ನಾರ್ವೆ ಪ್ರಧಾನಿಗೆ ವಿಧಿಸಿದ 1.71 ಲಕ್ಷ ರೂ. ದಂಡದ ಹಿಂದಿನ ಕುತೂಹಲಕಾರಿ ಕಾರಣ?
ನವದೆಹಲಿ, ಏಪ್ರಿಲ್ 11: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಸರ್ಕಾರಗಳೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುತ್ತವೆ. ಆದರೆ ಈ ಸರ್ಕಾರವನ್ನು ನಡೆಸುವ ಜನಪ್ರತಿನಿಧಿಗಳೇ ಈ ನಿಯಮಗಳನ್ನು ಪಾಲಿಸುವುದನ್ನು ಮರೆತು ಬಿಡುತ್ತಾರೆ. ಹೀಗೆ ಕೊವಿಡ್-19 ಶಿಷ್ಟಾಚಾರವನ್ನು ತೊರೆದ ಪ್ರಧಾನಮಂತ್ರಿಗೆ ಈ ದೇಶದಲ್ಲಿ ದುಬಾರಿ ದಂಡ ವಿಧಿಸಲಾಗಿದೆ.
ಕೊರೊನಾವೈರಸ್ ಆತಂಕದ ನಡುವೆಯೂ ಕುಟುಂಬ ಸದಸ್ಯರೊಬ್ಬರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ನಾರ್ವೆ ಪ್ರಧಾನಮಂತ್ರಿ ಎರ್ನಾ ಸೋಲ್ಬರ್ಗ್ ಅವರಿಗೆ 2300 ಡಾಲರ್ (171867 ರೂಪಾಯಿ) ದಂಡ ವಿಧಿಸಲಾಗಿದೆ.
ಕಳೆದ ಶುಕ್ರವಾರ ಎರ್ನಾ ಸೋಲ್ಬರ್ಗ್ ಆಯೋಜಿಸಿದ ಭೋಜನ ಕೂಟದಲ್ಲಿ ಸರ್ಕಾರ ನಿಗದಿಗೊಳಿಸಿದ ಮಿತಿಗಿಂತಲೂ ಹೆಚ್ಚು ಜನರು ಭಾಗವಹಿಸಿದ್ದರು. ಈ ವೇಳೆ ಸರ್ಕಾರದ ನಿಯಮಗಳ ಸ್ಪಷ್ಟ ಉಲ್ಲಂಘನೆ ಆಗಿರುವುದು ಕಂಡು ಬಂದಿದೆ.
ನಾರ್ವೇನಲ್ಲಿ ಲಸಿಕೆ ಪಡೆದ 23 ವಯೋವೃದ್ಧರ ಸಾವು; ಲಸಿಕೆ ಅಡ್ಡಪರಿಣಾಮ ಶಂಕೆ
"ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಎಂದ ಮೇಲೆ ಕಾನೂನಿನ ಮುಂದೆ ಎಲ್ಲರೂ ಒಂದೇ" ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅಲ್ಲದೇ, ಎರ್ನಾ ಸೋಲ್ಬರ್ಗ್ ದೇಶದ ಅಗ್ರಗಣ್ಯ ಚುನಾಯಿತ ಪ್ರತಿನಿಧಿಯಾಗಿದ್ದು, ಸಾಂಕ್ರಾಮಿಕ ಪಿಡುಗನ್ನು ಎದುರಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಹಂತದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರಗಳಲ್ಲಿ ಸೋಲ್ಬರ್ಗ್ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.

ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ನಾರ್ವೆ ಪ್ರಧಾನಮಂತ್ರಿ ಸೋಲ್ಬರ್ಗ್ ಅವರು ಕೊವಿಡ್-19 ಶಿಷ್ಟಾಚಾರ ಮತ್ತು ಮಾರ್ಗಸೂಚಿಯನ್ನು ಉಲ್ಲಂಘಿಸಿ ತಮ್ಮ 60ನೇ ಹುಟ್ಟಹಬ್ಬವನ್ನು ಕುಟುಂಬದ ಸದಸ್ಯರೊಂದಿಗೆ ಆಚರಿಸಿಕೊಂಡಿದ್ದರು ಎಂದು ಎನ್ಆರ್ ಕೆ ಸುದ್ದಿ ಸಂಸ್ಥೆ ವರದಿ ಮಾಡಿತ್ತು. ದೇಶದಲ್ಲಿ ಕೊವಿಡ್-19 ಶಿಷ್ಟಾಚಾರದ ಪ್ರಕಾರ, ಖಾಸಗಿ ಮತ್ತು ಸರ್ಕಾರಿ ಕೂಟಗಳಲ್ಲಿ 10ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆದರೆ ಫೆಬ್ರವರಿ 25ರಂದು ನಡೆದ ಭೋಜನ ಕೂಟದಲ್ಲಿ ಪ್ರಧಾನಿ ಕುಟುಂಬ 13 ಮಂದಿ ಸದಸ್ಯರು ಭಾಗವಹಿಸಿದ್ದರು.
ದೇಶದ ಜನತೆ ಕ್ಷಮಾಪಣೆ ಕೋರಿದ ಪ್ರಧಾನಿ:
ಮಾರ್ಚ್ ತಿಂಗಳಿನಲ್ಲಿ ನಡೆದ ಭೋಜನ ಕೂಟದಲ್ಲಿ ಸ್ವತಃ ಪ್ರಧಾನಮಂತ್ರಿ ಎರ್ನಾ ಸೋಲ್ಬರ್ಗ್ ಅವರು ಭಾಗವಹಿಸಿರಲಿಲ್ಲ. ಕಣ್ಣಿನ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ತೆರಳಿದ್ದರು. ಆದರೆ ಭೋಜನ ಕೂಟವನ್ನು ಆಯೋಜಿಸಿದ ಹಿನ್ನೆಲೆ ಕೊರೊನಾವೈರಸ್ ನಿಯಮಗಳ ಉಲ್ಲಂಘನೆಗೆ ಪ್ರಧಾನಿಯವರೇ ಹೊಣೆಯಾಗುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು, ಕೊರೊನಾವೈರಸ್ ಶಿಷ್ಟಾಚಾರ ಉಲ್ಲಂಘಿಸಿದ್ದಕ್ಕಾಗಿ ದೇಶದ ಪ್ರಜೆಗಳ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಎರ್ನಾ ಸೋಲ್ಬರ್ಗ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications