ಪಾಕಿಸ್ತಾನವನ್ನು ಕಾಪಾಡಲು ಹಳೆ ಉಗ್ರ ಸಂಘಟನೆಯ ಹೊಸ ಅವತಾರ
ಇಸ್ಲಾಮಾಬಾದ್, ಏಪ್ರಿಲ್ 30: ಹಳೆಯ ಉಗ್ರ ಸಂಘಟನೆಯು ಹೊಸ ಹೆಸರಿನೊಂದಿಗೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದೆ.
ಪ್ಯಾರೀಸ್ ಮೂಲದ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ಫೋರ್ಸ್ ನಿರ್ಬಂಧದಿಂದ ಪಾರಾಗಲು ಪಾಕಿಸ್ತಾನಕ್ಕೆ ಇದೊಂದೇ ಮಾರ್ಗ ಉಳಿದಿತ್ತು.ಭಾರತಕ್ಕೆ ಬೇಕಾಗಿರುವ ಉಗ್ರ ಹಫೀಜ್ ಸಯೀದ್ ನಾಯಕತ್ವದ ಲಷ್ಕರ್ ಎ ತೊಯ್ಬಾ ಸಂಘಟನೆ ಹೊಸ ಹೆಸರಿನೊಂದಿಗೆ ಹೊಸ ಅವತಾರದೊಂದಿಗೆ ಬಂದಿದೆ.
ಕಳೆದ ಫೆಬ್ರವರಿಯಲ್ಲಿ ಪಾಕಿಸ್ತಾನಕ್ಕೆ ಕ್ರಿಯಾ ಯೋಜನೆ ಜಾರಿಗೊಳಿಸುವುದಕ್ಕೆ ಮತ್ತೆ ಅವಕಾಶ ದೊರೆತಿತ್ತು. ಆದರೆ ಬೂದು ಪಟ್ಟಿಯಿಂದ ಕಪ್ಪು ಪಟ್ಟಿಗೆ ಸೇರಿಸುವ ಷರತ್ತಿನ ಎಚಚ್ರಿಕೆಯನ್ನೂ ನೀಡಿತ್ತು. ಪಾಕಿಸ್ತಾನ ಎಫ್ಎಟಿಎಫ್ನ ಬೂದು ಪಟ್ಟಿಗೆ ಸೇರಿದ್ದರ ಪರಿಣಾಮ ಇಸ್ಲಾಮಾಬಾದ್ಗೆ 10 ಶತಕೋಟಿ ಡಾಲರ್ನಷ್ಟು ನಷ್ಟ ಉಂಟಾಗಿದೆ.

ಒಂದೊಮ್ಮೆ ಕ್ರಿಯಾ ಯೋಜನೆ ಜಾರಿಗೊಳಿಸುವಲ್ಲಿ ವಿಫಲವಾದರೆ ಕಪ್ಪುಪಟ್ಟಿಗೆ ಸೇರಲಿದೆ.ಜಾಗತಿಕವಾಗಿ ಕೊವಿಡ್ 19 ಪರಿಸ್ಥಿತಿಯ ತೀವ್ರತೆ ಹೆಚ್ಚುತ್ತಿರುವ ಕಾರಣ ಅದನ್ನು ತಡೆಯಲು ಅನೇಕ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಇದರಲ್ಲಿ ದಿಗ್ಬಂಧನ , ಪ್ರಯಾಣ, ನಿರ್ಬಂಧ, ನಿಗದಿತ ಭೌಗೋಳಿಕ ವ್ಯಾಪ್ತಿಯನ್ನೇ ಸೀಲ್ಡೌನ್ ಮಾಡುವ ಕೆಲಸಗಳೂ ಆಗಿವೆ.
ಉಗ್ರ ಹಫೀಜ್ ಸಂಸ್ಥಾಪಕರಾಗಿರುವ ಎಲ್ಇಟಿ ಇನ್ನು ದಿ ರೆಸಿಸ್ಟೆನ್ಸ್ ಫ್ರಂಟ್ ಎಂದು ಗುರುತಿಸಿಕೊಳ್ಳಲಿದೆ. ಈ ಉಗ್ರ ಸಂಘಟನೆ ಜಮ್ಮು -ಕಾಶ್ಮೀರದಲ್ಲಿ ಅನೇಕ ಉಗ್ರ ದಾಳಿಗಳಿಗೆ ಹೊಣೆಗಾರನಾಗಿದೆ.
ಲಷ್ಕರ್ ಎ ತೊಯ್ಬಾ ಅಥವಾ ಎಲ್ಇಟಿ ವಿಶ್ವಸಂಸ್ಥೆಯಿಂದ ನಿಷೇಧ ಎದುರಿಸುತ್ತಿದ್ದರೆ , ಅದರ ಹೆಸರು ಬದಲಾಯಿಸಿದರೆ ಅಂತಹ ನಿಷೇಧ ಯಾವುದೂ ಅನ್ವಯಿಸುವುದಿಲ್ಲ ಎಂಬುದು ಪಾಕಿಸ್ತಾನದ ಲೆಕ್ಕಾಚಾರವಾದಂತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications