ಇಥಿಯೋಪಿಯಾ ಪ್ರಧಾನಿಗೆ 2019ರ ನೊಬೆಲ್ ಶಾಂತಿ ಪುರಸ್ಕಾರ
ಒಸ್ಲೋ, ಅಕ್ಟೋಬರ್ 11: ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಆಯ್ಕೆಯಾಗಿದ್ದಾರೆ.
ಎರಿಟ್ರಿಯಾದೊಂದಿಗಿನ ಬಿಕ್ಕಟ್ಟನ್ನು ಸೌಹಾರ್ದದಿಂದ ಬಗೆಹರಿಸುವ ಪ್ರಯತ್ನದಲ್ಲಿ ಮಹತ್ವದ ಪಾತ್ರ ವಹಿಸಿದ್ದಕ್ಕಾಗಿ 43 ವರ್ಷ ಅಬಿ ಅಹ್ಮದ್ ಅಲಿ ಅವರಿಗೆ ಈ ಗೌರವ ಒಲಿದಿದೆ.
1998-2000ರವರೆಗೆ ಗಡಿಯಲ್ಲಿ ಇಥಿಯೋಪಿಯಾ ಮತ್ತು ಎರಿಟ್ರಿಯಾಗಳು ಸುದೀರ್ಘ ಕಾಲದಿಂದ ಯುದ್ಧ ಸಂಘರ್ಷಗಳಲ್ಲಿ ತೊಡಗಿದ್ದವು. ಹಲವು ವರ್ಷಗಳ ಮಾತುಕತೆಯ ಬಳಿಕ 2018ರ ಜುಲೈನಲ್ಲಿ ಎರಡೂ ದೇಶಗಳ ಸಂಬಂಧ ಪುನಃ ಸರಿಹೊಂದಿದೆ. ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಬಗೆಹರಿಸಿ ಶಾಂತಿ ನೆಲೆಸುವಲ್ಲಿ ಪ್ರಮುಖ ಪ್ರಯತ್ನ ನಡೆಸಿದ ಅಬಿ ಅಹ್ಮದ್ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

'ಶಾಂತಿ ಮತ್ತು ಅಂತಾರಾಷ್ಟ್ರೀಯ ಸಹಕಾರದ ಪ್ರಯತ್ನಗಳಿಗಾಗಿ ಮತ್ತು ಮುಖ್ಯವಾಗಿ ನೆರೆಯ ಎರಿಟ್ರಿಯಾ ದೇಶದೊಂದಿಗಿನ ಗಡಿ ಸಂಘರ್ಷವನ್ನು ಪರಿಹರಿಸಲು ನಿರ್ಣಾಯಕ ಕ್ರಮ ತೆಗೆದುಕೊಂಡಿರುವುದಕ್ಕಾಗಿ ಅಬಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ' ಎಂದು ನೊಬೆಲ್ ಸಮಿತಿ ಶುಕ್ರವಾರ ತಿಳಿಸಿದೆ.
2018ರ ಏಪ್ರಿಲ್ನಲ್ಲಿ ಇಥಿಯೋಪಿಯಾ ಪ್ರಧಾನಿಯಾಗಿ ಆಯ್ಕೆಯಾದ ಕೇವಲ ಆರು ತಿಂಗಳಲ್ಲಿ ಅಬಿ ಅವರು ಜೈಲಿನಲ್ಲಿದ್ದ ಎರಿಟ್ರಿಯಾದ ಕೈದಿಗಳನ್ನು ಬಿಡುಗಡೆಗೊಳಿಸಿದ್ದರು. ಜತೆಗೆ ದೇಶ ಎಸಗಿದ ಕ್ರೌರ್ಯಕ್ಕೆ ಕ್ಷಮೆ ಕೋರಿದ್ದರು. ತಮ್ಮ ಪೂರ್ವಾಧಿಕಾರಿಗಳು ಭಯೋತ್ಪಾದಕರು ಎಂದು ಗುರುತಿಸಿ ಗಡಿಪಾರು ಮಾಡಿದ್ದ ಸಶಸ್ತ್ರ ಸಂಘಟನೆಗಳನ್ನು ಸ್ವದೇಶಕ್ಕೆ ಮರಳಿ ಸ್ವಾಗತಿಸಿದ್ದರು.
ನೊಬೆಲ್ ಶಾಂತಿ ಪುರಸ್ಕೃತ ಅಬಿ ಅವರಿಗೆ $900,000 ಡಾಲರ್ ಪ್ರಶಸ್ತಿ ಮೊತ್ತ ಪಡೆದುಕೊಳ್ಳಲಿದ್ದಾರೆ. ಓಸ್ಲೋದಲ್ಲಿ ಡಿ.10ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications