ನೀತಾ ಅಂಬಾನಿಗೆ ನ್ಯೂಯಾರ್ಕ್ ನ ಮ್ಯೂಸಿಯಂನಿಂದ ಗೌರವ!
ನೀತಾ ಅಂಬಾನಿಯವರ ಪರೋಪಕಾರಿ ಕಾರ್ಯಕ್ಕಾಗಿ ನ್ಯೂಯಾರ್ಕ್ನಲ್ಲಿ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಿಂದ ಸಂದಿದೆ ಗೌರವ
ನ್ಯೂಯಾರ್ಕ್, ಜನವರಿ 26: ನೀತಾ ಅಂಬಾನಿ, ಸಂಸ್ಥಾಪಕರು ಮತ್ತು ಅಧ್ಯಕ್ಷರು, ರಿಲಯನ್ಸ್ ಫೌಂಡೇಶನ್, ಅವರನ್ನು ಪ್ರತಿಷ್ಠಿತ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ (ದಿ ಮೆಟ್) ನ್ಯೂಯಾರ್ಕ್ ನನಲ್ಲಿ ಗೌರವಿಸಿದೆ.
ಶಿಕ್ಷಣ, ಕ್ರೀಡೆ, ಆರೋಗ್ಯಸೇವೆ, ಗ್ರಾಮೀಣ ರೂಪಾಂತರ, ನಗರ ನವೀಕರಣ, ವಿಪತ್ತು ನಿರ್ವಹಣೆ, ಮಹಿಳಾ ಸಬಲೀಕರಣ ಮತ್ತು ಕಲೆಗೆ ಉತ್ತೇಜನದ ಕ್ಷೇತ್ರಗಳಲ್ಲಿ ನೀತಾ ಅಂಬಾನಿಯವರ ವಿಸ್ತಾರವಾದ ಪರೋಪಕಾರಿ ಕಾರ್ಯಗಳನ್ನು ಗುರುತಿಸಿ ಈ ವಿಶೇಷ ಗೌರವ ನೀಡಲಾಗಿದೆ. ಈ ವಿಶೇಷ ಗೌರವವನ್ನು ಸ್ವೀಕರಿಸುತ್ತಿರುವ ದಕ್ಷಿಣ ಏಷ್ಯಾದ ಮೊದಲ ವ್ಯಕ್ತಿ ಇವರು ಎಂಬುದು ಹೆಗ್ಗಳಿಕೆಯಾಗಿದೆ.

ಶ್ರೀಮತಿ ಅಂಬಾನಿಯವರ ನೇತೃತ್ವದ ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ವ್ಯಾಪಕ ಹಾಗೂ ಬೃಹತ್ ಪ್ರಮಾಣದ ಕಾರ್ಯದಿಂದ ದಿ ಮೆಟ್ ಪ್ರಭಾವಿತಗೊಂಡಿದೆ. ರಿಲಯನ್ಸ್ ಫೌಂಡೇಶನ್ 10 ಮಿಲಿಯನ್ ಭಾರತೀಯರಿಗೆ ಅನುಕೂಲ ಕಲ್ಪಿಸಿದೆ, 10,500ಕ್ಕೂ ಹೆಚ್ಚು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರನ್ನು ತಲುಪಿದೆ.
ಈ ಗೌರವ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಅಂಬಾನಿಯವರು, 'ರಿಲಯನ್ಸ್ ಫೌಂಡೇಶನ್ನಲ್ಲಿನ ನಮ್ಮ ಕಾರ್ಯಕ್ಕೆ ನೀಡಲಾದ ಈ ಗೌರವ ನನಗೆ ಖುಷಿ ತಂದಿದೆ ಮತ್ತು ವಿನೀತಳಾಗಿದ್ದೇನೆ. ಇದು ಶಿಕ್ಷಣ, ಕ್ರೀಡೆ, ಆರೋಗ್ಯ ಮತ್ತು ಗ್ರಾಮೀಣ ರೂಪಾಂತರದ ಮೂಲಕ ಲಕ್ಷಾಂತರ ಜನರ ಮುಖದಲ್ಲಿ ನಗು ಮೂಡಿಸುವ ನಮ್ಮ ಪ್ರಯತ್ನಕ್ಕೆ ಸಂದ ನಿಜವಾದ ಪ್ರತಿಫಲವಾಗಿದೆ.

'ದಿ ಮೆಟ್ ನಂತಹ ಪ್ರತಿಷ್ಠಿತ ಜಾಗತಿಕ ಸಂಸ್ಥೆಯಿಂದ ದೊರಕುತ್ತಿರುವ ಈ ಗೌರವವು ಸುಸ್ಥಿರ ಅಭಿವೃದ್ಧಿ ಹಾಗೂ ಸಾಮಾಜಿಕ ಸಬಲೀಕರಣದತ್ತ ನಮ್ಮ ಬದ್ಧತೆಯನ್ನು ಗಟ್ಟಿಗೊಳಿಸಲಿದೆ ಮತ್ತು ರಿಲಯನ್ಸ್ ಫೌಂಡೇಶನ್ನಲ್ಲಿನ ಪ್ರತಿಯೊಬ್ಬರಿಗೂ ಮುಂದಿನ ಪೀಳಿಗೆಗಾಗಿ ಉತ್ತಮ ಕಾರ್ಯ ಮಾಡಲು ಸ್ಫೂರ್ತಿ ನೀಡಲಿದೆ'' ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications