Israel War: ಕದನ ವಿರಾಮ ಸಾಧ್ಯವಿಲ್ಲ; ಗುಡುಗಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಗಾಜಾ ಯುದ್ಧದಲ್ಲಿ ಕದನ ವಿರಾಮ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಮಾಸ್ಗೆ ಶಾಕ್ ಕೊಟ್ಟಿದ್ದಾರೆ. ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿರುವವರ ಪಟ್ಟಿಯನ್ನು ಕೊಡುವವರೆಗೆ ಕದನ ವಿರಾಮ ನೀತಿಯನ್ನು ಉಲ್ಲಂಘಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಒಪ್ಪಿಕೊಂಡಂತೆ ಬಿಡುಗಡೆ ಮಾಡಲಾಗುವ ಒತ್ತೆಯಾಳುಗಳ ಪಟ್ಟಿಯನ್ನು ಸ್ವೀಕರಿಸವವರೆಗೆ ನಾವು ಕದನ ವಿರಾಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಒಪ್ಪಂದದ ಉಲ್ಲಂಘನೆ ಮಾಡುವುದನ್ನು ಇಸ್ರೇಲ್ ಎಂದಿಗೂ ಸಹಿಸುವುದಿಲ್ಲ, ಇದಕ್ಕೆ ಹಮಾಸ್ ಮಾತ್ರ ಜವಾಬ್ದಾರವಾಗಿದೆ ಎಂದು ನೆತನ್ಯಾಹು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.

ಭಾನುವಾರದಿಂದ ಕದನ ವಿರಾಮ
ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಭಾನುವಾರದಿಂದ ಆರಂಭವಾಗಲಿದೆ ಎಂದು ಇಸ್ರೇಲ್ನ ಸಚಿವ ಸಂಪುಟವು ಕದನ ವಿರಾಮ ಮತ್ತು ಒತ್ತೆಯಾಳು-ಕೈದಿಗಳ ಬಿಡುಗಡೆ ಒಪ್ಪಂದಕ್ಕೆ ಒಪ್ಪಿಗೆ ನೀಡಿ ಮತ ಚಲಾಯಿಸಿದ ಬಳಿಕ ಮಧ್ಯವರ್ತಿಯಾಗಿದ್ದ ಕತಾರ್ ತಿಳಿಸಿದೆ.
ಈಜಿಪ್ಟ್ ಜೊತೆ ಒಪ್ಪಂದದ ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಮತ್ತು ಯುಎಸ್ ಬುಧವಾರ ಒಪ್ಪಂದ ಘೋಷಣೆ ಮಾಡಿದ ಬಳಿಕವೂ ಗಾಜಾದ ಮೇಲೆ ಇಸ್ರೇಲ್ ಸೈನ್ಯದ ದಾಳಿ ಮುಂದುವರೆದಿದೆ.
ಶನಿವಾರ ದಕ್ಷಿಣ ಗಾಜಾದಲ್ಲಿರುವ ಖಾನ್ ಯೂನಿಸ್ನಲ್ಲಿರುವ ಗುಡಾರದ ಮೇಲೆ ಬಾಂಬ್ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಮಾಹಿತಿ ನೀಡಿದೆ ಎಂದು ಎಎಫ್ಪಿ ವರದಿ ಮಾಡಿದೆ.
ಜೆರುಸಲೆಮ್ ಮೇಲೆ ವಾಯುದಾಳಿ ಸೈರನ್ಗಳು ಮೊಳಗಿದ ಬಳಿಕ ಇರಾನ್ ಬೆಂಬಲಿತ ಹುತಿ ಬಂಡುಕೋರರು ಪ್ಯಾಲೆಸ್ತಿನಿಯನ್ನರನ್ನು ಬೆಂಬಲಿಸುವುದಾಗಿ ಹೇಳುವ ಯೆಮೆನ್ನಿಂದ ಕ್ಷಿಪಣಿ ದಾಳಿ ನಡೆದಿದೆ ಎಂದು ವರದಿಯಾಗಿದೆ.
15 ತಿಂಗಳಿನಿಂದ ಯುದ್ಧ
ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿ 15 ತಿಂಗಳಾಗಿದೆ ಇದರಲ್ಲಿ ನವೆಂಬರ್ 2023ರಲ್ಲಿ ಒಂದು ವಾರ ಮಾತ್ರ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ಪ್ಯಾಲೆಸ್ಟೀನಿಯನ್ ಕೈದಿಗಳ ಬದಲಾಗಿ ಹಮಾಸ್ ಉಗ್ರಗಾಮಿಗಳು ಹಿಡಿದಿಟ್ಟುಕೊಂಡಿದ್ದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.
ಒಪ್ಪಂದದ ಮೊದಲ ಹಂತದಲ್ಲಿ 737 ಪ್ಯಾಲೆಸ್ಟೀನಿಯನ್ ಕೈದಿಗಳು ಮತ್ತು ಬಂಧಿತರನ್ನು ಬಿಡುಗಡೆ ಮಾಡಲಾಗುವುದು ಎಂದು ಇಸ್ರೇಲ್ ನ್ಯಾಯ ಸಚಿವಾಲಯ ಈ ಹಿಂದೆ ಹೇಳಿತ್ತು ಆದರೆ ಯಾರನ್ನೂ ಕೂಡ ಈವರೆಗೂ ಬಿಡುಗಡೆ ಮಾಡಿಲ್ಲ ಎಂದು ವರದಿಯಾಗಿದೆ.
ಈ ಒಪ್ಪಂದ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಳ್ಳುವ ಒಂದು ದಿನ ಮೊದಲ ಕದನ ವಿರಾಮ ಘೋಷಣೆಯಾಗಿರುವುದು ವಿಶೇಷವಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications