜನೆ ಭಾಗವಾಗಿ ಮಂಗಳನ ಮೇಲೆ ಕಾಲಿಡಬಹುದು ಎಂದು ನಾಸಾದ ಜೆಟ್ ಪ್ರೊಪಲ್ಶನ್ ಲ್ಯಾಬೊರೇಟರಿಯ (ಜೆಪಿಎಲ್) ನಿರ್ದೇಶಕ ಚಾರ್ಲ್ಸ್ ಎಲಕಿ ಹೇಳಿದ್ದಾರೆ.[ಮಂಗಳನ ಅಂಗಳದ ಬೆರಗುಗೊಳಿಸುವ ಚಿತ್ರಗಳು]

ಮುಂದಿನ ದಶಕದಲ್ಲಿ ಮಂಗಳ ಗ್ರಹ ಯೋಜನೆಯನ್ನು ಹಮ್ಮಿಕೊಳ್ಳಲು ನಾಸಾ ನಿರ್ಧರಿಸಿದೆ. ಸದ್ಯವೇ ಈ ಬಗ್ಗೆ ಸಭೆಯನ್ನು ನಡೆಸಿ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಮಂಗಳನಲ್ಲಿಗೆ ಮಾನವ ಸಹಿತ ಯಾತ್ರೆಯ ಪೂರ್ವ ಸಿದ್ಧತೆಯನ್ನು ಆರಂಭಿಸಲಾಗುವುದು ಎಂದು ಚಾರ್ಲ್ಸ್ ತಿಳಿಸಿದ್ದಾರೆ.
ಕಡಿಮೆ ವೆಚ್ಚದಲ್ಲಿ ಭಾರತ ಮಂಗಳಯಾನಕ್ಕೆ ಸಂಬಂಧಿಸಿ ಮಾಡಿದ ಸಾಧನೆಯನ್ನು ಮೆಚ್ಚಲೇಬೇಕು. ಇಸ್ರೊದ ಸಾಮರ್ಥ್ಯದ ಬಗ್ಗೆ ಜಗತ್ತು ಅಚ್ಚರಿಗೊಂಡಿದೆ. ಹೀಗಾಗಿ ಇಸ್ರೊ ಜತೆಗೆ ಮಂಗಳ ಗ್ರಹ ಶೋಧ ಕಾರ್ಯಕ್ರಮ ನಡೆಸಲು ನಾಸಾ ಉತ್ಸುಕವಾಗಿದೆ ಎಂದು ಚಾರ್ಲ್ಸ್ ಹೇಳಿದ್ದಾರೆ.[ಮಂಗಳನ ಮೇಲಿನ ಸೂರ್ಯಾಸ್ತ ದೃಶ್ಯ ಹೇಗಿರುತ್ತದೆ?]
ಅಲ್ಲದೇ ಅಮೆರಿಕ, ಯುರೋಪ್, ಫ್ರಾನ್ಸ್ ಮತ್ತು ಇಟಲಿಯನ್ನು ಒಳಗೊಂಡ ಬಾಹ್ಯಾಕಾಶ ಸಂಶೋಧನಾ ಗುಂಪಿಗೆ ಭಾರತವೂ ಸೇರಬೇಕು. ನಿಸಾರ್ ಎಂಬ ಹೆಸರಿನ ವಿನೂತನ ಕಾರ್ಯಕ್ರಮವೊಂದನ್ನು ನಾಸಾ ಮತ್ತು ಇಸ್ರೊ ಸಹಭಾಗಿತ್ವದಲ್ಲಿ 2020ರ ವೇಳೆಗೆ ಆರಂಭಗೊಳ್ಳಲಿದೆ. ಜಗತ್ತಿನಾದ್ಯಂತ ಇರುವ ನೈಸರ್ಗಿಕ ಸಂಪನ್ಮೂಲಗಳನ್ನು ಗುರುತಿಸುವಿಕೆ, ನೈಸರ್ಗಿಕ ವಿಕೋಪಗಳ ಮಾಹಿತಿ ಪಡೆಯುವುದು, ಹವಾಮಾನ ಬದಲಾವಣೆ ತಿಳಿವಳಿಕೆ ಇದರ ಪ್ರಮುಖ ಉದ್ದೇಶವಾಗಿರುತ್ತದೆ ಎಂದು ಚಾರ್ಲ್ಸ್ ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications