Nepal Election: ನೇಪಾಳ ನೆಲದಲ್ಲಿ ಚುನಾವಣೆಗೆ ಡೇಟ್ ಫಿಕ್ಸ್, ಹಂಗಾಮಿ ಸರ್ಕಾರದಿಂದ ಮಹತ್ವದ ನಿರ್ಧಾರ?
ಯಾವುದೇ ಒಂದು ದೇಶದಲ್ಲಿ ಭ್ರಷ್ಟಾಚಾರ & ಅನ್ಯಾಯ ಹೆಚ್ಚಾದರೆ ಪರಿಸ್ಥಿತಿ ಹೇಗೆ ಇರಲಿದೆ? ಅಂತಾ ಇದೀಗ ನೇಪಾಳ ದೇಶ ತಾಜಾ ಉದಾಹರಣೆ ಆಗಿದೆ. ನೇಪಾಳದಲ್ಲಿ ಶುರುವಾಗಿದ್ದ ಹೋರಾಟ ಭಾರಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ಭುಗಿಲೆದ್ದು, ಹತ್ತಾರು ಜೀವಗಳು ಬಲಿಯಾಗಲು ಕಾರಣವಾಗಿದೆ ಎಂಬ ಆರೋಪದ ನಡುವೆಯೇ ಇದೀಗ ಹೊಸ ಮನ್ವಂತರ ಶುರುವಾಗಿದೆ. ಅಂದಹಾಗೆ, ನೇಪಾಳದ ನೆಲದಲ್ಲಿ ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು, ಹಂಗಾಮಿ ಸರ್ಕಾರದಿಂದ ಮಹತ್ವದ ನಿರ್ಧಾರ?
ಭಾರತದ ನೆರೆಯ ದೇಶ ನೇಪಾಳ ಒದ್ದಾಡಿ ಹೋಗಿತ್ತು, ಕಳೆದ ಕೆಲವು ದಿನಗಳಿಂದ ನೇಪಾಳ ದೇಶ ಕೊತ ಕೊತ ಕುದ್ದು ಹೋಗಿತ್ತು. ಆದರೆ ಈಗ ಎಲ್ಲಾ ತಣ್ಣಗಾಗಿ ಹೋಗಿದ್ದು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ನೇಪಾಳದ ಯುವಕರು & ಯುವತಿಯರು ಇದೀಗ ರಾಜಕೀಯ ಗೆಲುವು ಕಂಡಿದ್ದಾರೆ. ಸುಶೀಲ ಕರ್ಕಿ ನೇಪಾಳ ಹಂಗಾಮಿ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ಮೂಲಕ ನೇಪಾಳದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪ್ರಧಾನಿ ಪಟ್ಟ ಅಲಂಕರಿಸಿದ್ದಾರೆ. ಇಂತಹ ಸಮಯದಲ್ಲೇ ಮತ್ತೊಂದು ಸುದ್ದಿ ಇದೀಗ ಸಂಚಲನ ಸೃಷ್ಟಿಸಿದೆ.

ನೇಪಾಳ ಸಂಸತ್ ಚುನಾವಣೆ ಫಿಕ್ಸ್
ಹೌದು, ಇದೀಗ ನೇಪಾಳ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಅಂದ್ರೆ ಸಂಸತ್ಗೆ ಚುನಾವಣೆ ನಡೆಸಿ ಹೊಸ ಜನಪ್ರತಿನಿಧಿ ಹಾಗೂ ಸರ್ಕಾರ ಆಯ್ಕೆ ಮಾಡಲು ಸಿದ್ಧತೆ ನಡೆಸಲಾಗಿದೆ. 2026 ಮಾರ್ಚ್ 5 ನೇಪಾಳ ಚುನಾವಣೆಗೆ ಡೇಟ್ ಫಿಕ್ಸ್ ಆಗಿದೆ. ಹಲವು ತಿಕ್ಕಾಟದ ನಂತರ ಇದೀಗ ತಣ್ಣಗಾಗಿರುವ ಇದೇ ನೇಪಾಳ ನೆಲದಲ್ಲಿ ಹೊಸ ಸರ್ಕಾರ ಆಯ್ಕೆ ಮಾಡಲು ಯುವ ಸಮೂಹ ಸಿದ್ಧವಾಗಿದೆ. ಆದರೆ ಅದಕ್ಕೂ ಮೊದಲು ಮತ್ತೆ ಹಿಂಸಾಚಾರ ಭುಗಿಲೇಳುತ್ತಾ? ಅನ್ನೋ ಚಿಂತೆ ಇದೀಗ ಶುರುವಾಗಿದೆ.
ಭವಿಷ್ಯದಲ್ಲಿ ಎಲ್ಲವೂ ಬದಲಾಗುತ್ತಾ?
ನೇಪಾಳ ಸರ್ಕಾರವು ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿ 26 ದೊಡ್ಡ ದೊಡ್ಡ ಸೋಷಿಯಲ್ ಮೀಡಿಯಾ ಅಪ್ಲಿಕೇಷನ್ ಬ್ಯಾನ್ ಮಾಡಿತ್ತು. ಈ ಸುದ್ದಿ ತಿಳಿದ ಲಕ್ಷಾಂತರ ಯುವತಿ & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದರು ಎನ್ನಲಾಗಿತ್ತು. ಆದ್ರೆ ಸೋಷಿಯಲ್ ಮೀಡಿಯಾ ವಿಚಾರಕ್ಕೆ ಪ್ರತಿಭಟನೆ ಮಾಡಿಲ್ಲ, ಭ್ರಷ್ಟಾಚಾರ ವಿರುದ್ಧ ಹೋರಾಟ ಅಂತಾ ಖುದ್ದಾಗಿ ನೇಪಾಳ ಯುವ ಸಮುದಾಯ ಹೇಳಿತ್ತು. ಇದೀಗ ಎಲ್ಲವೂ ತಣ್ಣಗಾಗಿದ್ದು, ಮುಂದಿನ ಬೆಳವಣಿಗೆ ಬಗ್ಗೆ ಈಗ ಸಾಕಷ್ಟು ಕುತೂಹಲ ಕೆರಳಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications