ಶ್ರೀರಾಮನ ಬಗ್ಗೆ ಓಲಿ ಹೇಳಿಕೆ: ಸ್ಪಷ್ಟನೆ ಕೊಟ್ಟ ನೇಪಾಳ ಸರ್ಕಾರ
ಕಠ್ಮಂಡು, ಜುಲೈ 14: ಶ್ರೀರಾಮನ ಮೂಲದ ಬಗ್ಗೆ ಎಡವಟ್ಟು ಹೇಳಿಕೆ ನೀಡಿ, ಟೀಕೆಗೊಳಗಾಗಿದ್ದ ನೇಪಾಳದ ಪ್ರಧಾನಿ ಕೆಪಿ ಓಲಿ ಬಗ್ಗೆ ನೇಪಾಳ ಸರ್ಕಾರವೀಗ ಸ್ಪಷ್ಟನೆ ನೀಡಿದೆ.
Recommended Video
ನೇಪಾಳ ಪ್ರಧಾನಿ ಹೇಳಿಕೆ ಕುರಿತು ಭಾರತದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ನೇಪಾಳ ವಿದೇಶಾಂಗ ಇಲಾಖೆ ಮಧ್ಯ ಪ್ರವೇಶಿಸಿ ಸ್ಪಷ್ಟನೆಯ ಹೇಳಿಕೆ ಬಿಡುಗಡೆ ಮಾಡಿದೆ.
ಭಾರತೀಯರು ಅಥವಾ ಧಾರ್ಮಿಕ ಭಾವನೆಗಳಿಗೆ, ಧಕ್ಕೆ ಉಂಟು ಮಾಡುವ ಯಾವುದೇ ಉದ್ದೇಶವಿಲ್ಲ, ಓಲಿ ಆ ರೀತಿಯ ಹೇಳಿಕೆ ನೀಡಿಲ್ಲ, ಹಾಗೆಯೇ ಹಾಲಿ ರಾಜಕೀಯ ಪರಿಸ್ಥಿತಿಗೂ ಈ ಹೇಳಿಕೆಗೂ ಸಂಬಂಧವೂ ಇಲ್ಲ. ರಾಮನ ಮೂಲ ಹಾಗೂ ರಾಮಾಯಣದ ಬಗ್ಗೆ ಸಾಕಷ್ಟು ಪುರಾಣದ ಕತೆಗಳಿವೆ, ಹೀಗಾಗಿ ಪ್ರಧಾನಿಯವರು ಸಾಂದರ್ಭಿಕವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ನೇಪಾಳದ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.

ಭಾರತ ಹಾಗೂ ನೇಪಾಳ ಸರ್ಕಾರಗಳ ಮೇಲುಸ್ತುವಾರಿಯಲ್ಲೇ ಪ್ರತಿ ವರ್ಷ ವಿವಾಹ ಪಂಚಮಿ ಕಾರ್ಯಕ್ರಮ ನಡೆಯುತ್ತಿದ್ದು, ಜನಕಪುರದಿಂದ ಅಯೋಧ್ಯೆವರೆಗೆ ದಿಬ್ಬಣದ ಮೆರವಣಿಗೆ ನಡೆಸಲಾಗುತ್ತಿದೆ.
2018ರಲ್ಲಿ ಉಭಯ ದೇಶಗಳ ಪ್ರಧಾನಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ನೇಪಾಳವು ಬೇರೆಯವರ ಭಾವನೆಗಳನ್ನು ಗೌರವಿಸುತ್ತದೆ, ಹೀಗಾಗಿ ಪ್ರಧಾನಿಯವರ ಹೇಳಿಕೆಗೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲವೆಂದು ನೇಪಾಳ ಹೇಳಿದೆ.
'ರಾಮನ ಮೂಲ ಅಯೋಧ್ಯೆಯಲ್ಲ, ಬದಲಾಗಿ ನೇಪಾಳದ ಬೀರ್ಗುಂಜ್ ಆಗಿದೆ. ರಾಮ ಭಾರತೀಯನಲ್ಲ ನೇಪಾಳದವರು' ಎಂದು ಓಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಭಾರತದಲ್ಲಿ ಆಕ್ರೋಶವೂ ವ್ಯಕ್ತವಾಗಿತ್ತು, ಗೇಲಿ ಮಾಡಲಾಗಿತ್ತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications