Donald Trump: ಭಾರತೀಯರಿಗೆ ಕೆಲಸ ಕೊಡಬೇಡಿ, ಅಮೆರಿಕದ ಕಂಪನಿಗಳಿಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಭಾರತೀಯರ ಬೆಂಬಲ ಪಡೆದು, ಅಮೆರಿಕ ಅಧ್ಯಕ್ಷೀಯ ಚುನಾವಣೆ ಗೆದ್ದಿದ್ದ ಡೊನಾಲ್ಡ್ ಟ್ರಂಪ್ ಇದೀಗ ಭಾರತೀಯರ ವಿರೋಧಿ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಡೊನಾಲ್ಡ್ ಟ್ರಂಪ್ ಹೀಗೆ ಕಳೆದ ಕೆಲ ತಿಂಗಳಿಂದ ಪದೇ ಪದೇ ಭಾರತ ವಿರೋಧಿ ನಿಲುವು ತೆಗೆದುಕೊಳ್ಳುತ್ತಿದ್ದಾರೆ, ಎಂಬ ಭಾರಿ ಗಂಭೀರ ಆರೋಪದ ನಡುವೆ ಇದೀಗ ಮತ್ತೊಂದು ಸಂಚಲನ ಸೃಷ್ಟಿಸುವ ಸುದ್ದಿ ಸಿಕ್ಕಿದೆ. ಅದರಲ್ಲೂ ಈ ಟ್ರಂಪ್ ಮಹಾಶಯ ಭಾರತೀಯರ ಉದ್ಯೋಗಕ್ಕೂ ಕತ್ತರಿ ಹಾಕಲು ಏನು ಮಾಡಿದ್ದಾರಂತೆ ಗೊತ್ತಾ?
ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆ ಆಗುವಲ್ಲಿ ಭಾರತೀಯರ ಬೆಂಬಲ ಕೂಡ ದೊಡ್ಡದಾಗಿ ಇದೆ. ಕೋಟಿ ಕೋಟಿ ಭಾರತೀಯರು ಡೊನಾಲ್ಡ್ ಟ್ರಂಪ್ ಪರವಾಗಿ ನಿಂತು ಬೆಂಬಲಿಸಿದ್ದರು. ಹಾಗೇ ಅಮೆರಿಕದಲ್ಲಿ ಇರುವ ಭಾರತೀಯರು ನೇರವಾಗಿ ಡೊನಾಲ್ಡ್ ಟ್ರಂಪ್ ಪರವಾಗಿ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರು. ಹೀಗೆ ಭಾರತೀಯರ ಜೊತೆಗೆ ಚನ್ನಾಗಿ ಇದ್ದು, ವೋಟ್ ಪಡೆದಿರುವ ಇದೇ ಟ್ರಂಪ್ ಇದೀಗ ಮಾಡುತ್ತಿರುವ ಕಿತಾಪತಿ ಒಂದೆರಡಲ್ಲ. ಇದೇ ರೀತಿ, ಭಾರತೀಯರಿಗೆ ಕೆಲಸ ಕೊಡಬೇಡಿ ಅಂತಾನೇ ಅಮೆರಿಕದ ಕಂಪನಿಗಳಿಗೆ ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ ನೀಡಿದ್ದಾರಂತೆ.

ಭಾರತೀಯರ ಉದ್ಯೋಗಕ್ಕೆ ಟ್ರಂಪ್ ಕತ್ತರಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿರಿಕ್ ಮಾಡುತ್ತಿರುವುದು ಒಂದೆರಡು ದೇಶಗಳ ಜೊತೆಯಲ್ಲಿ ಅಲ್ಲ. ಡೊನಾಲ್ಡ್ ಟ್ರಂಪ್ ಜೊತೆಯಲ್ಲೇ ವಿವಾದಗಳು ಕೂಡ ಬೆರೆತು ಹೋಗಿದ್ದು, ಅಮೆರಿಕದಲ್ಲಿ ಕೂಡ ಡೊನಾಲ್ಡ್ ಟ್ರಂಪ್ ಒಳ್ಳೆಯ ಹೆಸರು ಉಳಿಸಿಕೊಂಡಿಲ್ಲ. ಜಾಗತಿಕ ವೇದಿಕೆಗಳಲ್ಲೂ ಅಮೆರಿಕದ ಮಾನ ಕಳೆಯಲು ಟ್ರಂಪ್ ಸಾಕು ಅಂತಾ ವಿರೋಧಿಗಳು ಹೇಳುತ್ತಾರೆ. ಇಷ್ಟೆಲ್ಲಾ ಕಾಂಟ್ರವರ್ಸಿ ಮಾಡಿಕೊಳ್ಳುವ ಡೊನಾಲ್ಡ್ ಟ್ರಂಪ್ಗೆ ಭಾರತೀಯರ ಉದ್ಯೋಗ ಅಂದ್ರೆ ಕೆಲಸದ ಮೇಲೆ ಕೂಡ ಇದೀಗ ಕಣ್ಣು ಬಿದ್ದಿದೆ. ನೂರಾರು ಕನಸುಗಳನ್ನ ಕಟ್ಟಿಕೊಂಡು & ಅಮೆರಿಕದಲ್ಲಿ ಕೆಲಸ ಹುಡುಕಲು ಕಾಯುತ್ತಿದ್ದ ಕೋಟಿ ಕೋಟಿ ಭಾರತೀಯರಿಗೆ ಇದೀಗ ಆಘಾತ ನೀಡಿದ್ದಾರೆ ಇದೇ ಕಾಂಟ್ರವರ್ಸಿ ಕಿಂಗ್!
ಅಮೆರಿಕ ಅಧ್ಯಕ್ಷರ ಹೇಳಿಕೆಯಿಂದ ತಲ್ಲಣ!
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಗೂಗಲ್ & ಮೈಕ್ರೋಸಾಫ್ಟ್ ಸೇರಿದಂತೆ ದೈತ್ಯ ಟೆಕ್ ಕಂಪನಿಗಳಿಗೆ ಸಂದೇಶ ಒಂದನ್ನು ರವಾನಿಸಿದ್ದಾರೆ. ವಿದೇಶಗಳಲ್ಲಿ, ವಿಶೇಷವಾಗಿ ಭಾರತದಲ್ಲಿ ಉದ್ಯೋಗ ನೀಡುವುದನ್ನು ನೀವು ನಿಲ್ಲಿಸಬೇಕು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಮೂಲಕ ಭಾರತೀಯರ ಉದ್ಯೋಗಕ್ಕೆ ಕತ್ತರಿ ಹಾಕಲು ಇದೀಗ ಟ್ರಂಪ್ ಮುಂದಾಗಿದ್ದಾರೆ ಎಂಬ ಗಂಭೀರ ಆರೋಪದ ಜೊತೆಗೆ ಆಕ್ರೋಶ ಕೂಡ ಮೊಳಗಿದೆ. ವಾಷಿಂಗ್ಟನ್ ಎಐ ಶೃಂಗಸಭೆ ಸಮಯದಲ್ಲೇ ಟ್ರಂಪ್ ಈ ರೀತಿ ಹೇಳಿಕೆ ನೀಡಿರುವುದು ಭಾರಿ ದೊಡ್ಡ ತಿರುವು ಪಡೆಯುವಂತೆ ಮಾಡಿದೆ. ಅಮೆರಿಕದ ಕಂಪನಿಗಳು ಈಗ ಹೊರ ದೇಶಗಳಲ್ಲಿ ಉತ್ಪಾದನಾ ಘಟಕ ನಿರ್ಮಿಸುವುದಕ್ಕಿಂತ ಈಗ ದೇಶೀಯವಾಗೇ ಉದ್ಯೋಗ ಸೃಷ್ಟಿಗೇ ಹೆಚ್ಚಿನ ಒತ್ತು ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ ಟ್ರಂಪ್.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications