ಉತ್ತರ ಕೊರಿಯಾದಿಂದ ಯಶಸ್ವೀ 'ಅಣ್ವಸ್ತ್ರ ಪರೀಕ್ಷೆ', ಬೆಚ್ಚಿಬಿದ್ದ ವಿಶ್ವ
ಬೆಂಗಳೂರು, ಸೆಪ್ಟಂಬರ್ 3: ಉತ್ತರ ಕೊರಿಯಾ ಆರನೇ ಬಾರಿಗೆ ಅಣ್ವಸ್ತ್ರ ಪರೀಕ್ಷೆ ನಡೆಸಿದ್ದು ಜಗತ್ತನ್ನೇ ತಲ್ಲಣದಲ್ಲಿ ದೂಡಿದೆ. ಈ ಬಾಂಬ್ ಹಿರೋಶೀಮಾ ಮತ್ತು ನಾಗಸಾಕಿ ಮೇಲೆ ಹಾಕಿದ ಬಾಂಬ್ ಗಿಂತ 5 ಪಟ್ಟು ಹೆಚ್ಚಿನ ತೀವ್ರತೆಯ ಬಾಂಬ್ ಎಂದು ಉತ್ತರ ಕೊರಿಯಾ ಹೇಳಿದೆ.
'ಹೈಡ್ರೋಜನ್ ಬಾಂಬ'ನ್ನು ಉತ್ತರ ಕೊರಿಯಾ ಪರೀಕ್ಷೆಗೊಳಪಡಿಸಿದ್ದು, 6ನೇ ಬಾರಿಯ 'ಅಣ್ವಸ್ತ್ರ ಪರೀಕ್ಷೆ ಯಶಸ್ವಿಯಾಗಿದೆ' ಎಂದು ಅಲ್ಲಿನ ಸರಕಾರಿ ಮಾಧ್ಯಮಗಳು ವರದಿ ಮಾಡಿವೆ. ಹೈಡ್ರೋಜನ್ ಬಾಂಬ್ ಅಣು ಬಾಂಬಿನ ಮತ್ತೊಂದು ವಿಧವಾಗಿದೆ.
ಅಣ್ವಸ್ತ್ರ ಪರೀಕ್ಷೆಯ ಪರಿಣಾಮ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ದಾಖಲಾಗಿದ್ದನ್ನು ಅಮೆರಿಕಾದ ಭೂಗರ್ಭ ಇಲಾಖೆ (ಯುಎಸ್'ಜಿಎಸ್) ಖಚಿತ ಪಡಿಸಿತ್ತು. ಈ ಭೂಕಂಪದ ಬೆನ್ನಿಗೆ ಜಪಾನ್ ಮತ್ತು ದಕ್ಷಿಣ ಕೊರಿಯಾ ದೇಶಗಳು ಅಣ್ವಸ್ತ್ರ ಪರೀಕ್ಷೆಯ ಅನುಮಾನ ವ್ಯಕ್ತಪಡಿಸಿದ್ದವು. ಇದೀಗ ಉತ್ತರ ಕೊರಿಯಾ ಅಣ್ವಸ್ತ್ರ ಪರೀಕ್ಷೆಯನ್ನು ಖಚಿತಪಡಿಸಿದೆ.

ಖಂಡಾಂತರ ಕ್ಷಿಪಣಿಗೆ ಅಣ್ವಸ್ತ್ರ ಜೋಡಣೆ
ಈ ಅಣ್ವಸ್ತ್ರವನ್ನು ಖಂಡಾಂತರ ಕ್ಷಿಪಣಿಗೂ ಜೋಡಿಸಲು ಸಾಧ್ಯವಿದೆ ಎಂದು ಉತ್ತರ ಕೊರಿಯಾ ಪ್ರತಿಪಾದಿಸಿದ್ದು ಪಕ್ಕದ ದಕ್ಷಿಣ ಕೊರಿಯಾ ಮತ್ತು ಜಪಾನ್ ದೇಶಗಳನ್ನು ನಡುಗುವಂತೆ ಮಾಡಿದೆ. ಇತ್ತೀಚೆಗಷ್ಟೇ ಜಪಾನ್ ಕೊರಿಯಾದ ಮೇಲಿಂದ ಉತ್ತರ ಕೊರಿಯಾ ಕ್ಷಿಪಣಿ ಉಡಾಯಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ವಿಶ್ವಸಂಸ್ಥೆ ಒಪ್ಪಂದ ಉಲ್ಲಂಘಿಸಿದ ಕೊರಿಯಾ
ವಿಶ್ವಸಂಸ್ಥೆಯ ಒಪ್ಪಂದಗಳನ್ನು ಉಲ್ಲಂಘಿಸಿ ಉತ್ತರ ಕೊರಿಯಾ ಬಾಂಬ್ ಪರೀಕ್ಷೆ ನಡೆಸಿದೆ. ಈ ಪರೀಕ್ಷೆಯೊಂದಿಗೆ ಅಮೆರಿಕಾ ಮತ್ತು ಉತ್ತರ ಕೊರಿಯಾ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿದೆ.

ಹಲವು ದೇಶಗಳಿಂದ ಖಂಡನೆ
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಉನ್ ಜಾಂಗ್ ನಡೆಗೆ ಪಕ್ಕದ ಜಪಾನ್ ಮತ್ತು ದಕ್ಷಿಣ ಕೊರಿಯಾ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲದೆ ತುರ್ತಾಗಿ ವಿಶ್ವಸಂಸ್ಥೆ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯಿಸಿವೆ.
ಇನ್ನು ಚೀನಾ, ಫ್ರಾನ್ಸ್, ರಷ್ಯಾ, ನ್ಯೂಜಿಲ್ಯಾಂಡ್ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ಹಲವು ದೇಶಗಳು ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆಯನ್ನು ಕಟುವಾಗಿ ಖಂಡಿಸಿವೆ.

ಹಿಂದಿನ ಐದು ಪರೀಕ್ಷೆಗಳು
ಅಕ್ಟೋಬರ್ 2006 - ಮೊದಲ ಅಣ್ವಸ್ತ್ರ ಪರೀಕ್ಷೆ ನಡೆದಿತ್ತು. ಅವತ್ತು 4.2 ತೀವ್ರತೆಯ ಭೂಕಂಪ ನಡೆದಿತ್ತು.
ಇದಾದ ನಂತರ 2009ರ ಮೇ ನಲ್ಲಿ ಅಣ್ವಸ್ತ್ರ ಪರೀಕ್ಷೆ ನಡೆದಾಗ 4.7 ತೀವ್ರತೆಯ ಭೂಕಂಪ, 2013ರ ಫೆಬ್ರವರಿಯಲ್ಲಿ 4.7 ಮತ್ತು 5.2ರ ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದಾದ ನಂತರ 2016 ಜನವರಿ ಮತ್ತು ಸೆಪ್ಟಂಬರ್ ನಲ್ಲಿ ಅಣ್ವಸ್ತ್ರ ಪರೀಕ್ಷೆ ನಡೆದಾಗ ಕ್ರಮವಾಗಿ 5.1 ಮತ್ತು 5.3 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಇದೀಗ ಆರನೇ ಬಾರಿಗೆ ಪರೀಕ್ಷೆ ನಡೆಸಲಾಗಿದ್ದು 6.3 ತೀವ್ರತೆಯ ಭೂಕಂಪ ಸಂಭವಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications