ನೈಜೀರಿಯಾ ಚರ್ಚ್ ಮೇಲೆ ದಾಳಿ: 50 ಮಂದಿ ಹತ್ಯೆ
ಲಾಗೋಸ್ ಜೂನ್ 6: ನೈಜೀರಿಯಾದ ಕ್ಯಾಥೊಲಿಕ್ ಚರ್ಚ್ನಲ್ಲಿ ಭಾನುವಾರ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಬಂದೂಕುಧಾರಿಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ.
ನೈರುತ್ಯ ನೈಜೀರಿಯಾದ ಒಂಡೋ ರಾಜ್ಯದ ಒವೊ ನಗರದ ಸೈಂಟ್ ಫ್ರಾನ್ಸಿಸ್ ಕ್ಯಾಥೊಲಿಕ್ ಚರ್ಚ್ನಲ್ಲಿ ಪೆಂಟೆಕೋಸ್ಟ್ ಸಂಡೇ ದಿನದ ಹಿನ್ನೆಲೆಯಲ್ಲಿ ವಿಶೇಷ ಪಾರ್ಥನೆ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಚರ್ಚ್ಗೆ ಆಗಮಿಸಿದ್ದರು. ಇದೇ ವೇಳೆ ಶಸ್ತ್ರಸಜ್ಜಿತ ಬಂದೂಕುಧಾರಿಗಳು ಏಕಾಏಕಿ ಭಕ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಅಲ್ಲದೇ ಸ್ಫೋಟಕಗಳನ್ನು ಸಿಡಿಸಿದ್ದಾರೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಶಾಸಕ ಒಗುನ್ಮೊಳಸುಯಿ ಒಲುವೋಲೆ ತಿಳಿಸಿದ್ದಾರೆ.

"ಕ್ರೈಸ್ಥರ ವಿಶೇಷ ದಿನಗಳಲ್ಲಿ ಒಂದಾದ ಪೆಂಟೆಕೋಸ್ಟ್ ಸಂಡೇ ಯ ಪ್ರಾರ್ಥನೆ ವೇಳೆ ಈ ರೀತಿಯ ದಾಳಿ ದುರುದೃಷ್ಟಕರ. ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಅನೇಕರು ಮೃತಪಟ್ಟಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇವೆ,'' ಎಂದು ಪೋಪ್ ಪ್ರಾನ್ಸಿಸ್ ಹೇಳಿದ್ದಾರೆ.
ಚರ್ಚ್ನ ಪ್ರಧಾನ ಪ್ರೀಸ್ಟ್ ಅಪಹರಣ
"ಫ್ರಾನ್ಸಿಸ್ ಕ್ಯಾಥೊಲಿಕ್ ಚರ್ಚ್ನ ಭಾನುವಾರದ ಪ್ರಾರ್ಥನೆ ವೇಳೆ ಬಂದೂಕುಧಾರಿಗಳು ಚರ್ಚ್ನ ಒಳಗೆ ಮತ್ತು ಹೊರಗೆ ಇದ್ದ ಜನರ ಮೇಲೆ ಗುಂಡಿನ ದಾಳಿ ನಡೆಸಿದರು. ಇದೇ ವೇಳೆ ಬಂದೂಕುಧಾರಿಗಳು ಫ್ರಾನ್ಸಿಸ್ ಕ್ಯಾಥೊಲಿಕ್ ಚರ್ಚ್ನ ಪ್ರಧಾನ ಪ್ರೀಸ್ಟ್ ಅವರನ್ನು ಅಪಹರಿಸಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮಕ್ಕಳೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ. ಗಾಯಗೊಂಡವರನ್ನು ಕೂಡಲೇ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಘಟನೆ ಹಿನ್ನೆಲೆಯಲ್ಲಿ ಬಂದೂಕುಧಾರಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ,'' ಎಂದು ಒಂಡೋ ರಾಜ್ಯದ ಪೊಲೀಸ್ ವಕ್ತಾರ ಫನ್ಮಿಲಾಯ್ ಇಬುಕನ್ ಒಡುನ್ಲಾಮಿ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ಸಮಗ್ರ ತನಿಖೆ
"ಇದೊಂದು ಹತ್ಯಾಕಾಂಡ. ಈ ರೀತಿಯ ಘಟನೆಗಳು ಮರುಕಳಿಸಲು ಬಿಡಬಾರದು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ನಮ್ಮ ಸಾಂತ್ವನವಿದೆ. ಆ ಕುಟುಂಬಗಳ ಸಹಾಯಕ್ಕೆ ಸರಕಾರವಿದೆ. ಬಂದೂಕುಧಾರಿಗಳ ಗುರುತು ಮತ್ತು ದಾಳಿಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ಕೈಗೊಂಡಿದ್ದಾರೆ,'' ಎಂದು ಒಂಡೋ ರಾಜ್ಯದ ರಾಜ್ಯಪಾಲ ಅರಕುನ್ರಿನ್ ಒಲುವಾರೊಟಿಮಿ ಅಕೆರೆಡೊಲು ಹೇಳಿದರು.
ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ
ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಒವೊ ನಗರದ ನಾಲ್ಕು ದಿಕ್ಕುಗಳಿಗೂ ನಾಕಾಬಂದಿ ಹಾಕಲಾಗಿದೆ. ಘಟನೆ ಸಂಬಂಧ ಸರಕಾರ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಅಗತ್ಯ ನೆರವು ನೀಡುತ್ತಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Recommended Video
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications