Nobel Chemistry Prize Winners: ಘೋಷಣೆಗೂ ಮುಂಚೆ ನೊಬೆಲ್ ರಸಾಯನಶಾಸ್ತ್ರ ಪ್ರಶಸ್ತಿ ವಿಜೇತರ ಹೆಸರು ಸೋರಿಕೆ- ಯಾರು ತಿಳಿಯಿರಿ
ಸ್ಟಾಕ್ಹೋಮ್, ಅಕ್ಟೋಬರ್ 04: ಈ ವರ್ಷದ ನೊಬೆಲ್ ರಸಾಯನಶಾಸ್ತ್ರ ಪ್ರಶಸ್ತಿ ಪುರಸ್ಕೃತರ ಹೆಸರುಗಳು ಸೋರಿಕೆಯಾಗಿದೆ ಎಂದು ಬುಧವಾರ ಸ್ವೀಡಿಷ್ ಮಾಧ್ಯಮಗಳು ವರದಿ ಮಾಡಿವೆ. ಪ್ರಶಸ್ತಿ ಘೋಷಣೆಗೂ ಕೆಲ ಗಂಟೆಗಳ ಮುಂಚೆ ವಿಜೇತರನ್ನು ಹೆಸರು ಸೋರಿಕೆಯಾಗಿದೆ ಎಂದು ವರದಿಗಳು ಹೇಳಿದೆ. ಈ ಬೆಳವಣಿಗೆ ಜಗತ್ತಿನಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ.
ನೊಬೆಲ್ ಪ್ರಶಸ್ತಿ ಪುರಸ್ಕೃತರ ಹೆಸರುಗಳು ಸೋರಿಕೆಯಾಗುವುದು ಅಪರೂಪದ ಘಟನೆಯಾಗಿದೆ. ಬಹುಮಾನ ಅಥವಾ ಪ್ರಶಸ್ತಿ ನೀಡುವ ಅಕಾಡೆಮಿಗಳು ಪ್ರಕಟಣೆಗಳವರೆಗೆ ವಿಜೇತರ ಹೆಸರನ್ನು ಮುಚ್ಚಿಡಲು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತವೆ. ಆದರೆ, ನೊಬೆಲ್ನಂತಹ ಅಕಾಡೆಮಿಗಳು ಹೆಸರನ್ನು ಸೋರಿಕೆ ಮಾಡಿರುವುದು ಅಚ್ಚರಿ ತಂದಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ವರದಿಗಳ ಹಿಂದಿನ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕಿದೆ.

ಸಾರ್ವಜನಿಕ ಪ್ರಸಾರ ಮಾಧ್ಯಮಗಳಾದ ಸ್ವೀಡಿಷ್ ಟೆಲಿವಿಷನ್ ಮತ್ತು ಸ್ವೀಡಿಷ್ ರೇಡಿಯೋಗಳು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ನಿಂದ ಪತ್ರಿಕಾ ಪ್ರಕಟಣೆಯನ್ನು ಸ್ವೀಕರಿಸಿರುವುದಾಗಿ ವರದಿ ಮಾಡಿವೆ. ಇದರಲ್ಲಿ ಯುಎಸ್ ಮೂಲದ ಮೂವರು ರಸಾಯನಶಾಸ್ತ್ರಜ್ಞರನ್ನು ಹೆಸರಿಸಲಾಗಿದೆ ಎಂದು ಅವು ಹೇಳಿವೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನೊಬೆಲ್ ಅಕಾಡೆಮಿಯ ಪತ್ರಿಕಾ ವಕ್ತಾರ ಇವಾ ನೆವೆಲಿಯಸ್, 'ಏನಾಯಿತು ಎಂದು ನಮಗೆ ತಿಳಿಯುವವರೆಗೂ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ನಾವು ಅದನ್ನು ಪರಿಶೀಲಿಸಬೇಕಾಗಿದೆ' ಎಂದು ಸುದ್ದಿಸಂಸ್ಥೆ ಎಎಫ್ಪಿಗೆ ತಿಳಿಸಿದ್ದಾರೆ.
ಸ್ವೀಡಿಷ್ ವರದಿಗಳ ಪ್ರಕಾರ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೌಂಗಿ ಬವೆಂಡಿ, ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರೂಸ್ ಮತ್ತು ನ್ಯಾನೊಕ್ರಿಸ್ಟಲ್ಸ್ ಟೆಕ್ನಾಲಜಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲೆಕ್ಸಿ ಎಕಿಮೊವ್ ನೊಬೆಲ್ ಪ್ರಶಸ್ತಿಯ ವಿಜೇತರಾಗಿದ್ದಾರೆ.
ವರದಿಗಳ ಪ್ರಕಾರ, ಈ ಮೂವರು ರಸಾಯನಶಾಸ್ತ್ರಜ್ಞರು 'ಕ್ವಾಂಟಮ್ ಡಾಟ್ಗಳ ಅನ್ವೇಷಣೆ ಮತ್ತು ಸಂಶ್ಲೇಷಣೆ'ಗಾಗಿ ಬಹುಮಾನವನ್ನು ಗೆದ್ದಿದ್ದಾರೆ.
ಪತ್ರಿಕಾ ಪ್ರಕಟಣೆ ಅಕಾಡೆಮಿಯ ವೆಬ್ ಪುಟದಲ್ಲಿ ಕಾಣುತ್ತಿಲ್ಲ ಎಂದು ಮಾಧ್ಯಮಗಳು ಹೇಳಿವೆ.
ಅಕಾಡೆಮಿಯು ಬೆಳಿಗ್ಗೆ 11:45 ಕ್ಕೆ ತನ್ನ ಘೋಷಣೆಯನ್ನು ಮಾಡಬೇಕು. ವಿಜೇತರನ್ನು ಆಯ್ಕೆ ಮಾಡಲು ಸಭೆ ಮತ್ತು ಮತ ಚಲಾವಣೆ ನಡೆಸಿದ ನಿಮಿಷಗಳ ನಂತರ ಹೆಸರುಗಳನ್ನು ಘೋಷಿಸುವುದು ರೂಢಿಯಾಗಿದೆ.
ಅಕಾಡೆಮಿಯ ನೊಬೆಲ್ ರಸಾಯನಶಾಸ್ತ್ರ ಸಮಿತಿಯ ತಜ್ಞ ಹೈನರ್ ಲಿಂಕ್, ಸೋರಿಕೆಯಂತಹ ಬೆಳವಣಿಗೆ ಕುರಿತು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.
'ಇದೀಗ ನಾನು ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ನಾವು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಹಾಗಾಗಿ ಪತ್ರಿಕಾ ಪ್ರಕಟಣೆ ಹೊರಬಿದ್ದಿದ್ದರೆ ಅದು ಖಂಡಿತವಾಗಿಯೂ ತಪ್ಪು' ಎಂದು ಲಿಂಕೆ ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications