51 ಜನರನ್ನು ಕೊಂದವನಿಗೆ ಕಠಿಣಾತಿಕಠಿಣ ಶಿಕ್ಷೆ..!
ನ್ಯೂಜಿಲ್ಯಾಂಡ್ನಲ್ಲಿ ಮಸೀದಿಗೆ ನುಗ್ಗಿ ಪ್ರಾರ್ಥನೆ ಮಾಡುತ್ತಿದ್ದವರ ಮೇಲೆ ಮನಸ್ಸಿಗೆ ಬಂದಂತೆ ಗುಂಡು ಹಾರಿಸಿ 51 ಜನರನ್ನು ಹತ್ಯೆಗೈದಿದ್ದ ಹಂತಕನಿಗೆ ಜೀವಿತಾವಧಿ ಶಿಕ್ಷೆಯಾಗಿದೆ. ಹಂತಕ ಬ್ರೆಂಟನ್ ಟ್ಯಾರಂಟ್ ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕಿದೆ. ಅಲ್ಲದೆ ಆರೋಪಿಗೆ ಶಿಕ್ಷೆ ಅವಧಿಯಲ್ಲಿ ಕಲ್ಪಿಸಲಾಗುವ ರಜೆ ಸೌಲಭ್ಯವನ್ನೂ ನೀಡದೆ, ಪೆರೋಲ್ ರದ್ದುಗೊಳಿಸಲಾಗಿದೆ.
Recommended Video
ಬ್ರೆಂಟನ್ ಟ್ಯಾರಂಟ್ ನ್ಯೂಜಿಲ್ಯಾಂಡ್ನಲ್ಲಿ ಇಷ್ಟು ಕಠಿಣ ಶಿಕ್ಷೆ ಪಡೆಯುತ್ತಿರುವ ಮೊದಲ ವ್ಯಕ್ತಿಯಾಗಿದ್ದಾನೆ. ಬ್ರೆಂಟನ್ ಟ್ಯಾರಂಟ್ ಕೃತ್ಯವು ಅಮಾನವೀಯ ಎಂದಿರುವ ನ್ಯೂಜಿಲ್ಯಾಂಡ್ ಕೋರ್ಟ್ ಹಂತಕನನ್ನು ಸಮಾಜದಲ್ಲಿ ಬದುಕುವ ಅರ್ಹತೆ ಇಲ್ಲದವನು ಎಂದಿದೆ.
ತೀರ್ಪು ಪ್ರಕಟಣೆ ಸಂದರ್ಭ ನ್ಯಾಯಾಧೀಶ ಕ್ಯಾಮರಾನ್ ಮಂಡೆರ್ ಹಂತಕನ ಬಗ್ಗೆ ವಿಷಾದದ ಮಾತುಗಳನ್ನಾಡಿದ್ದಾರೆ.ಜನಾಂಗೀಯವಾದದ ವಿಷ ತುಂಬಿಕೊಂಡ ಬ್ರೆಂಟನ್ ಟ್ಯಾರಂಟ್ ಸಾರ್ವಜನಿಕ ಸಮಾಜದಲ್ಲಿ ಬದುಕುವ ಅರ್ಹತೆಯನ್ನೇ ಹೊಂದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇದೇ ಕಾರಣಕ್ಕೆ ಬ್ರೆಂಟನ್ ಟ್ಯಾರಂಟ್ಗೆ ಪೆರೋಲ್ ರಹಿತ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದ್ದು, ಈ ಮೂಲಕ ನ್ಯೂಜಿಲ್ಯಾಂಡ್ ಇತಿಹಾಸದಲ್ಲೇ ನಡೆದ ಭೀಕರ ಗುಂಡಿನ ದಾಳಿ ಪ್ರಕರಣದ ವಿಚಾರಣೆ ಮುಕ್ತಾಯವಾಗಿದೆ.

ಹೇಗೆ ನಡೆದಿತ್ತು ಭೀಕರ ದಾಳಿ..?
ಮಾರ್ಚ್ 15, 2019ರಲ್ಲಿ ಒಟ್ಟು 5 ಗನ್ ಗಳನ್ನು ಹಿಡಿದು ಕ್ರೈಸ್ಟ್ಚರ್ಚ್ ಮಸೀದಿಗೆ ನುಗ್ಗಿದ ಆಸ್ಟ್ರೆಲೀಯಾ ಮೂಲದ ಹಂತಕ, ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದ. ಮಕ್ಕಳು, ಮಹಿಳೆಯರು ಸೇರಿ 51 ಜನರನ್ನು ಹತ್ಯೆಗೈದಿದ್ದ. ಅಷ್ಟೇ ಅಲ್ಲದೆ ಮಸೀದಿಗೆ ನುಗ್ಗಿ ದಾಳಿ ಮಾಡುತ್ತಿರುವುದನ್ನು ಲೈವ್ ವಿಡಿಯೋ ಮಾಡಿಕೊಂಡಿದ್ದ ಬ್ರೆಂಟನ್ ಟ್ಯಾರಂಟ್.
ಚಿತ್ರದಲ್ಲಿ: ನ್ಯಾಯಾಲಯದಲ್ಲಿ ಆಸ್ಟ್ರೇಲಿಯಾ ಮೂಲದ ಬ್ರೆಂಟನ್ ಹ್ಯಾರಿಸನ್ ಟರೆಂಟ್(29)

ಜನಾಂಗೀಯ ವಿಷ ಕಾರುತ್ತಿದ್ದ ಬ್ರೆಂಟನ್
ಜನಾಂಗೀಯ ವಿಷ ಕಾರುತ್ತಿದ್ದ ಬ್ರೆಂಟನ್ ತನ್ನನ್ನು ಬಿಳಿಯರ ಪರ ಹೋರಾಟಗಾರ ಎಂದು ಕರೆದುಕೊಂಡಿದ್ದ. ಈ ದಾಳಿಯನ್ನು ಕಂಡು ಇಡೀ ಜಗತ್ತು ಬೆಚ್ಚಿಬಿದ್ದಿತ್ತು. ಈ ಘಟನೆ ನಂತರ ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್, ಮಿಲಿಟರಿ ವೆಪನ್ ಗಳ ಮಾರಾಟವನ್ನು ದೇಶದಲ್ಲಿ ನಿರ್ಬಂಧಿಸಿದ್ದರು. ಈ ಮೂಲಕ ಸಾರ್ವಜನಿಕರಿಗೆ ಮಿಲಿಟರಿ ವೆಪನ್ಗಳು ಸಿಗುವುದನ್ನು ತಡೆದಿದ್ದರು.
ಚಿತ್ರದಲ್ಲಿ: ಮನಲ್ ಡೊಖಾನ್

ತೀರ್ಪನ್ನು ಎಲ್ಲರೂ ಸ್ವಾಗತಿಸಿದ್ದಾರೆ
ನ್ಯೂಜಿಲ್ಯಾಂಡ್ನಲ್ಲಿ ಮಸೀದಿಯಲ್ಲಿ ಹತ್ಯೆ ನಡೆದಿದಾಗಿನಿಂದಲೂ ಅದನ್ನ ತೀವ್ರವಾಗಿ ಖಂಡಿಸುತ್ತಾ ಬಂದಿದ್ದ ಜೆಸಿಂಡಾ ಅರ್ಡೆರ್ನ್, ಇಂದಿನ ತೀರ್ಪನ್ನು ಸ್ವಾಗತಿಸಿದ್ದಾರೆ. ಮುಗ್ಧರನ್ನು ಬಲಿ ಪಡೆದಿರುವ ಕ್ರೂರಿ ಇನ್ನು ಜೈಲು ಕಂಬಿಗಳ ಹಿಂದೆ ಮೌನವಾಗಿ ಮತ್ತು ಏಕಾಂಗಿಯಾಗಿ ಶಿಕ್ಷೆ ಅನುಭವಿಸಲಿದ್ದಾನೆ ಎನ್ನುವ ಮೂಲಕ ತೀರ್ಪನ್ನು ಸ್ವಾಗತಿಸಿದ್ದಾರೆ.
ಚಿತ್ರದಲ್ಲಿ: ಮಸೀದಿ ಶೂಟಿಂಗ್ ಸಂತ್ರಸ್ತ ತಾಜ್ ಮೊಹಮ್ಮದ್ ಕ್ರಮಾನ್

ನ್ಯೂಜಿಲ್ಯಾಂಡ್ ಪ್ರಧಾನಿ ಹೇಳಿದ್ದೇನು..?
ಘಟನೆ ನಡೆದಾಗಲೂ ನ್ಯೂಜಿಲ್ಯಾಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್ ಜನಾಂಗೀಯವಾದವನ್ನು ತೀವ್ರವಾಗಿ ಖಂಡಿಸಿದ್ದರು. ಅಲ್ಲದೆ ಹಂತಕನಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದರು. ಒಟ್ಟಿನಲ್ಲಿ ನ್ಯೂಜಿಲ್ಯಾಂಡ್ ಇತಿಹಾಸದಲ್ಲೇ ಭೀಕರ ಹತ್ಯಾಕಾಂಡ ನಡೆಸಿದ್ದ ಕ್ರೂರಿಗೆ ಕಠಿಣವಾದ ಶಿಕ್ಷೆಯನ್ನೇ ವಿಧಿಸಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications