25,00,00,00,000 ರೂಪಾಯಿ ನಷ್ಟದಲ್ಲಿ ನರಳುತ್ತಿರುವ ಭಾರತದ ನೆರೆಯ ದೇಶ... Nepal News
ನೇಪಾಳ ನೆಲದಲ್ಲಿ ಹೊತ್ತಿಕೊಂಡ ಬೆಂಕಿಯ ಕಿಡಿ ನಿಧಾನವಾಗಿ ತಣ್ಣಗಾಗಿದ್ದರೂ, ಇದೀಗ ಅಲ್ಲಿರುವ ಜನರಿಗೆ ಮಾತ್ರ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದೆ. ನೇಪಾಳ ದೇಶಕ್ಕೆ ಭಾರಿ ದೊಡ್ಡ ಪೆಟ್ಟು ಕೊಟ್ಟ Gen Z ಹೋರಾಟ ಇದೀಗ ಒಂದಷ್ಟು ಹಿಡಿತಕ್ಕೆ ಸಿಕ್ಕಿದೆ ನಿಜ, ಆದರೆ ಸತತ ಹೋರಾಟ & ಹಿಂಸಾಚಾರ ಪರಿಣಾಮ ಇಡೀ ನೇಪಾಳ ಸುಟ್ಟು ಭಸ್ಮವಾಗುವ ಹಂತಕ್ಕೆ ತಲುಪಿದೆ. ಅದರಲ್ಲೂ ಪ್ರವಾಸೋದ್ಯಮ ನಂಬಿ ಬದುಕುತ್ತಿರುವ ನೇಪಾಳದಲ್ಲಿ ಒಂದೇ ಒಂದು ಹೋರಾಟ ಎಷ್ಟು ಸಾವಿರ ಕೋಟಿ ರೂಪಾಯಿ ನಷ್ಟ ಉಂಟು ಮಾಡಿದೆ ಗೊತ್ತಾ?
ಸೋಷಿಯಲ್ ಮೀಡಿಯಾ ಇಲ್ಲದೇ ಬದುಕಲ್ಲ ಎನ್ನುವಷ್ಟು ಯುವತಿ, ಯುವಕರು ಈಗ ಜಗತ್ತಿನ ಮೂಲೆ ಮೂಲೆಯಲ್ಲೂ ಅಂಟಿಕೊಂಡಿದ್ದಾರೆ. ಒಂದು ಹೊತ್ತು ಊಟ ಕಡಿಮೆ ಆದರೂ ಪರವಾಗಿಲ್ಲ ಆದರೆ 1 ಜಿಬಿ ನೆಟ್ ಕಡಿಮೆ ಆಗಬಾರದು ಅನ್ನೋದು ಈಗಿನ ಯುವತಿ & ಯುವಕರ ಆಗ್ರಹ. ಹೀಗೆ ಸೋಷಿಯಲ್ ಮೀಡಿಯಾ ಮೂಲಕ ರೀಲ್ಸ್ ಮಾಡಿ ತಿಂಗಳಿಗೆ 10 ಲಕ್ಷ ರೂಪಾಯಿ & 20 ಲಕ್ಷ ರೂಪಾಯಿ ಹಣ ಗಳಿಸುವ ಸೋಷಿಯಲ್ ಮೀಡಿಯಾ ಸ್ಟಾರ್ಸ್ ಇದ್ದಾರೆ. ಆದ್ರೆ ನೇಪಾಳ ದೇಶದಲ್ಲಿ ಇದೇ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಿದ್ದ ವಿಚಾರವೇ ದೊಡ್ಡ ಕ್ರಾಂತಿಯ ಕಿಡಿ ಹೊತ್ತಿಸಿತ್ತು!

25,00,00,00,000 ರೂಪಾಯಿ ನಷ್ಟ...
ನೇಪಾಳದಲ್ಲಿ ಶುರುವಾಗಿದ್ದ ಹೋರಾಟದ ಬೆಂಕಿ ಇಡೀ ದೇಶವನ್ನೇ ಸುಟ್ಟು ಹಾಕಿತ್ತು. ದಿಢೀರ್ ನೇಪಾಳ ಸರ್ಕಾರ ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿ 26 ದೊಡ್ಡ ದೊಡ್ಡ ಸೋಷಿಯಲ್ ಮೀಡಿಯಾ ಆಪ್ಸ್ ಬ್ಯಾನ್ ಮಾಡಿತ್ತು. ಈ ಸುದ್ದಿ ತಿಳಿದ ಲಕ್ಷಾಂತರ ನೇಪಾಳ ಯುವತಿ & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ಇದು ಸೋಷಿಯಲ್ ಮೀಡಿಯಾಗಳ ಪರವಾಗಿ ಅಲ್ಲ ಭ್ರಷ್ಟಾಚಾರ ವಿರುದ್ಧದ ಹೋರಾಟ ಅಂತಾ ಖುದ್ದಾಗಿ ನೇಪಾಳ ಯುವ ಸಮುದಾಯ ಹೇಳಿತ್ತು. ಜೊತೆಗೆ 20ಕ್ಕೂ ಹೆಚ್ಚು ಜನ ಮೃತಪಟ್ಟು, 400ಕ್ಕೂ ಹೆಚ್ಚು ಜನರಿಗೆ ಈ ಗಲಾಟೆಯ ವೇಳೆ ಗಂಭೀರವಾಗಿ ಗಾಯಗಳಾಗಿವೆ ಎಂದು ಆರೋಪ ಮಾಡಲಾಗಿತ್ತು. ಇದರ ಜೊತೆಗೆ 25,00,00,00,000 ರೂಪಾಯಿ ನಷ್ಟ ಕೂಡ ಆಗಿದೆಯಂತೆ...
ಭಾರಿ ದೊಡ್ಡ ಪ್ರಮಾಣದ ನಷ್ಟ
ನೇಪಾಳ ನೆಲದಲ್ಲಿ ಪ್ರತಿಭಟನೆ ನಡೆಸುವಾಗಲೇ ಹೋಟೆಲ್ ಕಟ್ಟಡಗಳು, ಸಂಸತ್ ಭವನ ಸೇರಿದಂತೆ ಹಲವು ಕಡೆ ಬೆಂಕಿ ಹಚ್ಚಲಾಗಿತ್ತು. ಪ್ರಮುಖವಾಗಿ ಹೋಟೆಲ್ ಇಂಡಸ್ಟ್ರಿ ಈ ಹೋರಾಟದಲ್ಲಿ ಭಾರಿ ದೊಡ್ಡ ನಷ್ಟ ಅನುಭವಿಸಿದ್ದು, ಸುಮಾರು 25,00,00,00,000 ರೂಪಾಯಿ ನಷ್ಟ ಆಗಿದೆ ಎನ್ನಲಾಗಿದೆ. ಮತ್ತೊಂದು ಕಡೆ ನೇಪಾಳ ದೇಶದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುವ ನಿರೀಕ್ಷೆ ಮೂಡಿದ್ದು, ಈಗ ಸೇನೆಯ ಹಿಡಿತಕ್ಕೆ ದೇಶ ಸಿಕ್ಕಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications