Nobel Peace Prize 2023: ಇರಾನ್ ಹೋರಾಟಗಾರ್ತಿಗೆ ಜಾಗತಿಕ ಮನ್ನಣೆ!
ಜಗತ್ತೇ ಕಾಯುತ್ತಿದ್ದ ಪ್ರಶಸ್ತಿಯ ಘೋಷಣೆ ಆಗಿದೆ, 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನ ಯಾರು ಪಡೆಯುತ್ತಾರೆ ಎಂಬ ಕುತೂಹಲ ಕೊನೆಯಾಗಿದೆ. ಅಂದಹಾಗೆ ಇರಾನ್ನ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ, 2023ರ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಈ ಮೂಲಕ ನೊಬೆಲ್ ಶಾಂತಿ ಪುರಸ್ಕಾರ ಮತ್ತೊಮ್ಮೆ ಜಗತ್ತಿನ ಗಮನ ಸೆಳೆದಿದೆ.
ಇರಾನ್ನಲ್ಲಿ 22 ವರ್ಷದ ಯುವತಿ ಸಾವಿಗೆ ಸಂಬಂಧಿಸಿ ಇತ್ತೀಚೆಗೆ ಹಿಂಸಾತ್ಮಕ ಪ್ರತಿಭಟನೆ ಆರಂಭವಾಗಿತ್ತು. ಆಗ ಇರಾನ್ ಪೂರ್ತಿ ಹೋರಾಟಗಳು ಶುರುವಾಗಿದ್ದವು. ಇದೇ ನರ್ಗೀಸ್ ಮೊಹಮ್ಮದಿ ಇರಾನ್ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಈ ಕಾರಣಕ್ಕಾಗಿ ನರ್ಗೀಸ್ ಮೊಹಮ್ಮದಿ ಅವರನ್ನು ಕಂಬಿ ಹಿಂದೆ ತಳ್ಳಿದೆ ಅಲ್ಲಿನ ಸರ್ಕಾರ. ಆದ್ರೆ ಇದೀಗ 'ನೊಬೆಲ್' ಕಮಿಟಿ ಮಹತ್ವದ ನಿರ್ಧಾರ ಪ್ರಕಟಿಸಿದೆ. 'ನೊಬೆಲ್' ಪ್ರಶಸ್ತಿಯನ್ನು ವಿವಿಧ ವಿಭಾಗದಲ್ಲಿ ನೀಡಲಾಗುತ್ತೆ. ಬೇರೆ ಬೇರೆ ವಿಭಾಗದಲ್ಲಿ ನೀಡುವ ನೊಬೆಲ್ ಪ್ರಶಸ್ತಿ ಒಂದು ತೂಕವಾದ್ರೆ, ನೊಬೆಲ್ ಶಾಂತಿ ಪ್ರಶಸ್ತಿ ಗತ್ತು ಬೇರೆ ರೀತಿ ಇರುತ್ತದೆ. ಅಷ್ಟು ತೂಕದ ಪುರಸ್ಕಾರ ಇದು.

ನರ್ಗೀಸ್ ಮೊಹಮ್ಮದಿ ಬೆಂಬಲಕ್ಕೆ ಜಗತ್ತು
ಇನ್ನು ಇರಾನ್ನಲ್ಲಿ ಮಹಿಳೆಯರು ಹೋರಾಟ ಆರಂಭಿಸಿದ ನಂತರ, ಅಲ್ಲಿನ ಮಹಿಳೆಯರ ಮೇಲೆ ಪೊಲೀಸರು & ಭದ್ರತಾ ಸಿಬ್ಬಂದಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಇಡೀ ಜಗತ್ತು ಇರಾನ್ ಮಹಿಳೆಯರ ಹೋರಾಟದ ಪರವಾಗಿ ನಿಂತು ಧ್ವನಿಯಾಗಿತ್ತು. ಇದೀಗ ಇರಾನ್ ಮಹಿಳಾ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದ ನರ್ಗೀಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ 'ನೊಬೆಲ್' ಶಾಂತಿ ಪ್ರಶಸ್ತಿ ಪ್ರಕಟಿಸಿದೆ ನೊಬೆಲ್ ಕಮಿಟಿ. ಇದು ಮತ್ತೆ ಜಗತ್ತಿನ ಗಮನ ಇರಾನ್ ಮೇಲೆ ಕೇಂದ್ರೀಕರಿಸುವಂತೆ ಮಾಡಿದೆ.
BREAKING NEWS
— The Nobel Prize (@NobelPrize) October 6, 2023
The Norwegian Nobel Committee has decided to award the 2023 #NobelPeacePrize to Narges Mohammadi for her fight against the oppression of women in Iran and her fight to promote human rights and freedom for all.#NobelPrize pic.twitter.com/2fyzoYkHyf
ನೊಬೆಲ್ ಪ್ರಶಸ್ತಿಯ ಇತಿಹಾಸ ಏನು?
1901 ರಿಂದ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ. ಸಂಶೋಧಕ ಆಲ್ಫ್ರೆಡ್ ನೊಬೆಲ್ ಆಶಯಕ್ಕೆ ಅನುಗುಣವಾಗಿ ಜಗತ್ತಿನ ಪ್ರಗತಿಗೆ ಕಾರಣವಾದ ಕಾರ್ಯಕ್ಕೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷ ಬಹುಮಾನ ವಿಜೇತರನ್ನು ಅಕ್ಟೋಬರ್ 2ರ ಸೋಮವಾರದಿಂದ ಅಕ್ಟೋಬರ್ 9ರ ತನಕ ಪ್ರತಿದಿನ ಪ್ರಕಟಿಸಲಾಗುತ್ತಿದೆ. ಈ ವರ್ಷದ ನೊಬೆಲ್ ಪ್ರಶಸ್ತಿಗಳನ್ನು ಗೆಲ್ಲುವವರಿಗೆ 11 ಮಿಲಿಯನ್ ಸ್ವೀಡಿಷ್ ಕ್ರೌನ್ ಸಿಗಲಿದೆ, ಅಮೆರಿಕದ ಡಾಲರ್ನಲ್ಲಿ 9,86,000ನಷ್ಟು ಆಗುತ್ತದೆ. ಇದು ಸುಮಾರು 8 ಕೋಟಿ ರೂಪಾಯಿ ಸಮ. ವೈದ್ಯಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ ವಿಭಾಗದ ನಂತರ ಇದೀಗ ನೊಬೆಲ್ ಶಾಂತಿ ಪ್ರಶಸ್ತಿಯನ್ನ ಪ್ರಕಟಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications