ಮೌಂಟ್ ಎವರೆಸ್ಟ್ ಸ್ವಚ್ಛತಾ ಅಭಿಯಾನ, 3,000 ಕೆಜಿ ತ್ಯಾಜ್ಯ ಸಂಗ್ರಹ
ಕಠ್ಮಂಡು, ಏಪ್ರಿಲ್ 29: ನೇಪಾಳದಲ್ಲಿ ಹೊಸ ವರ್ಷದ ಆಚರಣೆಯ ಅಂಗವಾಗಿ ಈ ಬಾರಿ ಕೂಡಾ ಮೌಂಟ್ ಎವರೆಸ್ಟ್ ಪರ್ವತ ಶ್ರೇಣಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಇಲ್ಲಿನ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದೆ. ಏಪ್ರಿಲ್ 14ರಿಂದ ಇಲ್ಲಿ ತನಕ ಸರಿ ಸುಮಾರು 3,000 ಕೆಜಿ ಘನ ತ್ಯಾಜ್ಯ ಸಂಗ್ರಹಿಸಲಾಗಿದೆ.
ಏಪ್ರಿಲ್ 14ರಿಂದ 45 ದಿನಗಳ ಕಾಲ ಈ ಸ್ವಚ್ಛತಾ ಅಭಿಯಾನ ಜಾರಿಯಲ್ಲಿರುತ್ತದೆ ಎಂದು ಸೊಲೊಖುಂಬು ಜಿಲ್ಲೆಯ ಪಸಂಗ್ ಲ್ಹುಮು ಗ್ರಾಮೀಣ ಮುನ್ಸಿಪಾಲಿಟಿ ಹೇಳಿದೆ. ಸುಮಾರು 10,000 ಕೆಜಿಯಷ್ಟು ತ್ಯಾಜ್ಯ ಸಂಗ್ರಹ ಗುರಿ ಹೊಂದಲಾಗಿದೆ.
ಸದ್ಯ ಸಂಗ್ರಹವಾಗಿರುವ 3,000 ಕೆಜಿಯಲ್ಲಿ 2,000 ಕೆಜಿ ತ್ಯಾಜ್ಯವನ್ನು ಒಖ್ಲಧುಂಗಾಗೆ 1,000 ಕೆಜಿಯನ್ನು ಕಠ್ಮಂಡುವಿಗೆ ಸಂಸ್ಕರಣೆಗೆ ಕಳಿಸಲಾಗುತ್ತದೆ ಎಂದು ನೇಪಾಳಿ ಆರ್ಮಿ ಹೆಲಿಕಾಪ್ಟರ್ ಗೆ ಬಳಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ನಿರ್ದೇಶಕ ದಂಡು ರಾಜ್ ಘಿಮಿರೆ ಹೇಳಿದರು.

ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ 5,000ಕೆಜಿಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆಯಿದೆ. ಕ್ಯಾಂಪ್ 2 ಹಾಗೂ 3 ಸೇರಿದಂತೆ 3000 ಕೆಜಿ ತ್ಯಾಜ್ಯ ಸಂಗ್ರಹ ಗುರಿಯಿದೆ. ತ್ಯಾಜ್ಯದ ಜೊತೆಗೆ ಟ್ರೆಕ್ಕಿಂಗ್ ಸಂದರ್ಭದಲ್ಲಿ ಮೃತಪಟ್ಟು ಅಲ್ಲೇ ಉಳಿದ ಶವಗಳಿದ್ದರೆ, ಅವುಗಳನ್ನು ಕೆಳಗಿಳಿಸಲಾಗುತ್ತದೆ.
ಈ ಋತುವಿನಲ್ಲಿ 500 ವಿದೇಶಿ ಟ್ರೆಕ್ಕರ್ಸ್ ಸೇರಿದಂತೆ 1,000ಕ್ಕೂ ಅಧಿಕ ಟ್ರೆಕ್ಕರ್ಸ್ ಎವರೆಸ್ಟ್ ಬೇಸ್ ಕ್ಯಾಂಪ್ ಹಾಗೂ ಅದಕ್ಕಿಂತ ಮೇಲ್ಪಟ್ಟದ ಆರೋಹಣಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ. ಎವರೆಸ್ಟ್ ಶ್ರೇಣಿಯನ್ನು ವಿಶ್ವದ ಅತಿದೊಡ್ಡ ಕಸದ ತೊಟ್ಟಿಯಾಗಲು ಬಿಡುವುದಿಲ್ಲ ಎದು ದಂಡುರಾಜ್ ಹೇಳಿದ್ದಾರೆ.
ಈ ಸ್ವಚ್ಛತಾ ಅಭಿಯಾನವು ಮೇ 29ರಂದು ಮುಕ್ತಾಯವಾಗಲಿದ್ದು, 1953ರಲ್ಲಿ ಮೊಟ್ಟ ಮೊದಲಬಾರಿಗೆ ತೇನ್ ಸಿಂಗ್ ನಾರ್ಗೆ ಹಾಗೂ ಎಡ್ಮಂಡ್ ಹಿಲರಿ ಅವರು ಎವರೆಸ್ಟ್/ ಸಾಗರಮಾತ/ ಚೊಮೊಲ್ಮುಂಗಾ ಹತ್ತಿದ ಸಾಧನೆ ಮಾಡಿದ್ದರು. ಜೂನ್ 05ರ ಪರಿಸರ ದಿನದಂದು ಈ ತ್ಯಾಜ್ಯವನ್ನು ಪ್ರದರ್ಶನ ಮಾಡಿ ನಂತರ ಮರು ಬಳಕೆಗಾಗಿ ಸಂಸ್ಕರಣೆ ಮಾಡಲಾಗುತ್ತದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications