4 ಶತಮಾನದ ಬಳಿಕ ಶೇಕ್ಸ್ಪಿಯರ್ನ್ನು ಮತ್ತೆ ಸಾಯಿಸಿದ ಅರ್ಜೆಂಟೈನಾ ಪತ್ರಕರ್ತೆ
ಇಂಗ್ಲಿಷ್ ಸಾಹಿತ್ಯ ಲೋಕದ ಖ್ಯಾತ ಕವಿ ವಿಲಿಯಂ ಶೇಕ್ಸ್ಪಿಯರ್ ಎರಡು ದಿನದ ಹಿಂದೆ ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಿ ಅರ್ಜೆಂಟೈನಾದ ಸುದ್ದಿವಾಹಿನಿಯೊಂದು ನಗೆಪಾಟಲಿಗೆ ಗುರಿಯಾಗಿದೆ.
ವಿಲಿಯಮ್ ಶೇಕ್ಸ್ಪಿಯರ್ ಎನ್ನುವ 81 ವರ್ಷದ ವ್ಯಕ್ತಿ ಇಂಗ್ಲೆಂಡ್ನಲ್ಲಿ ಎರಡು ದಿನದ ಹಿಂದೆ ನಿಧನರಾಗಿದ್ದರು, ಫೈಜರ್ ಸಂಸ್ಥೆಯಿಂದ ಲಸಿಕೆ ಪಡೆದ ವಿಶ್ವದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆ ಹೊಂದಿದ್ದರು.
ಆದರೆ ಇದನ್ನು ತಪ್ಪಾಗಿ ಗ್ರಹಿಸಿದ ಅರ್ಜೆಂಟೈನಾದ ಸುದ್ದಿವಾಹಿನಿ, ಇಂಗ್ಲಿಷ್ ಸಾಹಿತ್ಯ ಲೋಕದ ದಿಗ್ಗಜ ವಿಲಿಯಂ ಶೇಕ್ಸ್ಪಿಯರ್ ಅವರೇ ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಿತ್ತು.

ಇಷ್ಟಕ್ಕೇ ನಿಲ್ಲಿಸದೆ ವಿಶ್ವದಲ್ಲೇ ಮೊದಲು ಕೊರೊನಾ ಲಸಿಕೆ ಪಡೆದಿದ್ದ ವಿಲಿಯಂ ಶೇಕ್ಸ್ಪಿಯರ್ ನಿಧನರಾಗಿದ್ದಾರೆ ಅವರ ಸಾವು ನಮ್ಮನ್ನೆಲ್ಲಾ ಸಿಗ್ಭ್ರಾಂತರನ್ನಾಗಿಸಿದೆ. ನೀವೆಲ್ಲಾ ತಿಳಿದಂತೆ ಶೇಕ್ಸ್ಪಿಯರ್ ಇಂಗ್ಲಿಷ್ ಸಾಹಿತ್ಯ ಲೋಕದ ಪ್ರಮುಖ ಬರಹಗಾರರಾಗಿದ್ದಾರೆ, ನಗೆ ಅವರು ಮಾಸ್ಟರ್ ಇದ್ದಂತೆ 81 ವರ್ಷವಾಗಿದ್ದ ಇವರಿಗೆ ಇಂಗ್ಲೆಂಡ್ನಲ್ಲಿ ಮೊದಲ ಲಸಿಕೆ ನೀಡಲಾಗಿತ್ತು ಎಂದು ಆಂಕರ್ ಹೇಳಿದ್ದರು.
ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಕವಿ, ಸಾಹಿತಿ ಶೇಕ್ಸ್ಪಿಯರ್ 1616ರಲ್ಲೇ ನಿಧನಾರಗಿದ್ದು, ಈ ವಿಚಾರವನ್ನು ತಿಳಿದುಕೊಳ್ಳದೆ ಪತ್ರಕರ್ತೆ ಮಾಡಿದ ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಕೊರೊನಾ ಲಸಿಕೆ ಪಡೆದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವಿಲಿಯಂ ಶೇಕ್ಸ್ಪಿಯರ್ (81) ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬ್ರಿಟಿಷ್ ಮಾಧ್ಯಮಗಳು ವರದಿ ಮಾಡಿವೆ.
ಕಳೆದ ವರ್ಷ ಡಿಸೆಂಬರ್ 8ರಂದು ವಿಲಿಯಂ ಶೇಕ್ಸ್ಪಿಯರ್ ಅವರು ಯೂನಿವರ್ಸಿಟಿ ಹಾಸ್ಪಿಟಲ್ ಕೊವೆಂಟ್ರಿ ಹಾಗೂ ವಾರ್ವಿಕ್ ಶೈರ್ನಲ್ಲಿ ಕೊರೊನಾ ಸೋಂಕು ವಿರುದ್ದ ಹೋರಾಡಿದ ಮೊದಲ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ವಿಲಿಯಂ ಅವರು ಫೈಜರ್-ಬಯೋಟೆಕ್ ಲಸಿಕೆ ಪಡೆದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications