ನೇಪಾಳದಲ್ಲಿ ಮತ್ತೆ ವಿಮಾನ ದುರಂತ, 11 ಜನ ಸಾವಿನ ಶಂಕೆ
ಕಠ್ಮಂಡು, ಫೆ.26: ನೇಪಾಳದಲ್ಲಿ ಮತ್ತೊಂದು ಲಘು ವಿಮಾನ ದುರಂತಕ್ಕೀಡಾಗಿದೆ. ಇತ್ತೀಚೆಗೆ ಪೋಖರಾದಿಂದ ಜೋಮ್ ಸಮ್ ಗೆ ತೆರಳುತ್ತಿದ್ದ ವಿಮಾನ ಅಪಘಾತಕ್ಕೀಡಾಗಿತ್ತು. ಈ ದುರಂತದಲ್ಲಿ 23 ಮಂದಿ ಸಾವನ್ನಪ್ಪಿದ್ದರು. ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 11 ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸಿಂಗಲ್ ಇಂಜಿನ್ 9ಎನ್ ಎಜೆಬಿ ಏರ್ ಕ್ರಾಫ್ಟ್ ನೇಪಾಳ್ ಗಂಜ್ ನಿಂದ ಜೂಮ್ಲಾಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಚಿಲ್ಖಯಾ ಪ್ರದೇಶದಲ್ಲಿ ಪರ್ವತಗಳಿಗೆ ಡಿಕ್ಕಿ ಹೊಡೆದು ಪತನಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದಿರುವ ಪ್ರದೇಶಕ್ಕೆ ತೆರಳು ಸರಿ ಸುಮಾರು 4 ಗಂಟೆಗಳ ಟ್ರೆಕ್ಕಿಂಗ್ ಮಾಡಬೇಕಾಗುತ್ತದೆ. ಹೆಲಿ ಕಾಪ್ಟರ್ ಬಳಸಿಕೊಂಡು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸರ್ಕಾರದ ವಕ್ತಾರರಾದ ಪದಮ್ ಲಾಲ್ ಲಾಮಿಚಾನೆ ಹೇಳಿದ್ದಾರೆ. [ನಾಪತ್ತೆಯಾಗಿದ್ದ ವಿಮಾನ ಪತ್ತೆ, 23 ಜನ ದುರಂತ ಸಾವು]
ಏರ್ ಕಾಷ್ಟಮಂಡಪ್ ಸಂಸ್ಥೆಗೆ ಸೇರಿದ ಲಘು ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ತುರ್ತು ಭೂಸ್ಪರ್ಶಕ್ಕೆ ಪೈಲಟ್ ಯತ್ನಿಸಿದ್ದಾರೆ. ಆದರೆ, ಈ ಪ್ರಯತ್ನದಲ್ಲಿ ಪರ್ವತ ಶ್ರೇಣಿಗೆ ವಿಮಾನ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
#Update Air Kasthamandap crash-land in Kalikot, two feared deadhttps://t.co/MNDYPlMYeX pic.twitter.com/umcZec4UHD
— The Kathmandu Post (@kathmandupost) ಫೆಬ್ರವರಿ 26, 2016
ಕ್ಯಾಪ್ಟನ್ ದಿನೇಶ್ ನ್ಯೂಪೇನ್ ಹಾಗೂ ಸಹ ಪೈಲಟ್ ಸಂತೋಷ್ ರಾಣಾ ಸೇರಿದಂತೆ 11 ಜನ ಪ್ರಯಾಣಿಕರು ನೇಪಾಳ್ ಗಂಜ್ ನಿಂದ ಜೂಮ್ಲಾ ಎಂಬ ಪ್ರದೇಶಕ್ಕೆ 12.16ಕ್ಕೆ ಸೇರಬೇಕಿತ್ತು. ಆದರೆ, ಮಾರ್ಗಮಧ್ಯೆ ದುರಂತ ಸಂಭವಿಸಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. (ಒನ್ಇಂಡಿಯಾ ಸುದ್ದಿ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications