ದಿನದಿನಕ್ಕೂ ಹದಗೆಡುತ್ತಿದೆ ಜೈಲಲ್ಲಿರುವ ನವಾಜ್ ಷರೀಫ್ ಆರೋಗ್ಯ
ಇಸ್ಲಾಮಾಬಾದ್ (ಪಾಕಿಸ್ತಾನ), ಮಾರ್ಚ್ 24: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ದಿನದಿನಕ್ಕೂ ಹದಗೆಡುತ್ತಿದೆ. ಜೈಲಿನಲ್ಲಿರುವ ಅವರಿಗೆ ಮೂತ್ರಪಿಂಡದ ಸಮಸ್ಯೆ ಉಲ್ಬಣಿಸುತ್ತಲೇ ಇದ್ದು, ಅವರ ಆರೋಗ್ಯದ ಬಗ್ಗೆ ಆತಂಕ ಹೆಚ್ಚಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ವರಿಷ್ಠರ ಮಗಳು ಮರ್ಯಂ ನವಾಜ್ ಹದಗೆಡುತ್ತಿರುವ ಆರೋಗ್ಯದ ಬಗ್ಗೆ ಶನಿವಾರ ಟ್ವೀಟ್ ಮಾಡಿದ್ದಾರೆ. ಕೋಟ್ ಲಖ್ ಪತ್ ಜೈಲಿಗೆ ಆಕೆಯು ವೈದ್ಯ ಅದ್ನಾನ್ ಖಾನ್ ಜತೆಗೆ ತೆರಳಿದ್ದರು. ಇದಕ್ಕಾಗಿ ದೇಶದ ಆಂತರಿಕ ಸಚಿವಾಲಯದಿಂದ ಒಪ್ಪಿಗೆ ಪಡೆದಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಅರವತ್ತೊಂಬತ್ತು ವರ್ಷದ ನವಾಜ್ ಷರೀಫ್ ಕಳೆದ ವರ್ಷದ ಡಿಸೆಂಬರ್ ನಿಂದ ಜೈಲಿನಲ್ಲಿ ಇದ್ದಾರೆ. ಅಲ್ ಅಜಿಜಿಯಾ ಸ್ಟೀಲ್ ಮಿಲ್ಸ್ ಲಂಚ ಪ್ರಕರಣದಲ್ಲಿ ಅವರಿಗೆ ಏಳು ವರ್ಷದ ಜೈಲು ಶಿಕ್ಷೆಯಾಗಿದೆ. ತನ್ನ ತಂದೆಯನ್ನು ಜೈಲಿನಲ್ಲಿ ಭೇಟಿಯಾದ ಮರ್ಯಂ, ಆ ನಂತರ ಟ್ವೀಟ್ ಮಾಡಿ, ನವಾಜ್ ಷರೀಫ್ ಮೂತ್ರಪಿಂಡ ಸಮಸ್ಯೆ ಮೂರನೇ ಹಂತ ತಲುಪಿದೆ. ಅವರ ತೋಳಿನಲ್ಲಿ ನೋವು ಕಾಣಿಸಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಮಾಡಿದ ರಕ್ತ ಪರೀಕ್ಷೆಯಲ್ಲಿ ಅವರಿಗೆ ಕ್ರೆಟಿನೈನ್ ಮಟ್ಟದಲ್ಲಿ ಏರಿಕೆಯಾಗಿದೆ. ಅದರರ್ಥ ಮೂತ್ರಪಿಂಡ ಕೆಲಸ ಮಾಡುವುದು ಕಡಿಮೆ ಆಗುತ್ತದೆ. ಅವರಿಗೆ ಕಿಡ್ನಿ ಸಮಸ್ಯೆ ಮೂರನೇ ಹಂತದಲ್ಲಿದೆ. ತಜ್ಞರೊಬ್ಬರನ್ನು ಜೈಲಿನೊಳಗೆ ಕಳುಹಿಸಿ, ವೈಯಕ್ತಿಕ ವೈದ್ಯರ ಸಮ್ಮುಖದಲ್ಲೇ ಚಿಕಿತ್ಸೆ ದೊರಕಿಸಲು ಅವಕಾಶ ನೀಡಬೇಕು ಎಂದು ಮರ್ಯಂ ಮನವಿ ಮಾಡಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications