ಇಡಾ ಚಂಡಮಾರುತ; ನ್ಯೂಯಾರ್ಕ್ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ನ್ಯೂಯಾರ್ಕ್, ಸೆಪ್ಟೆಂಬರ್ 2: ಇಡಾ ಚಂಡಮಾರುತದ ಪ್ರಭಾವದಿಂದಾಗಿ ನ್ಯೂಯಾರ್ಕ್ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಹೀಗಾಗಿ ನ್ಯೂಯಾರ್ಕ್ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಬುಧವಾರ ರಾತ್ರಿ ನ್ಯೂಯಾರ್ಕ್ ನಗರದಾದ್ಯಂತ ಭಾರೀ ಪ್ರಮಾಣದ ಮಳೆ ಸುರಿದಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತಾಗಿದ್ದು, ನ್ಯೂಯಾರ್ಕ್ ನಗರ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಮೇಯರ್ ಬಿಲ್ ಡಿ ಬ್ಲಿಸಿಯೊ, ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
'ಇದು ನ್ಯೂಯಾರ್ಕ್ನಲ್ಲಿ ಐತಿಹಾಸಿಕ ಹವಾಮಾನ ದುರಂತ' ಎಂದು ಹೇಳಿದ್ದಾರೆ.

ಪ್ರವಾಹ ಕಾರಣವಾಗಿ ಸಬ್ ವೇ ರೈಲು ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬುಧವಾರ ಸಂಜೆಯಿಂದ ಐದು ಬಾರಿ ತುರ್ತು ಪರಿಸ್ಥಿತಿ ಎಚ್ಚರಿಕೆಯನ್ನು ನ್ಯೂಯಾರ್ಕ್ ನಗರಕ್ಕೆ ರಾಷ್ಟ್ರೀಯ ಹವಾಮಾನ ಸೇವೆ ನೀಡಿದೆ.
ಭಾರೀ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನೂರಾರು ವಿಮಾನಗಳಿಗೆ ತಡೆಹಿಡಿಯಲಾಗಿದೆ. ರಸ್ತೆಗಳಲ್ಲಿ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದೆ. ಇಡಾ ಚಂಡಮಾರುತ ಈಶಾನ್ಯ ಅಮೆರಿಕಕ್ಕೆ ಅಪ್ಪಳಿಸಿದ್ದು, ಇದ್ದಕ್ಕಿದ್ದಂತೆ ಭಾರೀ ಮಳೆ ಉಂಟಾಗಿದೆ. ಲೂಸಿಯಾನಾದಲ್ಲಿ ಚಂಡಮಾರುತ ಪ್ರಭಾವ ಜೋರಾಗಿದ್ದು, ಭಾರೀ ಹಾನಿಯುಂಟಾಗಿರುವುದಾಗಿ ತಿಳಿದುಬಂದಿದೆ.
'ಎಲ್ಲರೂ ಸೂಕ್ತ ಆಶ್ರಯ ಪಡೆಯಿರಿ. ಬಿರುಗಾಳಿ ಅಪ್ಪಳಿಸಿದ್ದು, ವಸ್ತುಗಳು ಗಾಳಿಯಲ್ಲಿ ಹಾರಾಡುತ್ತಿವೆ. ಅಪಾಯಕಾರಿ ಸನ್ನಿವೇಶ ಎದುರಾಗಿದ್ದು, ಸೂಕ್ತ ಆಶ್ರಯ ಪಡೆದುಕೊಳ್ಳಿ. ಹೊರಗೆ ಬರಬೇಡಿ. ಕಿಟಕಿಗಳ ಸಮೀಪ ನಿಲ್ಲದಿರಿ' ಎಂದು ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ದಿಢೀರ್ ಪ್ರವಾಹ ಸಂಭವಿಸುವ ಮುನ್ನೆಚ್ಚರಿಕೆಯನ್ನು ನಗರಕ್ಕೆ ಈ ಮುನ್ನ ನೀಡಲಾಗಿತ್ತು. ನಿವಾಸಿಗಳು ಎತ್ತರದ ಜಾಗದಲ್ಲಿರುವಂತೆ ಸೂಚಿಸಲಾಗಿತ್ತು. ಮಧ್ಯ ಅಟ್ಲಾಂಟಿಕದಿಂದ ದಕ್ಷಿಣದ ನ್ಯೂ ಇಂಗ್ಲೆಂಡ್ಗೆ ಮಾರಕ ಪ್ರವಾಹ ಅಪ್ಪಳಿಸಲಿದೆ ಎಂದು ರಾಷ್ಟ್ರ ಹವಾಮಾನ ಸೇವೆ ಎಚ್ಚರಿಕೆ ರವಾನಿಸಿತ್ತು. ಇದರ ಬೆನ್ನಲ್ಲೇ ಭಾರೀ ಮಳೆಯಾಗಿ, ಇಡೀ ಪ್ರದೇಶ ಜಲಾವೃತವಾಗಿದೆ.
ಅಮೆರಿಕದ ರಾಜಧಾನಿಯಿಂದ ಮೂವತ್ತು ಮೈಲಿ ಅಂತರದಲ್ಲಿರುವ ಅನ್ನಪೊಲಿಸ್ನಲ್ಲಿಯೂ ಭಾರೀ ಮಳೆ ಗಾಳಿಯಿಂದಾಗಿ ಮರಗಳು ಉರುಳಿಬಿದ್ದು ಅವಾಂತರ ಸೃಷ್ಟಿಯಾಗಿದೆ.
ನ್ಯೂಜೆರ್ಸಿ, ನ್ಯೂಯಾರ್ಕ್ನ ದಕ್ಷಿಣ ಭಾಗಗಳಲ್ಲಿ ಭಾರೀ ಬಿರುಗಾಳಿ ಎಚ್ಚರಿಕೆ ರವಾನಿಸಲಾಗಿದೆ. ಅತಿ ಅಪಾಯಕಾರಿ ಹಾಗೂ ಮಾರಕ ಪ್ರವಾಹ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಪ್ರವಾಹದಲ್ಲಿ ಇಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ.
ಹಲವು ಅಂಶಗಳು ಪ್ರವಾಹಕ್ಕೆ ಕಾರಣವಾಗಿವೆ. ಜಾಗತಿಕ ತಾಪಮಾನ ಏರಿಕೆಯಂಥ ಹವಾಮಾನ ವೈಪರೀತ್ಯ ಭಾರೀ ಮಳೆಗೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications