Nobel Prize: ಸಾಹಿತ್ಯ ವಿಭಾಗದ ‘ನೊಬೆಲ್’ ಪ್ರಶಸ್ತಿ ಘೋಷಣೆ
ಜಗತ್ತಿನ ಶ್ರೀಮಂತ ಪ್ರಶಸ್ತಿ ಎಂಬ ಹೆಗ್ಗಳಿಕೆ ಪಡೆದಿರುವ 'ನೊಬೆಲ್' ಬಹುಮಾನ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ವೈದ್ಯಶಾಸ್ತ್ರ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗದ ಪ್ರಶಸ್ತಿ ಘೋಷಣೆ ಆಗಿದ್ದು, ಈಗ ಸಾಹಿತ್ಯ ವಿಭಾಗದ ಪ್ರಶಸ್ತಿ ಘೋಷಿಸಲಾಗಿದೆ. ಹಾಗಾದರೆ ಈ ಬಾರಿಯ ಸಾಹಿತ್ಯ ವಿಭಾಗದ 'ನೊಬೆಲ್' ಪ್ರಶಸ್ತಿ ಪಡೆದಿದ್ದು ಯಾರು?
1901 ರಿಂದ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ. ಸಂಶೋಧಕ ಆಲ್ಫ್ರೆಡ್ ನೊಬೆಲ್ ಆಶಯಕ್ಕೆ ಅನುಗುಣವಾಗಿ ಜಗತ್ತಿನ ಪ್ರಗತಿಗೆ ಕಾರಣವಾದ ಕಾರ್ಯಕ್ಕೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷ ಬಹುಮಾನ ವಿಜೇತರನ್ನು ಅಕ್ಟೋಬರ್ 2ರ ಸೋಮವಾರದಿಂದ ಅಕ್ಟೋಬರ್ 9ರ ತನಕ ಪ್ರತಿದಿನ ಪ್ರಕಟಿಸಲಾಗುತ್ತಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಗಳನ್ನು ಗೆಲ್ಲುವವರಿಗೆ 11 ಮಿಲಿಯನ್ ಸ್ವೀಡಿಷ್ ಕ್ರೌನ್ ಸಿಗಲಿದೆ, ಅಮೆರಿಕದ ಡಾಲರ್ನಲ್ಲಿ 9,86,000ನಷ್ಟು ಆಗುತ್ತದೆ. ಇದು ಹತ್ತಿರ ಹತ್ತಿರ ಸುಮಾರು 8 ಕೋಟಿಗೆ ಸಮವಾಗಿದೆ. ವೈದ್ಯಶಾಸ್ತ್ರ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗದ ಬಳಿಕ ಈಗ ಸಾಹಿತ್ಯ ವಿಭಾಗದಲ್ಲಿನ ಪ್ರಶಸ್ತಿ ಪ್ರಕಟವಾಗಿದೆ.
ಯಾರಿಗೆ ಸಿಕ್ಕಿದೆ ಸಾಹಿತ್ಯದ 'ನೊಬೆಲ್'?
ಅಂದಹಾಗೆ ಈ ಬಾರಿ 'ನೊಬೆಲ್' ಸಾಹಿತ್ಯ ವಿಭಾಗದ ಪ್ರಶಸ್ತಿ ನಾರ್ವೆ ಮೂಲದ ಸಾಹಿತಿ ಜಾನ್ ಫೊಸ್ಸೆ ಅವರಿಗೆ ಸಿಕ್ಕಿದೆ. ಸಾಹಿತ್ಯ ಲೋಕದಲ್ಲಿ ಸಾಕಷ್ಟು ಹೆಸರು ಗಳಿಸಿದ್ದ ಜಾನ್ ಫೊಸ್ಸೆ ಅವರಿಗೆ 'ನೊಬೆಲ್' ಸಾಹಿತ್ಯ ವಿಭಾಗದ ಪ್ರಶಸ್ತಿ ಸಿಕ್ಕಿರುವುದು ಸಾಕಷ್ಟು ಸಂತಸ ತರಿಸಿದೆ. 2023ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಪಡೆದಿದ್ದರು. ಹಾಗೇ ವೈದ್ಯಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ 'ಕೊರೊನಾ' ಲಸಿಕೆ ಕಂಡುಹಿಡಿಯಲು ಸಹಾಯ ಮಾಡಿದ್ದ ಕ್ಯಾಟಲಿನ್ ಕಾರಿಕೋ ಹಾಗೂ ಡ್ರೂ ವೈಸ್ಮನ್ ಅವರಿಗೆ ಸಿಕ್ಕಿತ್ತು. ಇದೀಗ ಸಾಹಿತ್ಯ ವಿಭಾಗದ ಪ್ರಶಸ್ತಿ ಕೂಡ ಪ್ರಕಟವಾಗಿದೆ.
ಸಂಶೋಧನಾ ಕ್ಷೇತ್ರದ ಆಸ್ಕರ್ ಅವಾರ್ಡ್ 'ನೊಬೆಲ್ ಪ್ರಶಸ್ತಿ'ಗೆ ಸಾಹಿತ್ಯ ವಿಭಾಗದ ಸಾಧಕ ಮುತ್ತಿಟ್ಟಿದ್ದಾರೆ. ಅದರಲ್ಲೂ ಈ ಬಾರಿಯ 'ನೊಬೆಲ್' ಬಹುಮಾನ 1 ಮಿಲಿಯನ್ ಸ್ವೀಡಿಷ್ ಕ್ರೌನ್ ಹೆಚ್ಚಾಗಿ ಸಿಗಲಿದೆ. ಈ ಮೂಲಕ ಸಂಶೋಧಕರಿಗೆ ಮತ್ತಷ್ಟು ಸಹಾಯ ಮಾಡಲಿದೆ. ಈ ರೀತಿ ಇನ್ನೂ 4 ದಿನ ಕಾಲ ವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ರೀತಿ ನೊಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗುತ್ತದೆ. ಹೀಗಾಗಿ ಮುಂದೆ ಯಾರೆಲ್ಲಾ ಪ್ರತಿಷ್ಠಿತ 'ನೊಬೆಲ್' ಪ್ರಶಸ್ತಿಯನ್ನು ಪಡೆಯಲಿದ್ದಾರೆ? ಎಂಬ ಕುತೂಹಲ ಕಾಡುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications