ಅಸಾಲ್ಟ್ , ಸೆಮಿ-ಆಟೋಮೆಟಿಕ್ ರೈಫಲ್ ನಿಷೇಧಿಸಿದ ನ್ಯೂಜಿಲ್ಯಾಂಡ್
ವೆಲ್ಲಿಂಗ್ಟನ್, ಮಾರ್ಚ್ 21: ಕ್ರೈಸ್ಟ್ಚರ್ಚ್ ಬಳಿ ಎರಡು ಮಸೀದಿಗಳ ನಡುವೆ ನಡೆದ ಗುಂಡಿನ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ನ್ಯೂಜಿಲ್ಯಾಂಡ್ ಸೆಮಿ-ಆಟೋಮೆಟಿಕ್ ರೈಫಲ್ಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಕುರಿತು ನ್ಯೂಜಿಲ್ಯಾಂಡ್ ಪ್ರಧಾನಿ ಜಸಿಂಡಾ ಆಡ್ರೆನ್ ವಿಷಯ ತಿಳಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಸಾಲ್ಟ್ ಮತ್ತು ಸೆಮಿ-ಆಟೋಮೆಟಿಕ್ ರೈಫಲ್ಗಳ ಮಾರಾಟವನ್ನು ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.

ಮಿಲಿಟರಿ ಮಾದರಿಯ ಎಲ್ಲ ಸೆಮಿ ಆಟೋಮೆಟಿಕ್ ರೈಫಲ್ಗಳು, ಅಸಾಲ್ಟ್ ರೈಫಲ್ಗಳನ್ನು ನಿಷೇಧಿಸಲಾಗಿದೆ. ಜತೆಗೆ ಹೆಚ್ಚು ಸಾಮರ್ಥ್ಯದ ಮ್ಯಾಗಜೀನ್ಗಳು ಮತ್ತು ರೈಫಲ್ಗಳು ಹೆಚ್ಚು ವೇಗವಾಗಿ ಗುಂಡು ಹಾರಿಸಲು ನೆರವಾಗುವ ಸಾಧನಗಳ ಮಾರಾಟವನ್ನೂ ನಿಷೇಧಿಸಲಾಗಿದೆ. ಪೊಲೀಸರ ಅನುಮತಿಯಿಲ್ಲದೆ ಯಾರೂ ಇಂತಹ ಆಯುಧಗಳನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಜಸಿಂಡಾ ಆಡ್ರೆನ್ ತಿಳಿಸಿದ್ದಾರೆ.

ಮಸೀದಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 50 ಜನರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಘಾತುಕ ಶಕ್ತಿಗಳಿಗೆ ಸುಲಭವಾಗಿ ಶಸ್ತ್ರಾಸ್ತ್ರಗಳು ಸಿಗದಂತೆ ನ್ಯೂಜಿಲೆಂಡ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯೋರ್ವ ಗನ್ ಹಿಡಿದುಕೊಂಡು ನಿಂತಿದ್ದ. ಸಾಕಷ್ಟು ಬಾರಿ ಗುಂಡಿನ ಮೊರೆತ ಕೇಳಿದೆ. ಸಾಕಷ್ಟು ಜನರು ಮೃತಪಟ್ಟ ಅನುಮಾನವಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.
ಒಟ್ಟು ನಾಲ್ಕು ಜನರನ್ನು ಬಂಧಿಸಲಾಗಿತ್ತು. ಪೊಲೀಸ್ ಅಧಿಕಾರಿಗಳು ತನಿಖೆ ಮುಂದುವರೆಸಿದಿದ್ದಾರೆ. ಕ್ರಿಕೆಟ್ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications