ಕಾರ್ಗಿಲ್ ಯುದ್ಧ ನಡೆಯಲು ಇದೇ ಕಾರಣ: ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್ ತಪ್ಪೊಪ್ಪಿಗೆ
ಇಷ್ಟು ದಿನ ತಾನು ಮಾಡಿದ ತಪ್ಪುಗಳನ್ನೇ ಬೇರೆಯವರತ್ತ ಬೊಟ್ಟು ಮಾಡಿ ತೋರಿಸುತ್ತಿದ್ದ ಪಾಕಿಸ್ತಾನ, ಕೊನೆಗೂ ಸತ್ಯವನ್ನು ಅರ್ಥ ಮಾಡಿಕೊಂಡು ಜಗತ್ತಿನ ಮುಂದೆ ತೆರೆದಿಟ್ಟಿದೆ. ಅಲ್ಲದೆ ಕಾರ್ಗಿಲ್ ಯುದ್ಧ ನಡೆಯಲು ಸಹ ಇದೇ ತಪ್ಪು ಕಾರಣ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ.
ಕಾರ್ಗಿಲ್ ಯುದ್ಧವೂ ಮುಗಿದು 25 ವರ್ಷಗಳೇ ಕಳೆದಿವೆ. ಅಷ್ಟೇ ಏಕೆ ಮಾಜಿ ಪ್ರಧಾನಿ ನವಾಜ್ ಶರೀಫ್ ಹೇಳುತ್ತಿರುವ ಒಪ್ಪಂದ ಆಗಿ 26 ವರ್ಷಗಳೇ ಸಂದಿವೆ. ಈ ಸಮಯದಲ್ಲಿ ನವಾಜ್ ಶರೀಪ್ ಆ ಒಂದು ತಪ್ಪನ್ನು ಪಾಕಿಸ್ತಾನ ಮಾಡಿದೆ ಎಂದು ಶರೀಫ್ ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದೊಂದಿಗೆ ಸಹಿ ಮಾಡಿದ್ದ 1999ರ ಒಪ್ಪಂದವನ್ನು ಪಾಕ್ ಉಲ್ಲಂಘಿಸಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮಂಗಳವಾರ ಒಪ್ಪಿಕೊಂಡಿದ್ದಾರೆ. ಕಾರ್ಗಿಲ್ನಲ್ಲಿ ಜನರಲ್ ಪರ್ವೇಜ್ ಮುಷರಫ್ ನಡೆಸಿದ ದಾಳಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿದ ಅವರು ಹೀಗೆ ಹೇಳಿದ್ದಾರೆ.
ಶರೀಫ್ ಹೇಳಿದ್ದೇನು?
ಆಡಳಿತಾರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪಕ್ಷದ ಸಾಮಾನ್ಯ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಹಿಂದಿನ ಘಟನೆಯನ್ನು ಮೆಲಕು ಹಾಕಿದ್ದಾರೆ. ಮೇ 28, 1998 ರಂದು ಪಾಕಿಸ್ತಾನ ಐದು ಪರಮಾಣು ಪರೀಕ್ಷೆಗಳನ್ನು ನಡೆಸಿತು. ಆ ನಂತರ ವಾಜಪೇಯಿ ಸಾಹೇಬರು ಇಲ್ಲಿಗೆ ಬಂದು ನಮ್ಮೊಂದಿಗೆ ರಾಜಿ ಮಾಡಿಕೊಂಡರು. ಆದರೆ, ನಾವು ಆ ಒಪ್ಪಂದವನ್ನು ಉಲ್ಲಂಘಿಸಿದ್ದೇವೆ. ಅದು ನಮ್ಮ ತಪ್ಪು ಎಂದು ಶರೀಫ್ ಹೇಳಿದ್ದಾರೆ.
ಕ್ಲಿಂಟನ್ ಆಫರ್ ನಿರಾಕರಣೆ
ಪಾಕಿಸ್ತಾನದ ಪರಮಾಣು ಪರೀಕ್ಷೆಗಳ 26 ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆಯ ವೇಳೆ ಮಾತನಾಡಿದ ನವಾಜ್ ಷರೀಫ್, ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ಪಾಕಿಸ್ತಾನವನ್ನು ಪರಮಾಣು ಪರೀಕ್ಷೆಗಳನ್ನು ನಡೆಸದಂತೆ ಐದು ಬಿಲಿಯನ್ ಯುಎಸ್ ಡಾಲರ್ಗಳನ್ನು ನೀಡುವುದಾಗಿ ತಿಳಿಸಿದ್ದರು. ಆದರೆ ನಾನು ನಿರಾಕರಿಸಿದೆ. ಇಮ್ರಾನ್ ಖಾನ್ ಅವರಂತಹ ವ್ಯಕ್ತಿ ನನ್ನ ಸ್ಥಾನದಲ್ಲಿದ್ದರೆ, ಅವರು ಕ್ಲಿಂಟನ್ ಅವರ ಪ್ರಸ್ತಾಪವನ್ನು ಸ್ವೀಕರಿಸುತ್ತಿದ್ದರು ಎಂದು ಹೇಳಿದ್ದಾರೆ.

ಒಪ್ಪಂದ ಏನು?
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಫೆಬ್ರವರಿ 21, 1999 ರಂದು ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದರು. ಉಭಯ ದೇಶಗಳ ನಡುವಿನ ಶಾಂತಿ ಮತ್ತು ಸ್ಥಿರತೆಯ ದೃಷ್ಟಿಯ ಬಗ್ಗೆ ಮಾತನಾಡಿದ ಈ ಒಪ್ಪಂದವು ಪ್ರಮುಖ ಯಶಸ್ಸನ್ನು ಸೂಚಿಸಿತ್ತು. ಆದರೆ ಕೆಲವು ತಿಂಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ನಲ್ಲಿ ಪಾಕಿಸ್ತಾನದ ಒಳನುಸುಳುವಿಕೆಯಿಂದಾಗಿ ಕಾರ್ಗಿಲ್ ಯುದ್ಧ ಪ್ರಾರಂಭವಾಯಿತು.
ಆರು ವರ್ಷಗಳ ಬಳಿಕ ಅಧ್ಯಕ್ಷ
ಪಾಕ್ ಮಾಜಿ ಪ್ರಧಾನಿ ಆರು ವರ್ಷಗಳ ಬಳಿಕ ಪಿಎಂಎಲ್ಎನ್ ಅಧ್ಯಕ್ಷರಾಗಿ ಅವಿರೋಧವಾಗಿ ಮಂಗಳವಾರ ಆಯ್ಕೆ ಆದರು. ಕಳೆದ ವರ್ಷ ಅವರು ತಮ್ಮ ಮೇಲಿನ ಎಲ್ಲ ಭ್ರಷ್ಟಾಚಾರ ಪ್ರಕರಣದಿಂದ ಖುಲಾಸೆ ಗೊಂಡಿದ್ದಾರೆ. ಪನಾಮ ಪೇಪರ್ಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡ ಆರು ವರ್ಷಗಳ ನಂತರ ಪಿಎಂಎಲ್-ಎನ್ ಮುಖ್ಯಸ್ಥರು ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications