Nepal Election: ನೇಪಾಳ ನೆಲದಲ್ಲಿ ಚುನಾವಣೆಗೆ ಡೇಟ್ ಫಿಕ್ಸ್, ಹಂಗಾಮಿ ಸರ್ಕಾರದಿಂದ ಮಹತ್ವದ ನಿರ್ಧಾರ?
ಯಾವುದೇ ಒಂದು ದೇಶದಲ್ಲಿ ಭ್ರಷ್ಟಾಚಾರ & ಅನ್ಯಾಯ ಹೆಚ್ಚಾದರೆ ಪರಿಸ್ಥಿತಿ ಹೇಗೆ ಇರಲಿದೆ? ಅಂತಾ ಇದೀಗ ನೇಪಾಳ ದೇಶ ತಾಜಾ ಉದಾಹರಣೆ ಆಗಿದೆ. ನೇಪಾಳದಲ್ಲಿ ಶುರುವಾಗಿದ್ದ ಹೋರಾಟ ಭಾರಿ ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ಭುಗಿಲೆದ್ದು, ಹತ್ತಾರು ಜೀವಗಳು ಬಲಿಯಾಗಲು ಕಾರಣವಾಗಿದೆ ಎಂಬ ಆರೋಪದ ನಡುವೆಯೇ ಇದೀಗ ಹೊಸ ಮನ್ವಂತರ ಶುರುವಾಗಿದೆ. ಅಂದಹಾಗೆ, ನೇಪಾಳದ ನೆಲದಲ್ಲಿ ಚುನಾವಣೆಗೆ ಡೇಟ್ ಫಿಕ್ಸ್ ಆಗಿದ್ದು, ಹಂಗಾಮಿ ಸರ್ಕಾರದಿಂದ ಮಹತ್ವದ ನಿರ್ಧಾರ?
ಭಾರತದ ನೆರೆಯ ದೇಶ ನೇಪಾಳ ಒದ್ದಾಡಿ ಹೋಗಿತ್ತು, ಕಳೆದ ಕೆಲವು ದಿನಗಳಿಂದ ನೇಪಾಳ ದೇಶ ಕೊತ ಕೊತ ಕುದ್ದು ಹೋಗಿತ್ತು. ಆದರೆ ಈಗ ಎಲ್ಲಾ ತಣ್ಣಗಾಗಿ ಹೋಗಿದ್ದು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ನೇಪಾಳದ ಯುವಕರು & ಯುವತಿಯರು ಇದೀಗ ರಾಜಕೀಯ ಗೆಲುವು ಕಂಡಿದ್ದಾರೆ. ಸುಶೀಲ ಕರ್ಕಿ ನೇಪಾಳ ಹಂಗಾಮಿ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ಮೂಲಕ ನೇಪಾಳದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪ್ರಧಾನಿ ಪಟ್ಟ ಅಲಂಕರಿಸಿದ್ದಾರೆ. ಇಂತಹ ಸಮಯದಲ್ಲೇ ಮತ್ತೊಂದು ಸುದ್ದಿ ಇದೀಗ ಸಂಚಲನ ಸೃಷ್ಟಿಸಿದೆ.

ನೇಪಾಳ ಸಂಸತ್ ಚುನಾವಣೆ ಫಿಕ್ಸ್
ಹೌದು, ಇದೀಗ ನೇಪಾಳ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಅಂದ್ರೆ ಸಂಸತ್ಗೆ ಚುನಾವಣೆ ನಡೆಸಿ ಹೊಸ ಜನಪ್ರತಿನಿಧಿ ಹಾಗೂ ಸರ್ಕಾರ ಆಯ್ಕೆ ಮಾಡಲು ಸಿದ್ಧತೆ ನಡೆಸಲಾಗಿದೆ. 2026 ಮಾರ್ಚ್ 5 ನೇಪಾಳ ಚುನಾವಣೆಗೆ ಡೇಟ್ ಫಿಕ್ಸ್ ಆಗಿದೆ. ಹಲವು ತಿಕ್ಕಾಟದ ನಂತರ ಇದೀಗ ತಣ್ಣಗಾಗಿರುವ ಇದೇ ನೇಪಾಳ ನೆಲದಲ್ಲಿ ಹೊಸ ಸರ್ಕಾರ ಆಯ್ಕೆ ಮಾಡಲು ಯುವ ಸಮೂಹ ಸಿದ್ಧವಾಗಿದೆ. ಆದರೆ ಅದಕ್ಕೂ ಮೊದಲು ಮತ್ತೆ ಹಿಂಸಾಚಾರ ಭುಗಿಲೇಳುತ್ತಾ? ಅನ್ನೋ ಚಿಂತೆ ಇದೀಗ ಶುರುವಾಗಿದೆ.
ಭವಿಷ್ಯದಲ್ಲಿ ಎಲ್ಲವೂ ಬದಲಾಗುತ್ತಾ?
ನೇಪಾಳ ಸರ್ಕಾರವು ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿ 26 ದೊಡ್ಡ ದೊಡ್ಡ ಸೋಷಿಯಲ್ ಮೀಡಿಯಾ ಅಪ್ಲಿಕೇಷನ್ ಬ್ಯಾನ್ ಮಾಡಿತ್ತು. ಈ ಸುದ್ದಿ ತಿಳಿದ ಲಕ್ಷಾಂತರ ಯುವತಿ & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದರು ಎನ್ನಲಾಗಿತ್ತು. ಆದ್ರೆ ಸೋಷಿಯಲ್ ಮೀಡಿಯಾ ವಿಚಾರಕ್ಕೆ ಪ್ರತಿಭಟನೆ ಮಾಡಿಲ್ಲ, ಭ್ರಷ್ಟಾಚಾರ ವಿರುದ್ಧ ಹೋರಾಟ ಅಂತಾ ಖುದ್ದಾಗಿ ನೇಪಾಳ ಯುವ ಸಮುದಾಯ ಹೇಳಿತ್ತು. ಇದೀಗ ಎಲ್ಲವೂ ತಣ್ಣಗಾಗಿದ್ದು, ಮುಂದಿನ ಬೆಳವಣಿಗೆ ಬಗ್ಗೆ ಈಗ ಸಾಕಷ್ಟು ಕುತೂಹಲ ಕೆರಳಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications