ನವನಾಜಿಗಳ ನಿರ್ಮೂಲನೆಯನ್ನು ಮಾಡೇ ಮಾಡುತ್ತೇವೆ ಎಂದ ರಷ್ಯಾ
ಮಾಸ್ಕೋ, ಮಾರ್ಚ್ 04: ನವನಾಜಿಗಳ ನಿರ್ಮೂಲನೆ ಶತಃ ಸಿದ್ಧ ಎಂದು ಘೋಷಣೆ ಮಾಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಭಾರತೀಯರನ್ನು ಮಾನವ ಗುರಾಣಿಗಳಾಗಿ ಉಕ್ರೇನ್ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಉಕ್ರೇನ್ ಕಾಲೇಜುಗಳಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಂದ ವಿದೇಶಿ ನಾಗರಿಕರನ್ನು ಒತ್ತೆಯಾಳುಗಳಾಗಿ ತೆಗೆದುಕೊಳ್ಳುತ್ತಿದ್ದಾರೆ. ಶಿಶುವಿಹಾರಗಳಿಂದ, ಆಸ್ಪತ್ರೆಗಳಿಂದ, ಅವರು ತಮ್ಮ ಬಂದೂಕುಗಳು, ಟ್ಯಾಂಕ್ಗಳು, ಫಿರಂಗಿಗಳ ಬಳಕೆ ಮಾಡುತ್ತಿದ್ದಾರೆ.
ಸುಮಾರು 3000 ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನಿಯನ್ 'ನವ-ನಾಜಿಸ್' ಘಟಕಗಳು ಒತ್ತೆಯಾಳುಗಳಾಗಿ ತೆಗೆದುಕೊಂಡಿವೆ. ಅವರು ಸುಮಿಯಲ್ಲಿ 576 ಜನರನ್ನು ಒಳಗೊಂಡಂತೆ 3,000 ಕ್ಕೂ ಹೆಚ್ಚು ಭಾರತೀಯ ನಾಗರಿಕರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ. ನವ-ನಾಜಿಗಳು ಖಾರ್ಕಿವ್ ತೊರೆಯಲು ಬಯಸಿದ ಚೀನಾದ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಅವರಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪುಟಿನ್ ಆರೋಪಿಸಿದ್ದಾರೆ.

ಉಕ್ರೇನ್ ಮೇಲಿನ ರಷ್ಯಾ ಸೇನಾ ದಾಳಿ ಮುಂದುವರೆದಿದ್ದು, ಏತನ್ಮಧ್ಯೆ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯನ್ನು ಟೆಲೀಕೃತ ವಿಧಾನದ ಮೂಲಕ ಉದ್ಘಾಟಿಸಿದ ಪುಟಿನ್ ಅವರು, ರಷ್ಯನ್ನರು ಮತ್ತು ಉಕ್ರೇನಿಯನ್ನರು ಒಂದೇ ಎಂಬ ನಿಲುವನ್ನು ಬಿಡುವ ಪ್ರಶ್ನೆಯೇ ಇಲ್ಲ. ನವನಾಜಿಗಳ ನಿರ್ಮೂಲನೆ ಶತಃ ಸಿದ್ಧ ಎಂದು ಹೇಳಿದ್ದಾರೆ.
ರಷ್ಯಾದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯಲ್ಲಿ ಯಾವುದೇ ರಾಜಿ ಇಲ್ಲದ ಹೋರಾಟವನ್ನು ರಾಷ್ಟ್ರೀಯವಾದಿ ಸಶಸ್ತ್ರ ಗುಂಪುಗಳ ವಿರುದ್ಧ ಮುಂದುವರಿಸಲು ರಷ್ಯಾ ಉದ್ದೇಶಿಸಿದೆ. ನಾವು ನವ-ನಾಜಿಗಳೊಂದಿಗೆ ಹೋರಾಡುತ್ತಿದ್ದೇವೆ ಎಂಬ ಅಂಶವು ಹಗೆತನ ಹೇಗೆ ನಡೆಯುತ್ತಿದೆ ಎಂಬುದರ ಮೂಲಕ ಸಾಬೀತಾಗಿದೆ, ರಾಷ್ಟ್ರೀಯತಾವಾದಿ ನವ-ನಾಜಿಯ ಘಟಕಗಳು ಮಧ್ಯಪ್ರಾಚ್ಯದಿಂದ ವಿದೇಶಿ ಕೂಲಿ ಸೈನಿಕರನ್ನು ಬಳಸುತ್ತಿವೆ. ಅಲ್ಲದೆ, ಅವರು ನಾಗರಿಕರನ್ನು ಮಾನವ ಗುರಾಣಿಗಳಂತೆ ಬಳಸುತ್ತಿದ್ದಾರೆ.
ಅವರ ಬೆನ್ನಿನ ಹಿಂದೆ ಅವರು ಅಡಗಿಕೊಳ್ಳುತ್ತಿದ್ದಾರೆ. ಉಕ್ರೇನಿಯನ್ ಪಡೆಗಳು ಅವರನ್ನು ಒತ್ತೆಯಾಳಾಗಿ ತೆಗೆದುಕೊಳ್ಳುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಉಕ್ರೇನ್ನ ಸಂಘರ್ಷ ವಲಯಗಳಲ್ಲಿ ಸಿಲುಕಿರುವ ಮಾಸ್ಕೋ ಮತ್ತು ಕೀವ್ ನಾಗರಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲು ಎರಡು ದೇಶಗಳು 'ಮಾನವೀಯ ಕಾರಿಡಾರ್ಗಳನ್ನು' ಸ್ಥಾಪಿಸಿದ್ದು, ಯುದ್ಧದ ಸ್ಥಳಗಳಿಗೆ ಔಷಧಗಳು ಮತ್ತು ಆಹಾರವನ್ನು ತಲುಪಿಸಲು ಮಾನವೀಯ ಕಾರ್ಯ ಸಾಗುತ್ತಿದೆ ಎಂದು ಉಕ್ರೇನ್ ನಿಯೋಗದ ಸದಸ್ಯ ಮಿಖಾಯಿಲ್ ಪೊಡೊಲ್ಯಾಕ್ ಹೇಳಿದ್ದಾರೆ.
ಉಕ್ರೇನ್ನಲ್ಲಿ ಸಾರ್ವಜನಿಕರ ಸ್ಥಳಾಂತರ ಕಾರ್ಯ ನಡೆಯುತ್ತಿರುವ ವಲಯಗಳಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಜಾರಿಯಾಗುವ ಸಾಧ್ಯತೆ ಇದೆ ಎಂದು ಆರ್ಟಿ ವರದಿ ಮಾಡಿದೆ. ಪೊಡೊಲ್ಯಾಕ್ ನೀಡಿರುವ ಮಾಹಿತಿ ಪ್ರಕಾರ, ಕೀವ್ ಮತ್ತು ಮಾಸ್ಕೋದ ಪ್ರತಿನಿಧಿಗಳ ನಡುವಿನ ಮಾತುಕತೆಯ ಸಮಯದಲ್ಲಿ ಮಾನವೀಯ ಅಂಶಗಳ ಕುರಿತು ವಿವರವಾಗಿ ಚರ್ಚಿಸಲಾಗಿದೆ. ಜೊತೆಗೆ ಇಲ್ಲಿನ ಜನರಿಗೆ ಮಾನವೀಯ ಕಾರಿಡಾರ್ಗಳ ಕುರಿತು ತಿಳಿವಳಿಕೆ ಕೂಡಾ ನೀಡಲಾಗುತ್ತಿದೆ .
ರಷ್ಯಾ ಮತ್ತು ಉಕ್ರೇನಿಯನ್ ನಿಯೋಗಗಳ ನಡುವೆ ನಡೆದ ಮಾತುಕತೆಯಲ್ಲಿ ಮೂರು ವಿಷಯಗಳ ಬಗ್ಗೆ ವಿವರವಾಗಿ ಚರ್ಚಿಸಿದ್ದೇವೆ, ಮಿಲಿಟರಿ ಸಮಸ್ಯೆ, ಅಂತಾರಾಷ್ಟ್ರೀಯ ಮಾನವೀಯತೆ ಮತ್ತು ಭವಿಷ್ಯದ ರಾಜಕೀಯ ಇತ್ಯರ್ಥದ ಕುರಿತು ಚರ್ಚಿಸಲಾಗಿದೆ ಎಂದು ರಷ್ಯಾದ ನಿಯೋಗದ ಮುಖ್ಯಸ್ಥ ವ್ಲಾಡಿಮಿರ್ ಮೆಡಿನ್ಸ್ಕಿ ಹೇಳಿದ್ದಾರೆ.
Recommended Video
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications