ಕೊರೊನಾ ಕಥೆಯೇ ಮುಗಿದಿಲ್ಲ, ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ
ಬೀಜಿಂಗ್, ಜೂನ್ 30: ಜಗತ್ತಿಗೆ ಕೊರೊನಾವೈರಸ್ ಹರಡಿಸಿ 213 ರಾಷ್ಟ್ರಗಳ ಪಾಲಿನ ವಿಲನ್ ಆಗಿರುವ ಚೀನಾದಲ್ಲಿ ಕೊರೊನಾ ಕಥೆಯೇ ಮುಗಿದಿಲ್ಲ ಅದಾಗಲೇ ಮತ್ತೊಂದು ಸಾಂಕ್ರಾಮಿಕ ವೈರಸ್ ತಲೆದೂರಿದೆ.
Recommended Video
ಹೌದು, ಚೀನಾದಲ್ಲಲಿ ವಿಜ್ಞಾನಿಗಳು ಸಾಂಕ್ರಾಮಿಕ ರೋಗವನ್ನು ಹರಡಬಲ್ಲ ಸ್ವೈನ್ ಫ್ಲೂ (ಹಂದಿಜ್ವರ)ದ ವೈರಸ್ ಅನ್ನು ಪತ್ತೆ ಮಾಡಿದ್ದಾರೆ. ಈ ವೈರಸ್ ಹಂದಿಗಳಲ್ಲಿ ಕಾಣಿಸಿಕೊಡಿದ್ದು, ಮನುಷ್ಟರಿಗೂ ಅಂಟಿಕೊಳ್ಳುವ ಸಾಮರ್ಥ್ಯವಿದೆ. ಜೊತೆಗೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಭೀತಿಯಿದೆ.
ಚೀನಾದ ಕೆಲ ಪ್ರಾಂತ್ಯಗಳಲ್ಲಿರುವ ಹಂದಿಗಳಿಗೆ ಹೊಸ ಇನ್ಫ್ಲುಯೆಂಜಾ ವೈರಸ್ನಿಂದ ಹೆಚ್ಚು ಸೋಂಕಿಗೆ ಒಳಗಾಗುತ್ತಿವೆ. ಈ ಸೋಂಕು ಸದ್ಯದಲ್ಲೇ ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಇದು ಸುಲಭದಲ್ಲಿ ಒಬ್ಬರಿಂದ ಒಬ್ಬರಿಗೆ ಹರಡಬಹುದಾಗಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಇನ್ನು ಹಂದಿಗಳಿಗೆ ಕಾಣಿಸಿಕೊಂಡಿರುವ ಇನ್ಫ್ಲುಯೆಂಜಾ ವೈರಸ್ , ಜಿ-4 ಎಂಬ ಹೆಸರಿನ ವೈರಸ್ ಆಗಿದ್ದು, ಹಂದಿಗಳಿಗಷ್ಟೇ ಅಲ್ಲದೆ ಯುರೋಪಿಯನ್ ಮತ್ತು ಏಷ್ಯನ್ ಪಕ್ಷಿಗಳಿಗೂ ತಗಲುವ ಸಾಧ್ಯತೆ ಇದೆ.
ಈ ಬಗ್ಗೆ ಚೀನಾ ಅಗ್ರಿಕಲ್ಚರಲ್ ಯೂನಿವರ್ಸಿಟಿಯ (ಸಿಎಯು) ಲಿಯು ಜಿನ್ಹುವಾ ನೇತೃತ್ವದ ತಂಡವು ಚೀನಾದ 10 ಕಸಾಯಿಖಾನೆಗಳ 30 ಸಾವಿರಕ್ಕೂ ಅಧಿಕ ಹಂದಿಗಳ ಸ್ವ್ಯಾಬ್ಗಳ ಪರೀಕ್ಷೆ ಮಾಡಿದ್ದು, ಅವುಗಳ ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ತಿಳಿದುಬಂದ ಹಿನ್ನೆಲೆಯಲ್ಲಿ, ಇದರ ಅಧ್ಯಯನ ನಡೆಸಲಾಗಿತ್ತು. ಇದೀಗ ಈ ವೈರಸ್ ಕುರಿತಂತೆ ವಿಜ್ಞಾನಿಗಳು ಮಾಹಿತಿ ನೀಡಿದ್ದು, ಈ ವೈರಸ್ ನಿಯಂತ್ರಣಕ್ಕೆ ಈಗಾಗಲೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.
ಹೊಸದಾಗಿ ಹುಟ್ಟಿಕೊಂಡಿರುವ ಈ ವೈರಸ್ ಮೂರು ವಂಶಾವಳಿಗಳ ವಿಶಿಷ್ಟ ಮಿಶ್ರಣವಾಗಿದೆ. ಯುರೋಪಿಯನ್ ಮತ್ತು ಏಷ್ಯನ್ ಪಕ್ಷಿಗಳಲ್ಲಿ ಕಂಡುಬರುವ ತಳಿಗಳಿಗೆ ಹೋಲುತ್ತದೆ. 2009 ರ ಸಾಂಕ್ರಾಮಿಕ ರೋಗಕ್ಕೆ ಕಾರಣವಾದ H1N1 ತಳಿ ಮತ್ತು ಏವಿಯನ್, ಮಾನವ ಮತ್ತು ಹಂದಿ ಇನ್ಫ್ಲುಯೆನ್ಸ ವೈರಸ್ಗಳಿಂದ ಜೀನ್ಗಳನ್ನು ಹೊಂದಿರುವ ಉತ್ತರ ಅಮೆರಿಕಾದ H1N1 ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications