ನ.23: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ನ.23: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
12.35: ಜಾಗತಿಕ ಭಯೋತ್ಪಾದನೆ ಸೂಚ್ಯಂಕ 2014ರ ವರದಿ ಅನ್ವಯ ಭಾರತದಲ್ಲಿ 2012-2013 ರ ಅವಧಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಶೇ 70 ರಷ್ಟು ಏರಿಕೆಯಾಗಿದೆ. ಈ ಅವಧಿಯಲ್ಲಿ ಉಗ್ರರು, ನಕ್ಸಲರ ದಾಳಿಗೆ 238 ರಿಂದ 404 ಜನ ಮೃತರಾಗಿದ್ದಾರೆ.

12.30: ಇಥಿಯೋಪಿಯಾದ ಗುಯೆ ಅಡೊಲಾ ಅವರು ಭಾನುವಾರ ನಡೆದ ದೆಹಲಿ ಹಾಫ್ ಮ್ಯಾರಥಾನ್ ಗೆದ್ದುಕೊಂಡಿದ್ದಾರೆ. ಮಹಿಳೆಯರ ವಿಭಾದಲ್ಲಿ ಕೀನ್ಯಾದ ಫ್ಲೋರೆನ್ಸ್ ಕಿಪ್ಲಾಗಾಟ್ ಅವರು ಏರ್ ಟೆಲ್ ದೆಹಲಿ ಮ್ಯಾರಾಥಾನ್ ಕಿರೀಟ ಧರಿಸಿದ್ದಾರೆ.
12.15: ಎಫ್ ಸಿ ಬಾರ್ಸಿಲೋನಾದ ಸ್ಟಾರ್ ಲಿಯೋನೆಲ್ ಮೆಸ್ಸಿ ಅವರು ಸ್ಪ್ಯಾನೀಷ್ ಲಾ ಲೀಗಾದಲ್ಲಿ ಒಟ್ಟಾರೆ 253 ಗೋಲು ದಾಖಲಿಸಿ ಅತ್ಯಧಿಕ ಗೋಲ್ ಸ್ಕೋರರ್ ಎನಿಸಿದ್ದಾರೆ.
12.10: ಕೂಲ್ iris ಖರೀದಿಸಿದ ಯಾಹೂ ಸಂಸ್ಥೆ
11.15: ತಮಿಳುನಾಡಿನ ನಾಮಕ್ಕಲ್ ಬಳಿ ರಸ್ತೆ ಅಪಘಾತದಲ್ಲಿ ಐವರು ಆಯ್ಯಪ್ಪ ಭಕ್ತರು ಸಾವನ್ನಪ್ಪಿದ್ದಾರೆ. ಶಬರಿಮಲೆಯಿಂದ ವಾಪಸ್ ಬರುತ್ತಿದ್ದ ಕಾರು ಎದುರಿಗಿದ್ದ ಮರಳು ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
10.45: ಜಪಾನ್ನಲ್ಲಿ ಸಂಭವಿಸಿರುವ ಭೂಕಂಪದಿಂದಾಗಿ ನೂರಾರು ಮನೆಗಳು ಕುಸಿದು ಬಿದ್ದಿವೆ. ಸುಮಾರು 50ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.8 ಪ್ರಮಾಣ ಹೊಂದಿದ್ದು, ಗಾಯಾಳುಗಳ ಪೈಕಿ ಅರ್ಧದಷ್ಟು ಜನರ ಸ್ಥಿತಿ ಚಿಂತಾಜನಕವಾಗಿದೆ.
9.45: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಹುಟ್ಟುಹಬ್ಬದ ಸಮಾರಂಭದಲ್ಲಿ ಕಾಲ್ತುಳಿತದಿಂದಾಗಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

9.30: ಸೋಮಾಲಿಯಾದ ಅಲ್ ಶಬಾದ್ ಸಂಘಟನೆ ಕೀನ್ಯಾದಲ್ಲಿ 28 ಮುಸ್ಲಿಮೇತರರನ್ನು ಬಲಿ ತೆಗೆದುಕೊಂಡಿದ್ದಾರೆ.
9.15: ಟ್ಯುನಿಷಿಯಾದಲ್ಲಿ ನ.23ರಂದು ಪ್ರಪ್ರಥಮ ಬಾರಿಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ. 2011ರ ಕ್ರಾಂತಿಯ ನಂತರ ಪ್ರಜಾಪ್ರಭುತ್ವದತ್ತ ದಾಪುಗಾಲಿಟ್ಟಿದೆ.
More From
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications