ನೇಪಾಳ ಸಂಸತ್ ವಿಸರ್ಜನೆ; 2021ರಲ್ಲಿ ಎರಡು ಹಂತದಲ್ಲಿ ಚುನಾವಣೆ
ಕಠ್ಮಂಡು, ಡಿ. 20: ನೇಪಾಳಿ ಕಮ್ಯೂನಿಸ್ಟ್ ಪಕ್ಷ(ಎನ್ಸಿಪಿ) ಬಿಟ್ಟು, ಬಂಡಾಯಗಾರ ಮಾವೋವಾದಿಗಳನ್ನು ಓಲೈಸುತ್ತಾ ಬಂದ ಪ್ರಧಾನಿ ಕೆ.ಪಿ ಶರ್ಮಾ ಓಲಿ ಅವರು ಸ್ವಪಕ್ಷದ ಬೆಂಬಲ ಕಳೆದುಕೊಂಡಿದ್ದಾರೆ. ಡಿಸೆಂಬರ್ 20ರಂದು ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ನೇಪಾಳ ಸಂಸತ್ ವಿಸರ್ಜನೆ ಮಾಡಲು ಅಧಿಕೃತ ಸೂಚನೆ ಬಂದಿದೆ.
ಸಮಯ 5:15 ಅಪ್ಡೇಟ್: 2021ರಲ್ಲಿ ನೇಪಾಳ ಸಾರ್ವತ್ರಿಕ ಚುನಾವಣೆ ನಿಗದಿಯಾಗಿದ್ದು, ಎರಡು ಹಂತದಲ್ಲಿ ಏಪ್ರಿಲ್ 30 ಹಾಗೂ ಮೇ 10 ರಂದು ನಡೆಯಲಿದೆ ಎಂದು ರಾಷ್ಟ್ರಾಧ್ಯಕ್ಷರ ಕಚೇರಿ ಪ್ರಕಟಿಸಿದೆ.
2017ರಲ್ಲಿ ನೇಪಾಳ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಎಡಪಕ್ಷಗಳ ಮೈತ್ರಿಕೂಟ 165ರಲ್ಲಿ 91 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಜಯ ದಾಖಲಿಸಿತ್ತು. ಈ ಜಯದೊಂದಿಗೆ ನೇಪಾಳದಲ್ಲಿ ರಾಜಕೀಯ ಸ್ಥಿರತೆಯ ಆಸೆ ಮತ್ತೆ ಚಿಗುರೊಡೆದಿತ್ತು. ಆದರೆ, ಆಡಳಿತರೂಢ ಎನ್ಸಿಪಿಯಲ್ಲೇ ಓಲಿ ವಿರೋಧಿಗಳು ಹೆಚ್ಚಳವಾಗಿದ್ದು, ಅಂತಿಮ ಹಂತ ತಲುಪಿದೆ. ಹೀಗಾಗಿ ಅಗತ್ಯ ಬೆಂಬಲ ಇಲ್ಲದ ಕಾರಣ ಸಂಸತ್ ವಿಸರ್ಜನೆಗೆ ಮನವಿ ಮಾಡಿ ರಾಷ್ಟ್ರಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಸರ್ಕಾರದ ವಕ್ತಾರರು ಹೇಳಿದ್ದಾರೆ.
ಓಲಿ ಅವರು ಸುಗ್ರೀವಾಜ್ಞೆ ಹೊರಡಿಸಿ ಡಿಸೆಂಬರ್ 15ರಂದು ಜಾರಿಗೆ ತಂದ ಸಾಂವಿಧಾನಿಕ ಕಾಯ್ದೆ(Constitutional Council Act)ಗೆ ಎನ್ಸಿಪಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ, ರಾಷ್ಟ್ರಾಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ಕಾಯ್ದೆಯನ್ನು ಅಂಗೀಕರಿಸಿದ್ದರು.

''ಓಲಿ ಅವರು ಕೊರೊನಾವೈರಸ್, ಪಕ್ಷ ಎರಡನ್ನು ನಿಭಾಯಿಸುವಲ್ಲಿ ಸೋತಿದ್ದಾರೆ. ಪಕ್ಷದ ಮುಂದಿನ ನಿರ್ಧಾರ ಶೀಘ್ರವೇ ಪ್ರಕಟಿಸಲಾಗುತ್ತದೆ'' ಎಂದು ಎನ್ಸಿಪಿಯ ಕೇಂದ್ರ ಸಮಿತಿಯ ಸದಸ್ಯ ಬಿಷ್ನು ರಿಜಾಲ್ ಅವರು ಪ್ರತಿಕ್ರಿಯಿಸಿದ್ದಾರೆ.
ನೇಪಾಳ ಸಂಸತ್ತಿನಲ್ಲಿ 275 ಸ್ಥಾನಗಳಿದ್ದು ಈ ಪೈಕಿ 165 ಸದಸ್ಯರನ್ನು ನೇರವಾಗಿ ಜನರೇ ಆಯ್ಕೆ ಮಾಡುತ್ತಾರೆ. ಉಳಿದ 110 ಜನರನ್ನು ಪರೋಕ್ಷವಾಗಿ ಆಯ್ಕೆ ಮಾಡಲಾಗುತ್ತದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications