ಉತ್ತರ ಕೊರಿಯಾದ ಗಡಿಯಲ್ಲಿ ಕಾಣಿಸಿಕೊಂಡ ಸೋಂಕು, ಲಾಕ್ಡೌನ್ ಜಾರಿ
ಕಯಿಸಾಂಗ್, ಜುಲೈ 26: ಉತ್ತರ ಹಾಗೂ ದಕ್ಷಿಣ ಕೊರಿಯಾದ ಗಡಿಭಾಗದಲ್ಲಿರುವ ಕಯಿಸಾಂಗ್(Kaesong) ಸಮೀಪ ಮತ್ತೊಮ್ಮೆ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದು, ತಕ್ಷಣವೇ ಆ ಪ್ರದೇಶದಲ್ಲಿ ಲಾಕ್ಡೌನ್ ಜಾರಿಗೊಳಿಸಲಾಗಿದೆ.
Recommended Video
ಈ ನಗರದಲ್ಲಿ ಶುಕ್ರವಾರದಂದು ವ್ಯಕ್ತಿಯೊಬ್ಬನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ರೋಗದ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸರಿ ಸುಮಾರು ಮೂರು ವರ್ಷಗಳ ಹಿಂದೆ ದಕ್ಷಿಣ ಕೊರಿಯಾಕ್ಕೆ ಪರಾರಿಯಾಗಿದ್ದ ಈ ವ್ಯಕ್ತಿ ಅಕ್ರಮವಾಗಿ ಗಡಿ ದಾಟಿ ಈ ಭಾಗಕ್ಕೆ ಬಂದಿದ್ದಾನೆ ಎಂದು ತಿಳಿದು ಬಂದಿದೆ. ಈತನಿಗೆ ಇರುವ ಸೋಂಕು ದೃಢಪಟ್ಟರೆ, ಉತ್ತರ ಕೊರಿಯಾದ ಮೊದಲ ದೃಢಪಟ್ಟ ಪ್ರಕರಣ ಎಂದು ಘೋಷಿಸಬೇಕಾಗುತ್ತದೆ ಎಂದು ಉತ್ತರ ಕೊರಿಯಾದ ಮುಖಂಡರ ಹೇಳಿಕೆಯನ್ನು Korean Central News Agency ಕೆಸಿಎನ್ಎ ಉಲ್ಲೇಖಿಸಿದೆ.

ಚೀನಾದ ವುಹಾನ್ ಪ್ರಾಂತ್ಯದಿಂದ ಕೊರೊನಾವೈರಸ್ ಹರಡುತ್ತಿರುವ ಸುದ್ದಿ ಬರುತ್ತಿದ್ದಂತೆ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ಅವರು ತಮ್ಮ ದೇಶದ ಗಡಿ ಭಾಗವನ್ನು ಬಂದ್ ಮಾಡಿಸಿದ್ದರು. ಜನವರಿ ತಿಂಗಳಿನಿಂದ ಕಠಿಣ ಕ್ರಮಗಳನ್ನು ಕೈಗೊಂಡಿದ್ದರಿಂದ ದೇಶದೊಳಗೆ ಸೋಂಕು ಪ್ರವೇಶಿಸಿಲ್ಲ, ಹರಡಿಲ್ಲ ಎಂದು ಉತ್ತರ ಕೊರಿಯಾ ಹೇಳಿಕೊಂಡಿದೆ.
ಅಂತಾರಾಷ್ಟ್ರೀಯ ವಿಮಾನಯಾನ, ರೈಲುಮಾರ್ಗ ಬಂದ್ ಮಾಡಲಾಗಿದೆ. ಶಾಲೆ, ಕಾಲೇಜು, ಕಚೇರಿ ಇನ್ನೂ ಆರಂಭಗೊಂಡಿಲ್ಲ, ವಿದೇಶಿ ಪ್ರವಾಸಿಗರು ಕ್ವಾರಂಟೈನ್ ನಲ್ಲಿದ್ದಾರೆ
#UPDATE North Korean authorities impose a lockdown on the border city of Kaesong after discovering their first 'suspected' COVID19 case: AFP news agency https://t.co/J0hhMeoJ98
— ANI (@ANI) July 26, 2020
ಈ ನಡುವೆ ಉತ್ತರ ಕೊರಿಯಾದ ವಿಜ್ಞಾನ ಸಂಶೋಧನಾ ಸಮಿತಿಯು ಕೊರೊನಾವೈರಸ್ ತಡೆಗಟ್ಟಲು ಲಸಿಕೆ ಅಭಿವೃದ್ಧಿಪಡಿಸುತ್ತಿರುವುದಾಗಿ ಘೋಷಿಸಿತ್ತು. ಸದ್ಯ ಈ ಲಸಿಕೆಯು ಕ್ಲಿನಿಕಲ್ ಟ್ರಯಲ್ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಪಕ್ಕದ ದೇಶ ದಕ್ಷಿಣ ಕೊರಿಯಾದಲ್ಲಿ 14,150 ಪ್ರಕರಣಗಳಿದ್ದು, 298 ಮಂದಿ ಮೃತಪಟ್ಟಿದ್ದಾರೆ. ವಿಶ್ವದಲ್ಲಿ 16,202,387 ಕೊವಿಡ್ 19 ಪ್ರಕರಣಗಳಿದ್ದು,648,445 ಮಂದಿ ಮೃತರಾಗಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications