ಮ್ಯಾನ್ಮಾರ್ ಸೇನಾಪಡೆಗೆ ಯಾವುದೇ ಶಸ್ತ್ರಾಸ್ತ್ರ ಪೂರೈಸಿಲ್ಲ: ಹೆಚ್ಎಎಲ್
ಬೆಂಗಳೂರು, ಏಪ್ರಿಲ್ 1: ಮ್ಯಾನ್ಮಾರ್ ಸೇನಾ ಪಡೆ ಜೊತೆಗೆ ಯಾವುದೇ ರೀತಿ ವ್ಯಾವಹಾರಿಕ ಒಪ್ಪಂದ ಮತ್ತು ಸಂಪರ್ಕವನ್ನು ಹೊಂದಿಲ್ಲ ಎಂದು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಡೆಟ್(HAL) ಸ್ಪಷ್ಟವಾಗಿ ಹೇಳಿದೆ.
ಮ್ಯಾನ್ಮಾರ್ ಮತ್ತು ಸ್ಟಾಕ್ಹೋಮ್ ಅಂತಾರಾಷ್ಟ್ರೀಯ ಶಾಂತಿ ಮತ್ತು ಸಂಶೋಧನಾ ಸಂಸ್ಥೆಯ ಶಸ್ತ್ರಾಸ್ತ್ರ ವರ್ಗಾವಣೆ ದತ್ತಾಂಶದ ವರದಿ ಬಿಡುಗಡೆಗೊಳಿಸಿತ್ತು. 2017 ರಿಂದ 19ರವರೆಗೆ ಮ್ಯಾನ್ಮಾರ್ ಸೇನಾಪಡೆಗೆ ಎಚ್ಎಎಲ್ ಉಪಕರಣಗಳನ್ನು ಪೂರೈಸಿದೆ ಎಂದು ಹೇಳಿತ್ತು. ಇದರ ಬೆನ್ನಲ್ಲೇ ಎಚ್ಎಎಲ್ ಸ್ಪಷ್ಟನೆ ನೀಡಿದೆ.
"ಯುಎನ್ಎಚ್ಆರ್ ಸಿ ನೀಡಿರುವ ವರದಿಯು ವಾಸ್ತವಿಕವಾಗಿ ತಪ್ಪು ಮಾಹಿತಿಯಿಂದ ಕೂಡಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು 2017 ರಿಂದ 2019 ರವರೆಗೆ ಮ್ಯಾನ್ಮಾರ್ ರಕ್ಷಣಾ ಪಡೆಗಳೊಂದಿಗೆ ಯಾವುದೇ ವ್ಯವಹಾರಗಳನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಮ್ಯಾನ್ಮಾರ್ನಲ್ಲಿ 500ಕ್ಕೂ ಹೆಚ್ಚು ಮಂದಿ ಸಾವು:
ಮ್ಯಾನ್ಮಾರ್ನಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟ ಉಗ್ರ ಸ್ವರೂಪಕ್ಕೆ ತಿರುಗಿದ್ದು, 500ಕ್ಕೂ ಹೆಚ್ಚು ಜನರನ್ನು ಕೊಂದು ಹಾಕಲಾಗಿದೆ. ಪ್ರತಿಭಟನಾನಿರತರ ಮೇಲೆ ನಡೆಸಿದ ದಾಳಿಯಲ್ಲಿ ಮೃತಪಟ್ಟವರಲ್ಲಿ ಮಕ್ಕಳು ಮತ್ತು ಮಹಿಳೆಯರು ಕೂಡ ಇದ್ದಾರೆ. ಇದರ ಬೆನ್ನಲ್ಲೇ ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಸರ್ಕಾರ ಉರುಳಿಸಿದ ನಂತರ ಮಿಲಿಟರಿಗೆ ಶಸ್ತ್ರಾಸ್ತ್ರ ವರ್ಗಾವಣೆ ಮಾಡಿರುವುದರ ಬಗ್ಗೆ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಮತ್ತು ಇಂಗ್ಲೆಂಡ್ ರಾಷ್ಟ್ರಗಳು ಮ್ಯಾನ್ಮಾರ್ನ ಮಿಲಿಟರಿಗೆ ಸಂಬಂಧಿಸಿದ ಅನೇಕ ವ್ಯಕ್ತಿಗಳು ಮತ್ತು ಘಟಕಗಳಿಗೆ ನಿರ್ಬಂಧ ವಿಧಿಸಿವೆ. ಜೊತೆಗೆ ಮ್ಯಾನ್ಮಾರ್ನ ಕೆಲವು ಸಂಘಟನೆಗಳ ವಿರುದ್ಧವೂ ನಿರ್ಬಂಧ ಹೇರಲಾಗಿದೆ. ಅಲ್ಲದೇ, ಮ್ಯಾನ್ಮಾರ್ನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಅಂತರರಾಷ್ಟ್ರೀಯ ಸಮುದಾಯ ವ್ಯಾಪಕವಾಗಿ ಖಂಡಿಸಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications