ನೇಪಾಳ ಚುನಾವಣೆ: ಹಾಲಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾಗೆ ಗೆಲುವು
ಕಠ್ಮಂಡು, ನವೆಂಬರ್ 23: ಪಶ್ಚಿಮ ನೇಪಾಳದ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಸತತ 7 ಬಾರಿಗೆ ಭಾರಿ ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ದೇವುಬಾ ನೇತೃತ್ವದ ನೇಪಾಳಿ ಕಾಂಗ್ರೆಸ್ ಪಕ್ಷವು ಇಲ್ಲಿಯವರೆಗೆ 11 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. 7 ಪ್ರಾಂತ್ಯಗಳ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಶಾಸಕಾಂಗಗಳ ಸಭೆಗಳಿಗೆ ಕಳೆದ ಭಾನುವಾರ ಸಾರ್ವತ್ರಿಕ ಮತದಾನ ನಡೆದಿತ್ತು. ಸೋಮವಾರದಿಂದ ಮತ ಎಣಿಕೆ ಭರದಿಂದ ಸಾಗಿದೆ
77 ವರ್ಷದ ನೇಪಾಳ ಪ್ರಧಾನಿ ದೇವುಬಾ ಅವರು ಒಟ್ಟು 25,534 ಮತಗಳನ್ನು ಪಡೆದು ವಿಜಯ ಸಾಧಿಸಿದರೆ, ದೇವುಬಾ ವಿರುದ್ಧ ಚುನಾವಣೆ ಕಣದಲ್ಲಿದ್ದ ಪ್ರತಿಸ್ಪರ್ಧಿ ಮತ್ತು ಸ್ವತಂತ್ರ ಅಭ್ಯರ್ಥಿ ಸಾಗರ್ ಧಕಲ್ (31) ಒಟ್ಟು 1,302 ಮತಗಳನ್ನು ಪಡೆದು ಸೋಲುಂಡಿದ್ದಾರೆ. 5 ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ ದೇವಬಾ ಅವರು ಯಾವುದೇ ಸಂಸತ್ ಚುನಾವಣೆಯಲ್ಲಿ ಸೋತಿಲ್ಲ. ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ದೇವುಬಾ ಪ್ರಸ್ತುತ ಐದನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ.

ನೇಪಾಳಿ ಕಾಂಗ್ರೆಸ್ 46 ಸ್ಥಾನಗಳ ಮುನ್ನಡೆ
ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ ಆಡಳಿತಾರೂಢ ನೇಪಾಳಿ ಕಾಂಗ್ರೆಸ್ ಇದುವರೆಗೆ 11 ಸ್ಥಾನಗಳನ್ನು ಗೆದ್ದು ಬೀಗಿದ್ದು, ಒಟ್ಟು 46 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಾಜಿ ಪ್ರಧಾನಿ ಕೆಪಿ ಒಲಿ ನೇತೃತ್ವದ ಪ್ರಮುಖ ವಿರೋಧ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸಿಸ್ಟ್-ಲೆನಿನಿಸ್ಟ್ (ಸಿಪಿಎನ್-ಯುಎಂಎಲ್ ) ಪಕ್ಷವು ಸದ್ಯ ಮೂರು ಸ್ಥಾನಗಳನ್ನು ಗೆದ್ದಿದೆ, ಇನ್ನು ಆಡಳಿತಾರೂಢ ನೇಪಾಳಿ ಕಾಂಗ್ರೆಸ್ ಒಟ್ಟು 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಹೊಸದಾಗಿ ರಚನೆಯಾದ ರಾಷ್ಟ್ರೀಯ ಸ್ವತಂತ್ರ ಪಕ್ಷವು ಕಠ್ಮಂಡು ಜಿಲ್ಲೆಯಲ್ಲಿ ಮೂರು ಸ್ಥಾನಗಳನ್ನು ಗೆದ್ದಿದೆ. ರಾಷ್ಟ್ರೀಯ ಪ್ರಜಾತಂತ್ರ ಪಕ್ಷ, ಸಿಪಿಎನ್-ಯುನಿಫೈಡ್ ಸೋಷಿಯಲಿಸ್ಟ್ ಮತ್ತು ಸಿವಿಲ್ ಲಿಬರೇಶನ್ ಪಾರ್ಟಿ ತಲಾ ಒಂದೊಂದು ಸ್ಥಾನ ಪಡೆದಿವೆ. ಇದುವರೆಗೆ 20 ಸ್ಥಾನಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಫೆಡರಲ್ ಸಂಸತ್ತಿನ 275 ಸ್ಥಾನಗಳಿಗೆ ಮತ್ತು ನೇಪಾಳದ 7 ಪ್ರಾಂತೀಯ ಅಸೆಂಬ್ಲಿಗಳಲ್ಲಿ ಒಟ್ಟು 550 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಫಲಿತಾಂಶ ಮಾತ್ರ ಬಾಕಿ ಉಳಿದುಕೊಂಡಿದೆ.

ಫೆಡರಲ್ ಸಂಸತ್ತಿನ ಒಟ್ಟು 275 ಸದಸ್ಯರಲ್ಲಿ 165 ಮಂದಿ ನೇರ ಮತದಾನದ ಮೂಲಕ ಚುನಾಯಿತರಾಗುತ್ತಾರೆ. ಉಳಿದ 110 ಮಂದಿಯನ್ನು 'ಅನುಪಾತದ ಚುನಾವಣಾ ವ್ಯವಸ್ಥೆ' ಮೂಲಕ ಆಯ್ಕೆ ಮಾಡಲಾಗುತ್ತದೆ. ಇದೇ ರೀತಿ, ಪ್ರಾಂತೀಯ ವಿಧಾನಸಭೆಗಳ ಒಟ್ಟು 550 ಸದಸ್ಯರಲ್ಲಿ 330 ಮಂದಿ ನೇರವಾಗಿ ಚುನಾಯಿತರಾದರೆ, ಉಳಿದ 220 ಅಭ್ಯರ್ಥಿಗಳು ಅನುಪಾತ ಪದ್ಧತಿಯ ಮೂಲಕ ಆಯ್ಕೆಯಾಗಲಿದ್ದಾರೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications