ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪುರಸ್ಕಾರದ ಗೌರವ
ಸ್ಟಾಕ್ಹೋಮ್, ಅಕ್ಟೋಬರ್ 9: ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವಿಶ್ವಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮವು ಪಾತ್ರವಾಗಿದೆ ಎಂದು ನೊಬೆಲ್ ಸಮಿತಿ ಘೋಷಿಸಿದೆ.
ಜಗತ್ತಿನಾದ್ಯಂತ ಹಸಿವಿನ ಸಮಸ್ಯೆಯ ವಿರುದ್ಧದ ಹೋರಾಟದಲ್ಲಿ ನಡೆಸಿ ಪ್ರಮುಖ ಪ್ರಯತ್ನಕ್ಕಾಗಿ ಹಾಗೂ ಸಂಘರ್ಷಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ಸುಧಾರಿಸಿದ್ದಕ್ಕಾಗಿ ಮತ್ತು ಯುದ್ಧ ಮತ್ತು ಸಂಘರ್ಷದ ಪ್ರಮುಖ ಅಸ್ತ್ರವನ್ನಾಗಿ ಹಸಿವನ್ನು ಬಳಸಿಕೊಳ್ಳುವುದನ್ನು ತಡೆಯುವ ಪ್ರಯತ್ನದ ಮುಂಚೂಣಿಯ ಪಡೆಯಾಗಿ ನಿರ್ವಹಿಸಿದ ಕಾರ್ಯಕ್ಕಾಗಿ ಡಬ್ಲ್ಯೂಎಫ್ಪಿಗೆ 2020ರ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗುತ್ತಿದೆ ಎಂದು ನೊಬೆಲ್ ಅಕಾಡೆಮಿ ತಿಳಿಸಿದೆ.
ವಿಶ್ವ ಆಹಾರ ಕಾರ್ಯಕ್ರಮವು ಹಸಿವಿನ ಸಮಸ್ಯೆಯನ್ನು ನಿವಾರಿಸುವ ಮತ್ತು ಆಹಾರ ಭದ್ರತೆ ಒದಗಿಸುವ ಜಗತ್ತಿನ ಅತಿ ದೊಡ್ಡ ಮಾನವೀಯ ಸಂಸ್ಥೆಯಾಗಿದೆ. 2019ರಲ್ಲಿ ಈ ಡಬ್ಲ್ಯೂಎಫ್ಪಿ 88 ದೇಶಗಳ ಆಹಾರ ಅಭದ್ರತೆ ಮತ್ತು ಹಸಿವಿನ ಸಂತ್ರಸ್ತರಾದ ಸುಮಾರು 100 ಮಿಲಿಯನ್ ಜನರಿಗೆ ನೆರವು ನೀಡಿದೆ.

2015ರಲ್ಲಿ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಹಸಿವು ನಿವಾರಣೆ ಕೂಡ ಒಂದಾಗಿ ಸೇರ್ಪಡೆಯಾಗಿತ್ತು. ಈ ಗುರಿಯನ್ನು ತಲುಪುವ ಪ್ರಯತ್ನದಲ್ಲಿ ಡಬ್ಲ್ಯೂಎಫ್ಪಿ ವಿಶ್ವಸಂಸ್ಥೆಯ ಪ್ರಾಥಮಿಕ ಸಾಧನವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಪರಿಸ್ಥಿತಿಯು ಸಾಕಷ್ಟು ನಕಾರಾತ್ಮಕವಾಗಿದೆ. 2019ರಲ್ಲಿ 135 ಮಿಲಿಯನ್ ಮಂದಿ ತೀವ್ರ ಹಸಿವಿನಿಂದ ಬಳಲಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿಯೇ ಅತ್ಯಧಿಕ. ಇದಕ್ಕೆ ಕಾರಣ ಯುದ್ಧ ಮತ್ತು ಆಂತರಿಕ ಸಶಸ್ತ್ರ ಸಂಘರ್ಷಗಳು ಎಂದು ನೊಬೆಲ್ ಸಮಿತಿ ಹೇಳಿದೆ.
ಕೊರೊನಾ ವೈರಸ್ ಪಿಡುಗು, ಯುದ್ಧ, ಸಂಘರ್ಷ ಮುಂತಾದ ಕಾರಣಗಳಿಂದ ಜಗತ್ತಿನಾದ್ಯಂತ ಹಸಿವಿನ ಬಲಿಪಶುಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ನಿಟ್ಟಿನಲ್ಲಿ ವಿಶ್ವ ಆಹಾರ ಕಾರ್ಯಕ್ರಮ ಮಹತ್ವದ ಕಾರ್ಯ ನಡೆಸುತ್ತಿದೆ ಎಂದು ನೊಬೆಲ್ ಸಮಿತಿ ಶ್ಲಾಘಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications