ಲಂಡನ್ ನಲ್ಲಿ ಚಾಕು ತೋರಿಸಿ ಒತ್ತೆಯಾಳು ಮಾಡಿಕೊಂಡ
ಲಂಡನ್, ಜೂನ್ 9: ಉದ್ಯೋಗ ಕೇಂದ್ರವೊಂದರಲ್ಲಿ ವ್ಯಕ್ತಿಯೊಬ್ಬ ಚಾಕು ತೋರಿಸಿ ಹಲವರನ್ನು ಒತ್ತೆಯಾಳಾಗಿ ಇರಿಸಿಕೊಂಡ ಘಟನೆ ಲಂಡನ್ ನ ನ್ಯೂ ಕ್ಯಾಸಲ್ ನಲ್ಲಿ ಶುಕ್ರವಾರ ನಡೆದಿದೆ ಎಂದು ನಾರ್ಥಂಬ್ರಿಯಾ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ತಜ್ಞ ಸಂಧಾನಕಾರರನ್ನು ಕಳುಹಿಸಲಾಗಿದೆ.
ಚಾಕುವನ್ನು ಹಿಡಿದ ವ್ಯಕ್ತಿಯು ಕೆಲವು ಕೆಲಸಗಾರರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು ಎರಡೂವರೆ ಗಂಟೆಗಳ ನಂತರ ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.[ಮತ್ತಷ್ಟು ದಾಳಿ ಐಸಿಸ್ ನಿಂದ ಪಾಶ್ಚಿಮಾತ್ಯ ದೇಶಗಳಿಗೆ ಬೆದರಿಕೆ]

ಉದ್ಯೋಗ ಕೇಂದ್ರದ ಸುತ್ತಮುತ್ತ ಎಲ್ಲ ರಸ್ತೆಗಳನ್ನು ಬಂದ್ ಮಾಡಲಾಯಿತು. ಹತ್ತಿರದಲ್ಲಿದ್ದ ವಿದ್ಯಾರ್ಥಿಗಳ ಸಭಾಂಗಣವನ್ನು ತೆರವು ಮಾಡಲಾಯಿತು. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಮೆಟ್ರೋ ನಿಲ್ದಾಣದ ಎಲ್ಲ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಯಿತು.
ದಾಳಿ ನಡೆಸಿದ ವ್ಯಕ್ತಿಯು ಆ ಉದ್ಯೋಗ ಕೇಂದ್ರದ ನೌಕರರಿಗೆ ಪರಿಚಿತನಾದವನು. ಈ ಘಟನೆಯಲ್ಲಿ ಯಾರಿಗೆ ಯಾವುದೇ ಗಾಯಗಳಾಗಿಲ್ಲ. ಆದರೂ ಸ್ಥಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರಿದ್ದಾರೆ. ಸ್ಥಳೀಯವಾಗಿ ಹಣ್ಣು ಮಾರುವ ವ್ಯಕ್ತಿ ನೀಡಿದ ಮಾಹಿತಿ ಪ್ರಕಾರ, ಹತ್ತು-ಹನ್ನೊಂದು ಮಂದಿ ಪೊಲೀಸರು ಶಸ್ತಸಜ್ಜಿತರಾಗಿದ್ದು, ಉದ್ಯೋಗ ಕೇಂದ್ರವನ್ನು ಸುತ್ತುವರಿದಿದ್ದಾರೆ.[ಉಗ್ರರ ದಾಳಿಗೆ ಬೆಚ್ಚಿದ ಲಂಡನ್, ಹೈ ಅಲರ್ಟ್ ಘೋಷಣೆ!]
ಸದ್ಯಕ್ಕೆ ದೊರಕಿದ ಮಾಹಿತಿ ಪ್ರಕಾರ ದಾಳಿಕೋರ ಒಬ್ಬನು ಮಾತ್ರ ಕಟ್ಟಡದಲ್ಲಿದ್ದು, ಒತ್ತೆಯಾಳುಗಳನ್ನೆಲ್ಲ ಬಿಡುಗಡೆ ಮಾಡಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications