ಫ್ರಾನ್ಸ್ನಲ್ಲಿ ದಾಳಿ ಮಾಡಿದ್ದು ಐಎಸ್ಐಎಸ್?
ಪ್ಯಾರೀಸ್, ಜುಲೈ 14 : ದಕ್ಷಿಣ ಫ್ರಾನ್ಸ್ನ ನೀಸ್ ನಗರದಲ್ಲಿ ನಡೆದಿರುವ ಭೀಕರ ಹತ್ಯಾಕಾಂಡ ಉಗ್ರರು ನಡೆಸಿರುವುದೇ?. ಜನರು ತುಂಬಿದ್ದ ರಸ್ತೆಯಲ್ಲಿ ಲಾರಿ ಹರಿಸಿ ರಕ್ತದೋಕುಳಿ ನಡೆಸಿದ ಅಪರಿಚಿತ ವ್ಯಕ್ತಿ ಉಗ್ರನೇ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾವುದೇ ಉಗ್ರ ಸಂಘಟನೆಗಳು ಇದುವರೆಗೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.
ಐಎಸ್ಐಎಸ್ ನೀಸ್ ನಗರದಲ್ಲಿ ನಡೆದ ದಾಳಿಯ ಬಳಿಕ ಹಲವು ಸಂಭ್ರಮಾಚರಣೆ ಸಂದೇಶಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿದೆ. 'Keep the Eiffel Tower Dark until the ISIS conquers France' ಎಂಬುದು ಐಎಸ್ಐಎಸ್ ಹಾಕಿರುವ ಸಂದೇಶಗಳ ಪೈಕಿ ಒಂದು. [ಫ್ರಾನ್ಸ್ : ಲಾರಿ ಹರಿಸಿ 77 ಜನರ ಹತ್ಯೆ]

ನೀಸ್ ನಗರದಲ್ಲಿ ನಡೆದಿರುವುದು ಭಯೋತ್ಪಾದಕ ದಾಳಿ ಎಂದು ಶಂಕಿಸಲಾಗಿದೆ. ಆದರೆ, ಯಾವುದೇ ಸಂಘಟನೆಗಳು ಈ ತನಕ 77 ಜನರ ಸಾವಿಗೆ ಕಾರಣವಾದ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೆ, ಐಎಸ್ಐಎಸ್ ಹಲವಾರು ಸಂದೇಶಗಳನ್ನು ಹಾಕುತ್ತಿದ್ದು, ದಾಳಿಯ ನಡೆಸಿದ್ದು ತಾನೇ ಎಂದು ಹೇಳಿಕೊಳ್ಳುವ ಸಾಧ್ಯತೆ ಇದೆ. [ಪ್ಯಾರಿಸಿನ ಶಾ೦ತ ಪರಿಸರದಲ್ಲಿ ಉಗ್ರವಾದದ ಬೆ೦ಕಿ: ಇದಕ್ಕೆ ಕೊನೆಯೆಂದು?]
La France est éplorée, affligée, mais elle est forte et le sera toujours plus que les fanatiques qui veulent aujourd’hui la frapper. #Nice
— François Hollande (@fhollande) July 15, 2016
ದಾಳಿ ನಡೆಸಿದ ಲಾರಿಯಲ್ಲಿ ಸ್ಫೋಟಗಳಿತ್ತು ಎಂದು ಭದ್ರತಾಪಡೆಗಳು ಹೇಳಿವೆ. ದಾಳಿ ನಡೆಸಿದ್ದು ನಾವೇ ಎಂದು ಹೇಳಿಕೊಳ್ಳಲು ಐಎಸ್ಐಎಸ್ ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಂದೇಶಗಳನ್ನು ಹಾಕುತ್ತಿದೆ. 'ಫ್ರಾನ್ಸ್ಅನ್ನು ನಮ್ಮ ವಶಕ್ಕೆ ತೆಗೆದುಕೊಳ್ಳುವ ತನಕ ಐಫೆಲ್ ಟವರ್ ಅನ್ನು ಕತ್ತಲಲ್ಲಿಡಿ' ಎಂಬ ಸಂದೇಶ ಹಲವಾರು ಸಂಶಯಗಳನ್ನು ಹುಟ್ಟು ಹಾಕಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications