ಈ ಬಾರಿ ಪಾಕಿಸ್ತಾನದಲ್ಲಿ ಹೊಸ ವರ್ಷಾಚರಣೆ ರದ್ದು: ಕಾರಣವೇನು..?
ಕರಾಚಿ, ಡಿಸೆಂಬರ್ 29: ಪಾಕಿಸ್ತಾನದಲ್ಲಿ 2024ರ ಹೊಸ ವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ಬಾಂಬ್ ದಾಳಿಯಿಂದ ಸಾವಿರಾರು ನಾಗರಿಕರು ಸಾವಿನ ಹಿನ್ನೆಲೆಯಲ್ಲಿ ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಪಾಕಿಸ್ತಾನದ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಆದೇಶ ನೀಡಿದ್ದಾರೆ.
ಯುದ್ಧ ಪೀಡಿತ ಗಾಜಾ ಪಟ್ಟಿಯ ಜನರೊಂದಿಗೆ ಇದ್ದೇವೆ ಎನ್ನುವ ಒಗ್ಗಟ್ಟಿನ ಸಂಕೇತವಾಗಿ ದೇಶದಲ್ಲಿ ಹೊಸ ವರ್ಷ ಆಚರಣೆಯನ್ನು ನಿಷೇಧಿಸಿರುವುದಾಗಿ ಅನ್ವಾರುಲ್ ಹಕ್ ಕಾಕರ್ ಘೋಷಿಸಿದ್ದಾರೆ. ಗುರುವಾರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪ್ಯಾಲೆಸ್ತೀನ್ನಲ್ಲಿನ ಪರಿಸ್ಥಿತಿಯನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಮಾಡಲಾಗಿದೆ ಎಂದರು.

ನಮ್ಮ ಮತ್ತು ಪ್ಯಾಲೆಸ್ಟೈನ್ ನಡುವಿನ ಒಗ್ಗಟ್ಟು ಪ್ರದರ್ಶಿಸುವ ನಿಟ್ಟಿನಲ್ಲಿ ಹೊಸ ವರ್ಷಕ್ಕೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಡೆಸುವುದನ್ನು ಸರ್ಕಾರವು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ ಎಂದು ತಿಳಿಸಿದ್ದಾರೆ.
ಗಾಜಾ ಮತ್ತು ಪ್ಯಾಲೆಸ್ಟೈನ್ನ ಪಶ್ಚಿಮ ದಂಡೆಯಲ್ಲಿ ಮುಗ್ಧ ಮಕ್ಕಳ ಹತ್ಯಾಕಾಂಡ ಮತ್ತು ಪ್ಯಾಲಿಸ್ಟೈನ್ನಿಯರ ನರಮೇಧದಿಂದ ಪಾಕಿಸ್ತಾನ ಹಾಗೂ ಮುಸ್ಲಿಂ ಜಗತ್ತು ಸಂಪೂರ್ಣ ದುಃಖದಲ್ಲಿದೆ. ಹಾಗಾಗಿ ದೇಶದಲ್ಲಿ ಹೊಸ ವರ್ಷಕ್ಕೆ ಯಾವುದೇ ರೀತಿಯ ಸಂಭ್ರಮಾಚರಣೆ ನಡೆಯುವುದಿಲ್ಲ ಎಂದು ಪಾಕಿಸ್ತಾನದ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಆದೇಶ ನೀಡಿದ್ದಾರೆ.

ಅಕ್ಟೋಬರ್ 7ರಂದು ಇಸ್ರೇಲಿ ಬಾಂಬ್ ದಾಳಿ ಪ್ರಾರಂಭವಾದಾಗಿನಿಂದ ಸುಮಾರು 9,000 ಮಕ್ಕಳ ಹತ್ಯಾಕಾಂಡ ಆಗಿರಬಹುದು. ಇಸ್ರೇಲ್ ಪಡೆಗಳು ಹಿಂಸಾಚಾರ ಮಿತಿಗಳನ್ನು ದಾಟಿದೆ ಎಂದು ಕಿಡಿಕಾರಿದ ಅವರು, ಪಾಕಿಸ್ತಾನವು ಪ್ಯಾಲೆಸ್ಟೈನ್ಗೆ ಎರಡು ಸಹಾಯ ಪ್ಯಾಕೇಜ್ಗಳನ್ನು ಕಳುಹಿಸಿದೆ. ಹಾಗೂ ಮೂರನೇಯ ಪ್ಯಾಕೇಜ್ ಕಳುಹಿಸುವ ತಯಾರಿಯಲ್ಲಿದೆ. ಜಾಗತಿಕ ವೇದಿಕೆಗಳಲ್ಲಿ ಪ್ಯಾಲೇಸ್ಟಿನಿಯನ್ ಜನರ ದುಃಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಪಾಕಿಸ್ತಾನ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿವರಿಸಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications